ರಂಗಶಂಕರದಲ್ಲಿ ಬುಧವಾರ 'ಪಂಪಭಾರತ ನಾಟಕ'
ಬೆಂಗಳೂರು, ಮಾರ್ಚ್ 06: ಸಮುದಾಯ ಬೆಂಗಳೂರು 'ಪಂಪ ಭಾರತ' ನಾಟಕವನ್ನು ಮಾರ್ಚ್ 7 ರಂದು ರಂಗ ಶಂಕರದಲ್ಲಿ ಪ್ರಸ್ತುತ ಪಡಿಸುತ್ತಿದೆ.
ಆದಿಕವಿ ಪಂಪನ ಶಾಸನ ಹುಡುಕ ಹೊರಟ ಸಂಶೋಧಕರ ಸತ್ಯ ಶೋಧನೆಗೆ ಸೆಡ್ಡು ಹೊಡೆದಂತೆ ಸಂಘಪರಿವಾರದವರು ಎದುರಾಗಿ ಪ್ರತಿರೋಧ ಒಡ್ಡುತ್ತಾರೆ. ಹೀಗೆ ವರ್ತಮಾನದಲ್ಲಿ ನಿಂತು ಮಾತನಾಡುವ ಪಾತ್ರಗಳ ಮಧ್ಯೆ ಭೂತಕಾಲದ ಪಾತ್ರಗಳು ಶಾಸನಗಳಿಂದ ಎದ್ದು ಬಂದು ಪ್ರಸ್ತುತ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಾಂಸ್ಕೃತಿಕ ಒಳನೋಟಗಳನ್ನು ಭೇದಿಸುತ್ತಾ ಹೋಗುತ್ತವೆ.
ಸಾವಿರಾರು ವರ್ಷಗಳ ಹಿಂದೆ ಬ್ರಾಹ್ಮಣನಾಗಿದ್ದ ಪಂಪ ಕವಿ ಜೈನ ಧರ್ಮಕ್ಕೆ ಮತಾಂತರಗೊಳ್ಳುವ ಮೂಲಕ ಅರಸನಾದ ಅರಕೇಸರಿಯ ಹಂಗಿನ ಆಶ್ರಯ ಪಡೆದು ಮಹಾಭಾರತದಂಥ ಪುರಾಣ ಕಾವ್ಯವನ್ನು ಪುನರ್ವಿಮರ್ಶಿಸಿ ಅರ್ಜುನನ್ನು ಅರಿಕೇಸರಿಗೆ ಸಮೀಕರಿಸಿ ಚಿತ್ರಿಸುತ್ತಾನೆ. ಕರ್ಣ ಸುಯೋಧನರ ಮಿತ್ರತ್ವಕ್ಕೆ ಹೊಸ ಮೌಲ್ಯ ಪ್ರತಿಷ್ಠಾಪಿಸುತ್ತಾನೆ. ಇಂತಹ ಪ್ರಸಂಗಗಳುಳ್ಳ ನಾಟಕ ಕನ್ನಡ ರಂಗಭೂಮಿಯಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಕೆವೈ ನಾರಾಯಣಸ್ವಾಮಿ ರಚಿತ, ಪ್ರಮೋದ್ ಶಿಗ್ಗಾಂವ್ ನಿರ್ದೇಶನದ ಪಂಪಭಾರತ ನಾಟಕವು ರಂಗಶಂಕರಲ್ಲಿ ಮತ್ತೊಮ್ಮೆ ಪ್ರದರ್ಶನ ಕಾಣುತ್ತಿದೆ. ಸಮುದಾಯ ತಂಡವು ಮಾರ್ಚ್ 7 ರಂದು ಸಂಜೆ 7.30 ಕ್ಕೆ ಪ್ರದರ್ಶಿಸುತ್ತಿದೆ.
ನಾಟಕ : ಪಂಪ ಭಾರತ
ರಚನೆ : ಡಾ. ಕೆ.ವೈ. ನಾರಾಯಣ ಸ್ವಾಮಿ
ನಿರ್ದೇಶನ : ಪ್ರಮೋದ್ ಶಿಗ್ಗಾಂವ್
ದಿನಾಂಕ, ಸಮಯ : ಮಾರ್ಚ್ 07, ಸಂಜೆ 7.30
ಸ್ಥಳ-ರಂಗಶಂಕರ
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications