ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರ ಅಣ್ಣ ನಿಧನ

By Manjunatha
|
Google Oneindia Kannada News

ಬೆಂಗಳೂರು, ಜುಲೈ 26: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಅಣ್ಣ ಶಿವಪ್ರಸಾದ್ (70) ಅನಾರೋಗ್ಯದ ಕಾರಣದಿಂದ ಇಂದು ನಿಧನರಾಗಿದ್ದಾರೆ.

ಬಹಳ ಕಾಲದಿಂದಲೂ ಅನಾರೋಗ್ಯಪೀಡಿತರಾಗಿದ್ದ ಅವರು ಆರು ತಿಂಗಳಿನಿಂದಲೂ ಕೋಮಾದಲ್ಲಿಯೇ ಇದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಇಂದು ಸ್ಪರ್ಷ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲೇಬೇಕು: ಪರಮೇಶ್ವರ್ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲೇಬೇಕು: ಪರಮೇಶ್ವರ್

ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದ ಅವರು, ಸ್ಥಳೀಯ ಕಾಂಗ್ರೆಸ್ ಮುಖಂಡರೂ ಆಗಿದ್ದರು. ಅವರ ಅಂತ್ಯಕ್ರಿಯೆ ತುಮಕೂರು ಜಿಲ್ಲೆ ಸಿದ್ಧಾರ್ಥ ನಗರದಲ್ಲಿರುವ ಅವರ ಜಮೀನಿನಲ್ಲಿ ನಾಳೆ ನಡೆಯಲಿದೆ.

Parameshwars brother Shivaprasad passed away

ಸಿದ್ಧಾರ್ಥ ಶಿಕ್ಷಣ ಸಮೂಹದ ಸಂಸ್ಥಾಪಕರಾಗಿದ್ದ ಅವರು, ಶಿಕ್ಷಣ ಸಂಸ್ಥೆಗಳಬೆಳವಣಿಗೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ತುಮಕೂರು ಸೇರಿದಂತೆ ಹಲವು ಕಡೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ.

English summary
Deputy Chief minister G.Parameshwar's brother Shivaprasad (70) has been passed away today in Sparsh hospital Bengaluru. He was in coma for 6 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X