ಚೌಡಯ್ಯದಲ್ಲಿ ಕೃಷ್ಣ ಧ್ವನಿ, ಚೌರಾಸಿಯಾ ಬಾನ್ಸುರಿ ಇನಿದನಿ
ಬೆಂಗಳೂರು, ಆಗಸ್ಟ್, 12: ಬೆಂಗಳೂರಿನ ಸಂಗೀತ ಪ್ರೇಮಿಗಳಿಗೆ ವಾರಾಂತ್ಯಕ್ಕೆ ಇದಕ್ಕಿಂತ ಉತ್ತಮ ಆಯ್ಕೆ ಇನ್ನೊಂದಿಲ್ಲ. ವಿಶ್ವವಿಖ್ಯಾತ ಕೊಳಲು ವಾದಕ ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಆಗಸ್ಟ್ 13, ಶನಿವಾರ ಬೆಂಗಳೂರಿನ ಮಲ್ಲೇಶ್ವರಂ ಚೌಡಯ್ಯ ಸ್ಮಾರಕ ಭವನದಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಚೌರಾಸಿಯಾ ಜತೆ ಖ್ಯಾತ ತಬಲಾವಾದಕ ಪಂಡಿತ್ ವಿಜಯ್ ಘಾಟೆ, ಪಂಡಿತ್ ಪ್ರವೀಣ್ ಗೋಡ್ಖಿಂಡಿ "ಕೃಷ್ಣ ಧ್ವನಿ" ಯಲ್ಲಿ ಕಿವಿಗೆ ಮುದನೀಡಲಿದ್ದಾರೆ. ಪ್ರವೀಣ್ ಗೋಡ್ಖಿಂಡಿ ನೇತೃತ್ವದ ಸಂಜೋಗ್ ಬಾನ್ಸುರಿ ವಿದ್ಯಾಲಯವು ಪಂಡಿತ್ ವೆಂಕಟೇಶ ಗೋಡ್ಖಿಂಡಿ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಿದೆ.[ಪ್ರವೀಣ್ ಗೋಡ್ಖಿಂಡಿಗೆ 'ಝೆಡ್ಎಂಆರ್' ಸಂಗೀತ ಪ್ರಶಸ್ತಿಯ ಗರಿ]

ಸಂಜೋಗ್ ವಿದ್ಯಾಲಯದ 30 ವಿದ್ಯಾರ್ಥಿಗಳು ಆರಂಭದಲ್ಲಿ ಕೊಳಲು ವಾದನ ಮಾಡಲಿದ್ದಾರೆ. ಪ್ರವೀಣ್ ಗೋಡ್ಖಿಂಡಿ ಹಾಗೂ ಅವರ ಪುತ್ರ ಷಡ್ಜ್ ಗೋಡ್ಖಿಂಡಿ ಬಾನ್ಸುರಿ ಜುಗಲ್ಬಂದಿ ನಡೆಸಿಕೊಡುವರು. ಪ್ರವೀಣ್ ಸಹೋದರ ಕಿರಣ್ ಗೋಡ್ಖಿಂಡಿ ತಬಲಾ ಸಾಥ್ ನೀಡುವರು.[ಪಂಡಿತ್ ಗೋಡ್ಖಿಂಡಿರಿಂದ ವಿಶಿಷ್ಟ ಸಂಗೀತ ಸಾಹಸ ಘೋಷಣೆ]

ಮೊದಲ ಸಲ:
ಒಂದೇ ವೇದಿಕೆಯಲ್ಲಿ ಚೌರಾಸಿಯಾ ಹಾಗೂ ಕನ್ನಡಿಗ ಪ್ರವೀಣ್ ಗೋಡ್ಖಿಂಡಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇಶ ಗೋಡ್ಖಿಂಡಿಯವರ ಜನ್ಮದಿನ ನಿಮಿತ್ತ ಅವರಿಗೆ ಗೌರವ ವಂದನೆ ಸಲ್ಲಿಸಲು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ತಬಲಾ ವಾದನ ವಿಶೇಷ:
ಪ್ರಖ್ಯಾತ ತಬಲಾ ವಾದಕ ಝಾಕಿರ್ ಹುಸೇನ್ ಅವರಿಂದ ಪ್ರಭಾವಿತರಾಗಿರುವ ವಿಜಯ್ ಘಾಟೆ ಮೂರು ಪ್ರಕಾರದ ಅಂದರೆ ಗಾಯನ, ವಾದ್ಯ, ನೃತ್ಯ ಮೂರೂ ಪ್ರಕಾರಗಳಿಗೆ ತಬಲಾ ನುಡಿಸಬಲ್ಲವರು. ಇವರ ತಬಲಾ ವಾದನದ ಝರಿಯೂ ಚೌಡಯ್ಯ ಸ್ಮಾರಕ ಭವನದಲ್ಲಿ ಪ್ರತಿಧ್ವನಿಸಲಿದೆ.

ಕಾರ್ಯಕ್ರಮದ ವಿವರ
ದಿನಾಂಕ: 13 ನೇ ಆಗಸ್ಟ್ , ಶನಿವಾರ
ಎಲ್ಲಿ?: ಚೌಡಯ್ಯ ಸ್ಮಾರಕ ಭವನ, ಮಲ್ಲೇಶ್ವರಂ, ಬೆಂಗಳೂರು
ಸಮಯ: ಸಂಜೆ 6 ಗಂಟೆಗೆ ಆರಂಭ
ಪ್ರವೇಶ: ಉಚಿತ
ಹೆಚ್ಚಿನ ಮಾಹಿತಿಗೆ: ದೂ: 98453 29954 (ಕಿರಣ್ ಗೋಡ್ಖಿಂಡಿ), 77607 61394 (ಕಲ್ಯಾಣ್ಕುಮಾರ್) ಸಂಪರ್ಕಿಸಬಹುದು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications