ಪೊಲೀಸರ ಮನೆ ನಿರ್ಮಾಣಕ್ಕೆ ಇನ್ಫೋಸಿಸ್ ನೆರವು: ಪರಮೇಶ್ವರ್
ಬೆಂಗಳೂರು, ಜು.16: ನಗರದ ಕೋನಪ್ಪನ ಅಗ್ರಹಾರದಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣ ಮಾಡುವ ಕುರಿತು ಜು.19 ರಂದು ಕಾರ್ಯಕ್ರಮವನ್ನು ಆಯೋಜಿಸಿದ್ದು ಆ ಕುರಿತು ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಸೋಮವಾರ ವಿಧಾನಸೌಧದಲ್ಲಿ ಭೇಟಿ ಮಾಡಿದರು.
ಇದೇ ವೇಳೆ ಪೊಲೀಸ್ ಸಿಬ್ಬಂದಿಗೆ ವಸತಿ ಹಾಗೂ ಪೊಲೀಸ್ ಠಾಣೆ ನಿರ್ಮಾಣ ಮಾಡಿಕೊಡುವ ಸಂಬಂಧ ಸುಧಾಮೂರ್ತಿ ಅವರೊಂದಿಗೆ ಚರ್ಚಿಸಿದರು. ಠಾಣೆ ನಿರ್ಮಾಣ ಮಾಡಿಕೊಡುವಂತೆ ಅವರಿಗೆ ಮನವಿ ಮಾಡಿದ್ದೇವೆ. ಅವರು ಕೂಡ ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.

ಸರಕಾರದ ವತಿಯಿಂದ ಪೊಲೀಸರಿಗೆ 11ಸಾವಿರ ವಸತಿ ನಿರ್ಮಾಣವಾಗುತ್ತಿದ್ದು ಈಗಾಗಲೇ 7 ಸಾವಿರ ವಸತಿ ನಿರ್ಮಿಸಲಾಗಿದೆ. ಪೊಲೀಸರಿಗೆ ಸೂಕ್ತ ವಸತಿ ಸೌಲಭ್ಯ ನಿರ್ಮಿಸಿಕೊಡುವುದು ನಮ್ಮ ಜವಾಬ್ಧಾರಿ. ಇದಕ್ಕೆ ಕಾರ್ಪೋರೇಟ್ ಕಂಪನಿಗಳು ಜೊತೆಯಾದರೆ ಉತ್ತಮ ಸೌಲಭ್ಯ ಒದಗಿಸಿಕೊಡಲು ಸಾಧ್ಯ ಎಂದರು.












Click it and Unblock the Notifications