"ಪಾಕ್ ಡ್ರೋನ್" ಇಲ್ಲಿಂದ ವಾಪಸ್ ಹೋಯ್ತು.. ಬೆಂಗಳೂರು & ಕನ್ನಡಿಗರ ಬಗ್ಗೆ ಕೆಟ್ಟ ಪೋಸ್ಟ್!
"ನಾನು ಕರ್ನಾಟಕದಲ್ಲಿ ಕನ್ನಡ ಮಾತನಾಡಲ್ಲ" ಅಂತ ಹೇಳಿ ರಾಷ್ಟ್ರೀಯ ಬ್ಯಾಂಕ್ನ ಲೇಡಿ ಮ್ಯಾನೇಜರ್ ಛೀಮಾರಿ ಹಾಕಿಸಿಕೊಂಡ ಬೆನ್ನಲ್ಲೇ ಕನ್ನಡಿಗರನ್ನು ಕೆಣಕುವ ಮತ್ತೊಂದು ಪೋಸ್ಟ್ ವೈರಲ್ ಆಗುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಎದುರಾದ ಉದ್ವಿಗ್ನ ಪರಿಸ್ಥಿತಿಯನ್ನು ಇರಿಸಿಕೊಂಡು ಪೋಸ್ಟ್ ಮಾಡಲಾಗಿದ್ದು. ಇದು ಕನ್ನಡಿಗರ ಕೆಂಗಣ್ಣಿಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಹಾಗೂ ಬೆಂಗಳೂರಿನಲ್ಲಿ ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಮುಂದುವರಿದಿದೆ. ಇದೀಗ ಇಂತಹದ್ದೇ ಒಂದು ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು. ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಕರ್ನಾಟಕದಲ್ಲಿ ಹಿಂದಿವಾಲಾಗಳ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದೆ. ಬ್ಯಾಂಕ್ ಮ್ಯಾನೇಜರ್ಗೆ ಕನ್ನಡಿಗರು ಸರಿಯಾಗಿ ಪಾಠ ಕಲಿಸಿದ್ದಾರೆ. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ನಾಲ್ಕು ದಿನಗಳ ಹಿಂದೆ ಮಾಡಿರುವ ಪೋಸ್ಟ್ವೊಂದು ವೈರಲ್ ಆಗುತ್ತಿದ್ದು ಕನ್ನಡಿಗರನ್ನು ಕೆರಳಿಸಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕು ಅಂತ ಕನ್ನಡಿಗರು ಕೇಳುತ್ತಿರುವುದು ಹಿಂದಿವಾಲಾಗಳ ಬೆವರಿಳಿಸಿದ್ದು. ಸೋಷಿಯಲ್ ಮೀಡಿಯಾದಲ್ಲಿ ವಿಕೃತವಾಗಿ ಹಾಗೂ ಕೀಳು ಮಟ್ಟದಲ್ಲಿ ಪೋಸ್ಟ್ ಮಾಡುವುದನ್ನು ಮುಂದುವರಿಸಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪಾಕ್ ಡ್ರೋನ್ಗಳಿಗೆ ಬೆಂಗಳೂರನ್ನು ಲಿಂಕ್ ಮಾಡಿ ಪೋಸ್ಟ್ ಮಾಡಲಾಗಿದೆ.

ಬೆಂಗಳೂರು, ಕನ್ನಡ ಹಾಗೂ ಕನ್ನಡಿಗರನ್ನು ಗುರಿಯಾಗಿಸಿಕೊಂಡು ಕೆಲವು ಹಿಂದಿವಾಲಾಗಳು (ನಾರ್ಥಿಗಳು) ಮಾಡುತ್ತಿರುವ ಪೋಸ್ಟ್ಗಳು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಕನ್ನಡಿಗರು ಸರಿಯಾಗಿಯೇ ಪ್ರತಿಕ್ರಿಯಿಸಿದ್ದಾರೆ. Batangad ಎನ್ನುವ ಹಿಂದಿ ಸೋಷಿಯಲ್ ಮೀಡಿಯಾ ಖಾತೆಯಿಂದ ಫೇಸ್ಬುಕ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳಲಾಗಿದೆ. ಕೀಳುಮಟ್ಟದ ಈ ಪೋಸ್ಟ್ ಕನ್ನಡಿಗರ ರಕ್ತ ಕುದಿಯುವಂತೆ ಮಾಡಿದೆ.
