ಬಿಬಿಎಂಪಿಯ ಆಸ್ತಿ ವಿವರ ವೆಬ್ಸೈಟ್ನಲ್ಲಿ ಲಭ್ಯ
ಬೆಂಗಳೂರು, ಮಾರ್ಚ್ 15 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಸ್ತಿಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನೀಡುವ 'ಪಾಲಿಕೆ ಭೂಮಿ' ವೆಬ್ಸೈಟ್ಅನ್ನು ಬಿಬಿಎಂಪಿ ಆರಂಭಿಸಿದೆ. ನಗರದಲ್ಲಿ ಪಾಲಿಕೆಗೆ ಸೇರಿದ ಸುಮಾರು 5 ಸಾವಿರಕ್ಕೂ ಅಧಿಕ ಆಸ್ತಿಗಳಿವೆ.
ಬಿಬಿಎಂಪಿ ಕಚೇರಿಯಲ್ಲಿ ಮೇಯರ್ ಮಂಜುನಾಥ ರೆಡ್ಡಿ ಅವರು ಪಾಲಿಕೆ ಭೂಮಿ ವೆಬ್ಸೈಟ್ಗೆ ಸೋಮವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 'ಪಾಲಿಕೆ ಆಸ್ತಿಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ' ಎಂದರು. [ಶೇ 20ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಲಿದೆ ಬಿಬಿಎಂಪಿ]

'ಪಾಲಿಕೆಯ ಸ್ವಂತ ಆಸ್ತಿಗಳು, ಗುತ್ತಿಗೆ ನೀಡಿರುವ ಆಸ್ತಿಗಳ ವಿವರ, ಬಾಡಿಗೆ ನೀಡಿರುವ ಕಟ್ಟಡಗಳು, ಭೂಮಿಯ ಒಡೆತನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ಪ್ರಕರಣ, ಒತ್ತುವರಿ, ಮೈದಾನ ಸೇರಿದಂತೆ ಎಲ್ಲಾ ಮಾಹಿತಿ ಇಲ್ಲಿ ಲಭ್ಯವಿದೆ' ಎಂದು ಮಂಜುನಾಥ ರೆಡ್ಡಿ ಹೇಳಿದರು. [30 ಲಕ್ಷದ ಆಸ್ತಿ ಖರೀದಿಗೆ ಮುನ್ನ ಇದನ್ನು ಓದಿ]
ಬಿಬಿಎಂಪಿ ಆಯುಕ್ತ ಜಿ.ಕುಮಾರ ನಾಯಕ್ ಅವರು ಮಾತನಾಡಿ, 'ಬಿಬಿಎಂಪಿ ಆಸ್ತಿಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಇಲ್ಲಿದೆ. ಜಿಐಎಸ್ ಆಧಾರಿತ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ನಿಗದಿತ ಪ್ರದೇಶದ ಹೆಸರು ನಮೂದಿಸಿ ಆಸ್ತಿ ವಿವರ ತಿಳಿಯಬಹುದು. ಸದ್ಯ, ಅಧಿಕಾರಿಗಳು ಇದನ್ನು ಬಳಸುತ್ತಿದ್ದು, ಮುಂದಿನ ಎರಡು ತಿಂಗಳಿನಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿದೆ' ಎಂದರು. [ಆನ್ ಲೈನ್ ನಲ್ಲಿ ಆಸ್ತಿ ತೆರಿಗೆ ಪಾವತಿ ಸುಲಭ]
ಆಸ್ತಿಗಳ ವಿವರ : ಬಿಬಿಎಂಪಿಯ 8 ವಲಯಗಳ ವ್ಯಾಪ್ತಿಯಲ್ಲಿ ಒಟ್ಟು 1688 ಮೈದಾನ, ಉದ್ಯಾನ ಮತ್ತು ಖಾಲಿ ಜಾಗಗಳಿವೆ. ಸುಮಾರು 12 ಆಸ್ತಿಗಳ ಒಡೆತನ ವಿವಾದ ನ್ಯಾಯಾಲಯದಲ್ಲಿದೆ. 18 ಆಸ್ತಿಗಳು ಮೆಟ್ರೋ ಮತ್ತು ರಸ್ತೆ ಅಗಲೀಕರಣದ ಪಾಲಾಗಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Property: ಆಸ್ತಿ ತೆರಿಗೆ ಬಾಕಿ: ಮಾರ್ಚ್ 13ಕ್ಕೆ ಬೆಂಗಳೂರಿನ 81 ಆಸ್ತಿಗಳ ಹರಾಜು ಪ್ರಕ್ರಿಯೆ, ನೀವು ಭಾಗವಹಿಸಬಹುದು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bda: ಬಿಡಿಎ ಮುಕ್ತ ಸಂವಾದದಿಂದ ಸೈನಿಕರ ಸಮಸ್ಯೆಗೆ ಪರಿಹಾರ: ಬೆಂಗಳೂರು ಆಸ್ತಿದಾರರಿಗೆ ಇಲ್ಲಿದೆ ಗುಡ್ನ್ಯೂಸ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications