ಪಂಡಿತ್ ಗೋಡ್ಖಿಂಡಿರಿಂದ ವಿಶಿಷ್ಟ ಸಂಗೀತ ಸಾಹಸ ಘೋಷಣೆ
ಬೆಂಗಳೂರು, ಸೆ. 03: ಪಂಡಿತ್ ಪ್ರವೀಣ್ ಗೋಡ್ಖಿಂಡಿ ಅವರು ವಿಶಿಷ್ಟ ಕಾರ್ಯಕ್ಕೆ ಮುಂದಾಗಿದ್ದಾರೆ. ಶಾಸ್ತ್ರೀಯ ಸಂಗೀತದ ಉಳಿವು ಹಾಗೂ ಬೆಳವಣಿಗೆಗಾಗಿ ವರ್ಷಕ್ಕೆ ಆರು ಸಂಗೀತ ಕಚೇರಿ ನಡೆಸಿ ಹಿರಿಯ ಕಿರಿಯ ಸಂಗೀತಗಾರರಿಗೆ ವೇದಿಕೆ ಒದಗಿಸುವ ಸಾಹಸಕ್ಕೆ ಕೈ ಹಾಕಿದ್ದಾರೆ.
ಗೋಡ್ಖಿಂಡಿ ಅವರು ಮ್ಯೂಸಿಕ್ ಅಂಡ್ ಎಜುಟೈನ್ಮೆಂಟ್ ಪ್ರೈ ಲಿ ಹಾಗೂ ಇನ್ ಸಿಂಕ್ ಮ್ಯೂಸಿಕ್ ಚಾನೆಲ್ ಸಹಯೋಗದಲ್ಲಿ ಈ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿದೆ. ಗ್ಲೋಬಲ್ ಕಮ್ಯೂನಿಟಿ ಆಫ್ ಇಂಡಿಯನ್ ಮ್ಯೂಸಿಕ್ (ಜಿಸಿಐಎಂ) ಅಡಿಯಲ್ಲಿ ಮೊದಲ ಶಾಖೆಯಾಗಿ ಗೋಡ್ಖಿಂಡಿ ಅವರು ಮ್ಯೂಸಿಕ್ ಅಂಡ್ ಎಜುಟೈನ್ಮೆಂಟ್ ಪ್ರೈ ಲಿ ಕಾರ್ಯ ನಿರ್ವಹಿಸಲಿದ್ದು ಮೊದಲ ಕಚೇರಿ ನವೆಂಬರ್ 28, 2015ರಂದು ಆಯೋಜನೆಗೊಂಡಿದೆ.

ವರ್ಷಕ್ಕೆ 6 ಕಚೇರಿಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಹಿಂದೂಸ್ತಾನಿ ಹಾಗೂ ಕರ್ನಾಟಕ ಸಂಗೀತ ವಿದ್ವಾಂಸರು, ಸ್ಥಳೀಯ ಸಂಗೀತಗಾರರು, ಉದಯೋನ್ಮುಖ ಪ್ರತಿಭೆಗಳು ಪಾಲ್ಗೊಳ್ಳಲಿದ್ದಾರೆ. ಇದರ ಜೊತೆಗೆ ಪ್ರೇಕ್ಷಕರ ಜೊತೆ ಸಂವಾದ, ತರಬೇತಿ ಶಿಬಿರಗಳು, ವಿಚಾರ ಸಂಕಿರಣ ಕೂಡಾ ನಡೆಯಲಿದೆ ಎಂದು ಪ್ರವೀಣ್ ಗೋಡ್ಖಿಂಡಿ ಅವರು ಒನ್ ಇಂಡಿಯಾ ಪ್ರತಿನಿಧಿಗೆ ತಿಳಿಸಿದ್ದಾರೆ.
ಸದಸ್ಯರೇ ಆಹ್ವಾನಿತ ಶೋತೃಗಳು: ಇಂಥ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ಹುಡುಕುವುದು ಕಷ್ಟ. ಹೀಗಾಗಿ ಆಸಕ್ತ ಶೋತೃಗಳನ್ನು ವಿಶೇಷ ಆಹ್ವಾನಿತರು ಅಥವಾ ಸದಸ್ಯರನ್ನಾಗಿಸಿಕೊಂಡು ಅವರಿಷ್ಟದ ಸಂಗೀತವನ್ನು ಕೇಳುವ ಒಂದು ವ್ಯವಸ್ಥೆಯನ್ನು ರೂಪಿಸಲು ಪ್ರವೀಣ್ ಅವರು ಯೋಚಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9916688166,080-26723855
Email : [email protected] , [email protected]
FB Page - https://www.facebook.com/gcimbengaluru
ಈ ಹೊಸ ಪ್ರಯೋಗದ ಬಗ್ಗೆ ಪ್ರವೀಣ್ ಗೋಡ್ಖಿಂಡಿ :
(ಒನ್ ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications