Bajrang Dal: ಮಲ್ಲಿಕಾರ್ಜುನ್ ಖರ್ಗೆಗೆ ಕೋರ್ಟ್ ನೋಟಿಸ್ ಜಾರಿ
ಬೆಂಗಳೂರು, ಮೇ 15: ಹಿಂದುಪರ ಧಾರ್ಮಿಕ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಬಜರಂಗದಳವನ್ನು ನಿಷೇಧಿತ ಸಂಘಟನೆಯೊಂದಿಗೆ ಹೋಲಿಕೆ ಮಾಡಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯೊಂದಿಗೆ ಬಜರಂಗದಳ ವನ್ನು ಹೋಲಿಕೆ ಮಾಡಿ ಮಲ್ಲಿಕಾರ್ಜುನ್ ಖರ್ಗೆಗೆ ಮಾತನಾಡಿದ್ದರು. ಈ ಸಂಬಂಧ ಬಜರಂಗದಳ ಪಂಜಾಬ್ ಸಂಗ್ರೂರ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಿತು. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.

ಬಜರಂಗದಳವು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಯುವ ಘಟಕವಾಗಿದೆ. ಈ ವಿಎಚ್ಪಿ ಚಂಡೀಗಡ ಘಟಕವು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳಕ್ಕೆ ಅಪಮಾನ ಮಾಡಿದೆ ಎಂದಿದೆ. ಅಲ್ಲದೇ ಪಿಎಫ್ಐ ಜೊತೆ ಬಜರಂಗ ದಳ ಹೋಲಿಕೆ ಮಾಡಿದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ 100 ಕೋಟಿ ರೂಪಾಯಿ ಮಾನಹಾನಿ ಪರಿಹಾರ ಕೋರಿ ನೋಟಿಸ್ ಜಾರಿ ಮಾಡಿತ್ತು. ಎರಡು ವಾರದೊಳದಗೆ ಮಾನ ಹಾನಿ ಪರಿಹಾರ ನೀಡುವಂತೆ ಆಗ್ರಹಿಸಿತ್ತು.
ಕಾಂಗ್ರೆಸ್ ಪ್ರಣಾಳಿಕೆಗೆ ವಿಎಚ್ಪಿ ಆಕ್ರೋಶ
ಕರ್ನಾಟಕ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಹೊರಡಿತ್ತು. ಅದರಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ದ್ವೇಷದ ವಾತಾವರಣ ಸೃಷ್ಟಿಸಿದರೆ ಅಂತಹ ಬಜರಂಗದಳ, ಪಿಎಫ್ಐ ನಂತಹ ಇನ್ನಿತರಸಂಘಟನೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿತ್ತು.

ಇದಕ್ಕೆ ವ್ಯಾಪಕ ಆಕ್ರೋಶವು ವ್ಯಕ್ತವಾಯಿತು. ಧಾರ್ಮಿಕ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಬಜರಂಗದಳ ವನ್ನು ಭಯೋತ್ಪಾದಕ, ದೇಶ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ನಿಷೇಧಗೊಂಡ ಪಿಎಫ್ಐ ಸಂಘಟನೆ ಜತೆ ಹೋಲಿಕೆ ಮಾಡುವುದು ಸರಿಯಲ್ಲ ಎಂಬ ಕೂಗು ಹೆಚ್ಚಾಗಿತ್ತು. ಅದರ ಭಾಗವಾಗೇ ಮಾನಹಾನಿ ಕುರಿತು ಅರ್ಜಿ ಸಲ್ಲಿಕೆಯಾಗಿದೆ. ವಿಎಚ್ಪಿ ಪರ ವಕೀಲರು ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದರು. ಪರಿಣಾಮ ಸದ್ಯ ಎಐಸಿಸಿ ಅಧ್ಯಕ್ಷರಿಗೆ ನೋಟಿಸ್ ಜಾರಿಯಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications