ಕನ್ನಡ ಮರೆತ ಈ ಗಣ್ಯರಿಗೆ ಕನ್ನಡ ಸಮ್ಮೇಳನದ ಆಹ್ವಾನವೇಕೆ?
ಸಿನಿಮಾ ತಾರೆಗಳಾದ ದೀಪಿಕಾ, ಐಶ್ವರ್ಯ ಹಾಗೂ ಇನ್ಫಿ ಮೂರ್ತಿಗೆ ವಿಶ್ವ ಕನ್ನಡ ಸಮ್ಮೇಳನಕ್ಕೆ ಆಹ್ವಾನ ಬೇಡ ಎಂದ ಸಾಹಿತಿಗಳು, ಕನ್ನಡ ಹೋರಾಟಗಾರರು. ಕನ್ನಡವನ್ನು ಮಾತನಾಡದ, ಕನ್ನಡ ಪ್ರೋತ್ಸಾಹಿಸದ ನಟಿಯರಿಗೆ ಹಾಗೂ ಮೂರ್ತಿಯವರಿಗೆ ಆಹ್ವಾನ ಬೇಡವೆಂ
ಬೆಂಗಳೂರು, ಜುಲೈ 19: ಇದೇ ವರ್ಷ ನವೆಂಬರ್- ಡಿಸೆಂಬರ್ ನಲ್ಲಿ ದಾವಣಗೆರೆಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನಕ್ಕೆ ಬಾಲಿವುಡ್ ತಾರೆಯರಾದ ಐಶ್ವರ್ಯ ರೈ, ದೀಪಿಕಾ ಪಡುಕೋಣೆ ಹಾಗೂ ಇನ್ಫೋಸಿಸ್ ನ ಸಹ- ಸಂಸ್ಥಾಪಕ ನಾರಾಯಣ ಮೂರ್ತಿಯವರಿಗೆ ಆಹ್ವಾನ ನೀಡದಂತೆ ಕನ್ನಡದ ಸಾಹಿತಿಗಳು ಹಾಗೂ ಹೋರಾಟಗರರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.
ತಮ್ಮ ಕ್ಷೇತ್ರಗಳಲ್ಲಿ ಈ ಮೂವರೂ ಗಣನೀಯ ಸಾಧನೆ ಮಾಡಿದ್ದರೂ, ಕನ್ನಡದ ಬಗ್ಗೆ ಸೌಜನ್ಯವಿಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ, ಇಂಥವರನ್ನು ವಿಶ್ವ ಕನ್ನಡ ಸಮ್ಮೇಳನಕ್ಕೆ ಆಹ್ವಾನಿಸುವುದು ಸರಿಯಲ್ಲ ಎಂದು ಸಾಹಿತಿಗಳು, ಲೇಖಕರು, ಕವಿಗಳು ಹಾಗೂ ಕನ್ನಡ ಹೋರಾಟಗರರ ಪ್ರತಿನಿಧಿಗಳಿದ್ದ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಇತ್ತೀಚೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ಕನ್ನಡ ಸಮ್ಮೇಳನದ ತಯಾರಿಗಾಗಿ ಸಭೆಯೊಂದನ್ನು ನಡೆಸಿದ್ದರು. ಈ ಸಭೆಗೆ, ಸಲಹೆಗಾರರನ್ನಾಗಿ ಇನ್ಫೋಸಿಸ್ ನಾರಾಯಣ ಮೂರ್ತಿಯವರನ್ನು ಆಹ್ವಾನಿಸಲಾಗಿತ್ತು.
ಇದರ ಬೆನ್ನಲ್ಲೇ ಈ ಅಸಮಾಧಾನ ಭುಗಿಲೆದ್ದಿದೆ. ಕನ್ನಡ ಪರವಾಗಿ ಕೆಲಸ ಮಾಡಿ ಎಂದೂ ಗುರುತಿಸಿಕೊಳ್ಳದ, ಕನಿ ಅವಕಾಶವಿರುವಂಥ ಯಾವುದೇ ಸಂದರ್ಭಗಳಲ್ಲಿ ಕನ್ನಡ ಮಾತನಾಡದೇ ಇಂಗ್ಲೀಷ್ ನಲ್ಲೇ ಮಾತನಾಡುವ ಈ ಗಣ್ಯರಿಗೆ ಕನ್ನಡ ಸಮ್ಮೇಳನಕ್ಕೆ ಆಹ್ವಾನಿಸುವ ಔಚಿತ್ಯವಿಲ್ಲ ಎಂದು ಕನ್ನಡ ಸಂಘಟನೆಗಳು ತಾಕೀತು ಮಾಡಿವೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications