ಚೌಡಯ್ಯದಲ್ಲಿ ಕೃಷ್ಣ ಧ್ವನಿ, ಚೌರಾಸಿಯಾ ಬಾನ್ಸುರಿ ಇನಿದನಿ
ಬೆಂಗಳೂರು, ಆಗಸ್ಟ್, 12: ಬೆಂಗಳೂರಿನ ಸಂಗೀತ ಪ್ರೇಮಿಗಳಿಗೆ ವಾರಾಂತ್ಯಕ್ಕೆ ಇದಕ್ಕಿಂತ ಉತ್ತಮ ಆಯ್ಕೆ ಇನ್ನೊಂದಿಲ್ಲ. ವಿಶ್ವವಿಖ್ಯಾತ ಕೊಳಲು ವಾದಕ ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಆಗಸ್ಟ್ 13, ಶನಿವಾರ ಬೆಂಗಳೂರಿನ ಮಲ್ಲೇಶ್ವರಂ ಚೌಡಯ್ಯ ಸ್ಮಾರಕ ಭವನದಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಚೌರಾಸಿಯಾ ಜತೆ ಖ್ಯಾತ ತಬಲಾವಾದಕ ಪಂಡಿತ್ ವಿಜಯ್ ಘಾಟೆ, ಪಂಡಿತ್ ಪ್ರವೀಣ್ ಗೋಡ್ಖಿಂಡಿ "ಕೃಷ್ಣ ಧ್ವನಿ" ಯಲ್ಲಿ ಕಿವಿಗೆ ಮುದನೀಡಲಿದ್ದಾರೆ. ಪ್ರವೀಣ್ ಗೋಡ್ಖಿಂಡಿ ನೇತೃತ್ವದ ಸಂಜೋಗ್ ಬಾನ್ಸುರಿ ವಿದ್ಯಾಲಯವು ಪಂಡಿತ್ ವೆಂಕಟೇಶ ಗೋಡ್ಖಿಂಡಿ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಿದೆ.[ಪ್ರವೀಣ್ ಗೋಡ್ಖಿಂಡಿಗೆ 'ಝೆಡ್ಎಂಆರ್' ಸಂಗೀತ ಪ್ರಶಸ್ತಿಯ ಗರಿ]

ಸಂಜೋಗ್ ವಿದ್ಯಾಲಯದ 30 ವಿದ್ಯಾರ್ಥಿಗಳು ಆರಂಭದಲ್ಲಿ ಕೊಳಲು ವಾದನ ಮಾಡಲಿದ್ದಾರೆ. ಪ್ರವೀಣ್ ಗೋಡ್ಖಿಂಡಿ ಹಾಗೂ ಅವರ ಪುತ್ರ ಷಡ್ಜ್ ಗೋಡ್ಖಿಂಡಿ ಬಾನ್ಸುರಿ ಜುಗಲ್ಬಂದಿ ನಡೆಸಿಕೊಡುವರು. ಪ್ರವೀಣ್ ಸಹೋದರ ಕಿರಣ್ ಗೋಡ್ಖಿಂಡಿ ತಬಲಾ ಸಾಥ್ ನೀಡುವರು.[ಪಂಡಿತ್ ಗೋಡ್ಖಿಂಡಿರಿಂದ ವಿಶಿಷ್ಟ ಸಂಗೀತ ಸಾಹಸ ಘೋಷಣೆ]

ಮೊದಲ ಸಲ:
ಒಂದೇ ವೇದಿಕೆಯಲ್ಲಿ ಚೌರಾಸಿಯಾ ಹಾಗೂ ಕನ್ನಡಿಗ ಪ್ರವೀಣ್ ಗೋಡ್ಖಿಂಡಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇಶ ಗೋಡ್ಖಿಂಡಿಯವರ ಜನ್ಮದಿನ ನಿಮಿತ್ತ ಅವರಿಗೆ ಗೌರವ ವಂದನೆ ಸಲ್ಲಿಸಲು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ತಬಲಾ ವಾದನ ವಿಶೇಷ:
ಪ್ರಖ್ಯಾತ ತಬಲಾ ವಾದಕ ಝಾಕಿರ್ ಹುಸೇನ್ ಅವರಿಂದ ಪ್ರಭಾವಿತರಾಗಿರುವ ವಿಜಯ್ ಘಾಟೆ ಮೂರು ಪ್ರಕಾರದ ಅಂದರೆ ಗಾಯನ, ವಾದ್ಯ, ನೃತ್ಯ ಮೂರೂ ಪ್ರಕಾರಗಳಿಗೆ ತಬಲಾ ನುಡಿಸಬಲ್ಲವರು. ಇವರ ತಬಲಾ ವಾದನದ ಝರಿಯೂ ಚೌಡಯ್ಯ ಸ್ಮಾರಕ ಭವನದಲ್ಲಿ ಪ್ರತಿಧ್ವನಿಸಲಿದೆ.

ಕಾರ್ಯಕ್ರಮದ ವಿವರ
ದಿನಾಂಕ: 13 ನೇ ಆಗಸ್ಟ್ , ಶನಿವಾರ
ಎಲ್ಲಿ?: ಚೌಡಯ್ಯ ಸ್ಮಾರಕ ಭವನ, ಮಲ್ಲೇಶ್ವರಂ, ಬೆಂಗಳೂರು
ಸಮಯ: ಸಂಜೆ 6 ಗಂಟೆಗೆ ಆರಂಭ
ಪ್ರವೇಶ: ಉಚಿತ
ಹೆಚ್ಚಿನ ಮಾಹಿತಿಗೆ: ದೂ: 98453 29954 (ಕಿರಣ್ ಗೋಡ್ಖಿಂಡಿ), 77607 61394 (ಕಲ್ಯಾಣ್ಕುಮಾರ್) ಸಂಪರ್ಕಿಸಬಹುದು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications