ಬಿಬಿಎಂಪಿಯ ಆಸ್ತಿ ವಿವರ ವೆಬ್ಸೈಟ್ನಲ್ಲಿ ಲಭ್ಯ
ಬೆಂಗಳೂರು, ಮಾರ್ಚ್ 15 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಸ್ತಿಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನೀಡುವ 'ಪಾಲಿಕೆ ಭೂಮಿ' ವೆಬ್ಸೈಟ್ಅನ್ನು ಬಿಬಿಎಂಪಿ ಆರಂಭಿಸಿದೆ. ನಗರದಲ್ಲಿ ಪಾಲಿಕೆಗೆ ಸೇರಿದ ಸುಮಾರು 5 ಸಾವಿರಕ್ಕೂ ಅಧಿಕ ಆಸ್ತಿಗಳಿವೆ.
ಬಿಬಿಎಂಪಿ ಕಚೇರಿಯಲ್ಲಿ ಮೇಯರ್ ಮಂಜುನಾಥ ರೆಡ್ಡಿ ಅವರು ಪಾಲಿಕೆ ಭೂಮಿ ವೆಬ್ಸೈಟ್ಗೆ ಸೋಮವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 'ಪಾಲಿಕೆ ಆಸ್ತಿಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ' ಎಂದರು. [ಶೇ 20ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಲಿದೆ ಬಿಬಿಎಂಪಿ]

'ಪಾಲಿಕೆಯ ಸ್ವಂತ ಆಸ್ತಿಗಳು, ಗುತ್ತಿಗೆ ನೀಡಿರುವ ಆಸ್ತಿಗಳ ವಿವರ, ಬಾಡಿಗೆ ನೀಡಿರುವ ಕಟ್ಟಡಗಳು, ಭೂಮಿಯ ಒಡೆತನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ಪ್ರಕರಣ, ಒತ್ತುವರಿ, ಮೈದಾನ ಸೇರಿದಂತೆ ಎಲ್ಲಾ ಮಾಹಿತಿ ಇಲ್ಲಿ ಲಭ್ಯವಿದೆ' ಎಂದು ಮಂಜುನಾಥ ರೆಡ್ಡಿ ಹೇಳಿದರು. [30 ಲಕ್ಷದ ಆಸ್ತಿ ಖರೀದಿಗೆ ಮುನ್ನ ಇದನ್ನು ಓದಿ]
ಬಿಬಿಎಂಪಿ ಆಯುಕ್ತ ಜಿ.ಕುಮಾರ ನಾಯಕ್ ಅವರು ಮಾತನಾಡಿ, 'ಬಿಬಿಎಂಪಿ ಆಸ್ತಿಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಇಲ್ಲಿದೆ. ಜಿಐಎಸ್ ಆಧಾರಿತ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ನಿಗದಿತ ಪ್ರದೇಶದ ಹೆಸರು ನಮೂದಿಸಿ ಆಸ್ತಿ ವಿವರ ತಿಳಿಯಬಹುದು. ಸದ್ಯ, ಅಧಿಕಾರಿಗಳು ಇದನ್ನು ಬಳಸುತ್ತಿದ್ದು, ಮುಂದಿನ ಎರಡು ತಿಂಗಳಿನಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿದೆ' ಎಂದರು. [ಆನ್ ಲೈನ್ ನಲ್ಲಿ ಆಸ್ತಿ ತೆರಿಗೆ ಪಾವತಿ ಸುಲಭ]
ಆಸ್ತಿಗಳ ವಿವರ : ಬಿಬಿಎಂಪಿಯ 8 ವಲಯಗಳ ವ್ಯಾಪ್ತಿಯಲ್ಲಿ ಒಟ್ಟು 1688 ಮೈದಾನ, ಉದ್ಯಾನ ಮತ್ತು ಖಾಲಿ ಜಾಗಗಳಿವೆ. ಸುಮಾರು 12 ಆಸ್ತಿಗಳ ಒಡೆತನ ವಿವಾದ ನ್ಯಾಯಾಲಯದಲ್ಲಿದೆ. 18 ಆಸ್ತಿಗಳು ಮೆಟ್ರೋ ಮತ್ತು ರಸ್ತೆ ಅಗಲೀಕರಣದ ಪಾಲಾಗಿವೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications