ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ಅಮೂಲ್ಯಳ ಜಾಮೀನು ಅರ್ಜಿ ತಿರಸ್ಕೃತ
ಬೆಂಗಳೂರು, ಜೂನ್ 11: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಸಿಎಎ, ಎನ್ಆರ್ಸಿ ವಿರೋಧಿಸಿ ಸಂಸದ ಅಸಾದುದ್ದಿನ್ ಓವೈಸಿ ಭಾಗಿಯಾಗಿದ್ದ ಸಮಾವೇಶದಲ್ಲಿ ಅಮೂಲ್ಯ ಲಿಯೋನಾ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿ ಕೆಂಗಣ್ಣಿಗೆ ಗುರಿಯಾಗಿದ್ದಳು.
Recommended Video
ಆಕೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಫೆಬ್ರವರಿ 20 ರಂದು ನಡೆದ ಸಿಎಎ, ಎನ್ಆರ್ಸಿ ವಿರೋಧಿಸಿ ನಡೆದ ಸಮಾವೇಶದಲ್ಲಿ ಅವಳು ಭಾಗಿಯಾಗಿದ್ದಳು. ಒಂದೊಮ್ಮೆ ಆಕೆಗೆ ಜಾಮೀನು ದೊರೆತರೆ ಬೇರೆ ರೀತಿಯ ಅಪರಾಧಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಸಮಾಜಕ್ಕೂ ಒಳಿತಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಅಮೂಲ್ಯ ಅವರ ವಿರುದ್ಧ ದೇಶದ್ರೋಹ ಹಾಗೂ ಸಮಾಜದಲ್ಲಿ ದ್ವೇಷ ಹೊತ್ತಿಸುವ ಆರೋಪವಿದೆ. ಒಂದೊಮ್ಮೆ ಅಮೂಲ್ಯಳಿಗೆ ಜಾಮೀನು ದೊರೆತರೆ ಆಕೆ ತಲೆಮರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ನ್ಯಾ. ವಿದ್ಯಾಧರ್ ಶಿರಹಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಆಕೆ ಪಾಕಿಸ್ತಾನ್ ಜಿಂದಾಬಾದ್ ಎಂದ ಕೆಲವೇ ಕ್ಷಣಗಳಲ್ಲಿ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಬದಲಾಯಿಸಿದ್ದಳು. ಆಕೆಯ ಕೈಲಿದ್ದ ಮೈಕನ್ನು ಕಸಿದುಕೊಳ್ಳಲಾಗಿತ್ತು.

ಅಮೂಲ್ಯ ಮೂಲತಃ ಚಿಕ್ಕಮಗಳೂರಿನ ಕೊಪ್ಪದ ಹುಡುಗಿ. ಆಕೆಗೆ ಇನ್ನೂ 20 ವಯಸ್ಸು. ಆದರೆ ಎಡಪಂಥೀಯ ಚಿಂತಕಿ ಅಂತ ಕರೆಸಿಕೊಂಡ ಅಮೂಲ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರುದ್ಧ ಮಾತನಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾಳೆ.
ಸಿಎಎ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡು ಹೋದಲ್ಲಿ ಬಂದಲ್ಲಿ ಮೈಕ್ ತಾನೇ ಕೇಳಿ ಪಡೆದುಕೊಂಡು ಮಾತನಾಡುತ್ತಿದ್ದಳು. ಅದರಂತೆ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಹೋರಾಟದಲ್ಲಿ ಅಮೂಲ್ಯ ಇದ್ದಕ್ಕಿದ್ದಂತೆ ಕಾಣಿಸಿಕೊಂಡು 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದಳು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications