ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರ ಅಣ್ಣ ನಿಧನ
ಬೆಂಗಳೂರು, ಜುಲೈ 26: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಅಣ್ಣ ಶಿವಪ್ರಸಾದ್ (70) ಅನಾರೋಗ್ಯದ ಕಾರಣದಿಂದ ಇಂದು ನಿಧನರಾಗಿದ್ದಾರೆ.
ಬಹಳ ಕಾಲದಿಂದಲೂ ಅನಾರೋಗ್ಯಪೀಡಿತರಾಗಿದ್ದ ಅವರು ಆರು ತಿಂಗಳಿನಿಂದಲೂ ಕೋಮಾದಲ್ಲಿಯೇ ಇದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಇಂದು ಸ್ಪರ್ಷ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದ ಅವರು, ಸ್ಥಳೀಯ ಕಾಂಗ್ರೆಸ್ ಮುಖಂಡರೂ ಆಗಿದ್ದರು. ಅವರ ಅಂತ್ಯಕ್ರಿಯೆ ತುಮಕೂರು ಜಿಲ್ಲೆ ಸಿದ್ಧಾರ್ಥ ನಗರದಲ್ಲಿರುವ ಅವರ ಜಮೀನಿನಲ್ಲಿ ನಾಳೆ ನಡೆಯಲಿದೆ.

ಸಿದ್ಧಾರ್ಥ ಶಿಕ್ಷಣ ಸಮೂಹದ ಸಂಸ್ಥಾಪಕರಾಗಿದ್ದ ಅವರು, ಶಿಕ್ಷಣ ಸಂಸ್ಥೆಗಳಬೆಳವಣಿಗೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ತುಮಕೂರು ಸೇರಿದಂತೆ ಹಲವು ಕಡೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ.












Click it and Unblock the Notifications