ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಛೇ.. ಪಾದರಾಯನಪುರದ ಕಿಡಿಗೇಡಿಗಳನ್ನು ಹಿಡಿದ ಪೊಲೀಸರಿಗೆ ಇದೆಂಥಾ ಶಿಕ್ಷೆ!

|
Google Oneindia Kannada News

ಬೆಂಗಳೂರು, ಏಪ್ರಿಲ್ 25: ಬೆಂಗಳೂರಿನ ಪಾದರಾಯನಪುರದಲ್ಲಿ ಕಳೆದ ಭಾನುವಾರ ರಾತ್ರಿ ಗದ್ದಲದ ವಾತಾವರಣ ಉಂಟಾಗಿತ್ತು. ಕೊರೊನಾ ವಾರಿಯರ್ಸ್ ಕರ್ತವ್ಯಕ್ಕೆ ಪಾದರಾಯನಪುರದ ಪುಂಡರು ಅಡ್ಡಿ ಪಡಿಸಿದ್ದರು. ಕ್ವಾರಂಟೈನ್ ಸಲುವಾಗಿ ಪಾದರಾಯನಪುರದ ಶಂಕಿತರನ್ನು ಶಿಫ್ಟ್ ಮಾಡಲು ಮುಂದಾದಾಗ ಆರೋಗ್ಯ ಕಾರ್ಯಕರ್ತರ ಮೇಲೆ ಕೆಲ ಯುವಕರು ಹಲ್ಲೆಗೆ ಯತ್ನಿಸಿದ್ದರು.

ಈ ಪ್ರಕರಣ ಸಂಬಂಧ 119 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಹಿಡಿಯಲು ಹೋಗಿದ್ದ ಪೊಲೀಸರಿಗೆ ಇದೀಗ ಪ್ರಾಣ ಭಯ ಉಂಟಾಗಿದೆ. ಯಾಕಂದ್ರೆ, 119 ಆರೋಪಿಗಳ ಪೈಕಿ 5 ಮಂದಿಗೆ ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಹೀಗಾಗಿ, ಆರೋಪಿಗಳನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ 186 ಪೊಲೀಸ್ ಸಿಬ್ಬಂದಿಯನ್ನು ಇದೀಗ ಹೋಂ ಕ್ವಾರೆಂಟೈನ್ ಮಾಡಲಾಗಿದೆ.

ಐಐಟಿ ಆವಿಷ್ಕಾರ: ಐದೇ ಸೆಕೆಂಡ್‌ಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಬಹುದು ಐಐಟಿ ಆವಿಷ್ಕಾರ: ಐದೇ ಸೆಕೆಂಡ್‌ಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಬಹುದು

ಎಲ್ಲರಿಗೂ ಹೋಂ ಕ್ವಾರಂಟೈನ್

ಎಲ್ಲರಿಗೂ ಹೋಂ ಕ್ವಾರಂಟೈನ್

ಪಾದರಾಯನಪುರದ ಆರೋಪಿಗಳನ್ನು ಹಿಡಿಯಲು ಕೇಂದ್ರ ಹಾಗೂ ಪಶ್ಚಿಮ ವಿಭಾಗದ ಒಟ್ಟು 186 ಪೊಲೀಸರು ಭಾಗಿಯಾಗಿದ್ದರು. ಇಂದು ಅವರೆಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಹೋಂ ಕ್ವಾರಂಟೈನ್ ಮಾಡಲಾಗಿದೆ. ಪಾದರಾಯನಪುರದ ಪುಂಡರನ್ನು ಬಂಧಿಸಿದ್ದಕ್ಕೆ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ ಸಿಕ್ಕಂತಾಗಿದೆ.

 ಕೋವಿಡ್-19 ಪರೀಕ್ಷೆ

ಕೋವಿಡ್-19 ಪರೀಕ್ಷೆ

186 ಪೊಲೀಸ್ ಸಿಬ್ಬಂದಿಯನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಅವಶ್ಯಕತೆ ಇದ್ದಲ್ಲಿ ಕೆಲ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರಿಗೂ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತದೆ.

ಪಾದರಾಯನಪುರ ಗಲಭೆ; ಸರ್ಕಾರಕ್ಕೆ ಹಲವು ಪ್ರಶ್ನೆ ಕೇಳಿದ ಹೈಕೋರ್ಟ್ಪಾದರಾಯನಪುರ ಗಲಭೆ; ಸರ್ಕಾರಕ್ಕೆ ಹಲವು ಪ್ರಶ್ನೆ ಕೇಳಿದ ಹೈಕೋರ್ಟ್

 ಪೊಲೀಸ್ ಸಿಬ್ಬಂದಿ ಬೇಸರ

ಪೊಲೀಸ್ ಸಿಬ್ಬಂದಿ ಬೇಸರ

ಪಾದರಾಯನಪುರದ ಕಿಡಿಗೇಡಿಗಳ ಪತ್ತೆ ಕಾರ್ಯದ ವೇಳೆ ನಿಯೋಜನೆಗೊಂಡಿದ್ದ ಸಿಬ್ಬಂದಿಗೆ ಕೋವಿಡ್-19 ವೈದ್ಯರು ಅರಿವು ಮೂಡಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ತರಬೇತಿ ಪಡೆದು ಪಿಪಿಇ ಕಿಟ್ ಹೊಂದಿದ್ದ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸದೆ, ಬರೀ ಸ್ಯಾನಿಟೈಸರ್, ಮಾಸ್ಕ್ ಮತ್ತು ಗ್ಲೌಸ್ ಕೊಟ್ಟು ಫೀಲ್ಡ್ ಗೆ ಇಳಿಸಿದ್ದರು ಅಂತ ಸರ್ಕಾರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಪೊಲೀಸ್ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ.

ಪಾದರಾಯನಪುರ ದಾಂಧಲೆ: ಪೊಲೀಸರಿಗೆ ಫ್ರೀ ಹ್ಯಾಂಡ್ ಘೋಷಿಸಿದ ಸಿಎಂಪಾದರಾಯನಪುರ ದಾಂಧಲೆ: ಪೊಲೀಸರಿಗೆ ಫ್ರೀ ಹ್ಯಾಂಡ್ ಘೋಷಿಸಿದ ಸಿಎಂ

ಆರೋಪಿಗಳ ವಿಚಾರಣೆ

ಆರೋಪಿಗಳ ವಿಚಾರಣೆ

ಪಾದರಾಯನಪುರದ ಗಲಾಟೆಗೆ ಕಾರಣವಾದ 83 ಆರೋಪಿಗಳನ್ನು ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ 2 ಗಂಟೆಗಳ ಕಾಲ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಆಡುಗೋಡಿಯ ಮಂಗಳ ಕಲ್ಯಾಣ ಮಂಟಪದಲ್ಲಿ ಆರೋಪಿಗಳನ್ನು ಇರಿಸಲಾಗಿತ್ತು.

English summary
Padarayanapura: 186 Police who involved in arresting 119 accused are sent for Home quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X