'ಪಾಕ್' ಘೋಷಣೆ; ವಿಚಾರಣೆ ವೇಳೆ ಬಿಕ್ಕಳಿಸಿ ಅತ್ತ ಅಮೂಲ್ಯ ಲಿಯೋನಾ
ಬೆಂಗಳೂರು, ಫೆಬ್ರವರಿ 26: ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದಕ್ಕೆ ಬಂಧಿತರಾಗಿರುವ ಅಮೂಲ್ಯ ಲಿಯೋನ್ರನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ. ಪಶ್ಚಿಮ ವಿಭಾಗದ ಬಸವೇಶ್ವರ ನಗರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
Recommended Video
ಈ ವೇಳೆ ಅಮೂಲ್ಯ ಲಿಯೋನಾಳ ಬಳಿ ಪೊಲೀಸರು ಹತ್ಯೆಯಾದ ಗೌರಿ ಲಂಕೇಶ್ ಹೆಸರು ಪ್ರಸ್ತಾಪ ಮಾಡಿದಾಗ, ಬಿಕ್ಕಳಿಸಿ ಅತ್ತಿದ್ದಾಳೆ ಎಂದು ತಿಳಿದು ಬಂದಿದೆ. ಅಮೂಲ್ಯ ಲಿಯೋನಾ ಗೌರಿ ಚಿಂತನೆಗಳಲ್ಲಿ ತೊಡಗಿಸಿಕೊಂಡು ಅವರಂತೆ ಬೆಳೆಯಬೇಕು ಎಂದು ಆಶಯ ಹೊಂದಿದ್ದಳಂತೆ.
ಪಶ್ಚಿಮ ವಿಭಾಗದ ಡಿಸಿಪಿ ಬಿ ರಮೇಶ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಜಯನಗರದ ಎನ್ಎಂಕೆಆರ್ವಿ ಕಾಲೇಜಿಗೂ ವಿಚಾರಣೆಗಾಗಿ ಕರೆತರುವ ಸಾದ್ಯತೆ ಇದೆ.

ಸ್ನೇಹಿತರ ವಿಚಾರಣೆ
ಬುಧವಾರ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ ಪೊಲೀಸರು, ಪಾಕ್ ಜಿಂದಾಬಾದ್ ಎಂದು ಕೂಗಿದ್ದೇಕೆ ಎಂಬುದರ ಬಗ್ಗೆ ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಮೂಲ್ಯಳ ಸ್ನೇಹಿತರನ್ನು ಠಾಣೆಗೆ ಕರೆಯಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂಬುದು ತಿಳಿದು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಠಾಣೆಯ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಪೊಲೀಸರ ವಶಕ್ಕೆ
ಮಂಗಳವಾರ ರಾತ್ರಿ 5ನೇ ಎಸಿಎಂಎಂ ನ್ಯಾಯಾಧೀಶರ ನಿವಾಸಕ್ಕೆ ಅಮೂಲ್ಯರನ್ನು ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶರು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದರು. ಪೊಲೀಸರು ಭದ್ರತೆ ದೃಷ್ಠಿಯಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಲು ಕೋರಿದ್ದರು. ಆದರೆ ನ್ಯಾಯಾಧೀಶರು ಪೊಲೀಸರ ಬೇಡಿಕೆಯನ್ನು ತಿರಸ್ಕರಿಸಿದ್ದರು.

ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಳು
ಕಳೆದ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಿಎಎ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಅಮೂಲ್ಯ ಲಿಯೋನ್ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದರು. ಆದ್ದರಿಂದ, ಅವರನ್ನು ಬಂಧಿಸಲಾಗಿತ್ತು. ಉಪ್ಪಾರಪೇಟೆ ಠಾಣೆ ಪೊಲೀಸರು ಅಮೂಲ್ಯಳನ್ನು ಬಂಧಿಸಿದ್ದರು.

ನಾಲ್ಕು ದಿನ ಪೊಲೀಸ್ ಕಸ್ಟಡಿಗೆ
ಫೆಬ್ರವರಿ 20ರ ಗುರುವಾರ ಅಮೂಲ್ಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರು ಇದ್ದರು. ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
-
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ











Click it and Unblock the Notifications