Batangad ಮಾಡಿರುವ ಪೋಸ್ಟ್ನಲ್ಲಿ ಏನಿದೆ ?
ಈ ಪೋಸ್ಟ್ನಲ್ಲಿ ಬೆಂಗಳೂರಿನ ಬಂದರಿಗೆ ಬಂದ ಪಾಕಿಸ್ತಾನಿ ಡ್ರೋನ್ಗಳನ್ನು ವಾಪಸ್ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿಗೆ ಬಂದ ಡ್ರೋನ್ಗಳನ್ನು ಕನ್ನಡ ಮಾತನಾಡದ ಕಾರಣ ತಕ್ಷಣವೇ ವಾಪಸ್ ಕಳುಹಿಸಲಾಯಿತು ಎಂದು ಪೋಸ್ಟ್ ಮಾಡಲಾಗಿದೆ. ಇದಕ್ಕೆ ಕನ್ನಡಿಗರು ಕೆಂಡಾಮಂಡಲರಾಗಿದ್ದಾರೆ. ಮೊದಲನೆಯದಾಗಿ ಬೆಂಗಳೂರಿನಲ್ಲಿ ಬಂದರು ಇದೆಯೋ ಇಲ್ಲವೋ ಅಂತ ತಿಳಿದುಕೊಳ್ಳುವ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಪ್ರಶ್ನೆ ಮಾಡಲಾಗಿದೆ.

ಬರಹಗಾರ ಸುನೀಲ್ ಜೆ ಅವರು, ಭಯೋತ್ಪಾದಕರು ಕಾಶ್ಮೀರದ ಮೇಲೆ ದಾಳಿ ಮಾಡಲು ಸಾಧ್ಯವಾದದ್ದು ಅವರ ಗುಂಡುಗಳು ಹಿಂದಿಯನ್ನು ಅರ್ಥಮಾಡಿಕೊಂಡಿದ್ದರಿಂದಲೇ? ಈಗ ಅರ್ಥವಾಯಿತು ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಮಹೇಂದ್ರ ಬಾಪೂ ನಿಕಮ್ ಎನ್ನುವವರು, ಆ ಡ್ರೋನ್ ಕೂಡ ಸ್ಥಳೀಯ ಭಾಷೆಗೆ ಗೌರವ ತೋರಿಸದ ಜನರಿಗಿಂತ ಹೆಚ್ಚಿನ ಸ್ವಾಭಿಮಾನವನ್ನು ಹೊಂದಿದೆ. ಸ್ಥಳೀಯ ಭಾಷೆಯನ್ನು ಮಾತನಾಡಲು ಸಾಧ್ಯವಿಲ್ಲ ಎಂದು ಅರಿತುಕೊಂಡ ನಂತರ ಡ್ರೋನ್ ಆ ಸ್ಥಳವನ್ನು ಬಿಟ್ಟು ಹೋಗಿದೆ ಎಂದು ಪೋಸ್ಟ್ ಮಾಡಿದವರ ಭಾಷೆಯಲ್ಲೇ ತಿರುಗೇಟು ನೀಡಿದ್ದಾರೆ. ನೀವು ವಾಸಿಸುವ, ಕೆಲಸ ಮಾಡುವ ಮತ್ತು ಹಣ ಸಂಪಾದಿಸುವ ರಾಜ್ಯದ ಭಾಷೆಯನ್ನು ನೀವು ತಿಳಿದಿರಬೇಕು. ನೀವು ಆ ರಾಜ್ಯ ಮತ್ತು ಜನರ ಸಂಸ್ಕೃತಿ ಮತ್ತು ಭಾಷೆಯನ್ನು ಗೌರವಿಸಬೇಕು ಎಂದಿದ್ದಾರೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications