ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ:ಸುಧಾಕರ್
ಬೆಂಗಳೂರು,ಜನವರಿ 29: ಜನವರಿ 31ರಂದು ರಾಜ್ಯಾದ್ಯಂತ ನಡೆಯುತ್ತಿರುವ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 17 ರಂದು ಪೋಲಿಯೋ ಲಸಿಕೆ ನೀಡಬೇಕಿತ್ತು. ಕೊರೊನಾ ಲಸಿಕೆ ಬಂದಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಇದೇ ತಿಂಗಳು 31 ರಂದು 0-5 ವರ್ಷದ 64,07,930 ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಲಾಗುವುದು ಎಂದರು.
ಲಸಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಚಾಲನೆ ದೊರೆಯಲಿದೆ. ಪೋಷಕರು ಹಿಂದೆ ಲಸಿಕೆ ಹಾಕಿಸಿದ್ದರೂ ಮತ್ತೆ ಹಾಕಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ. ಕಳೆದ 10-11 ವರ್ಷಗಳಿಂದ ಪೊಲೀಯೋ ಸೋಂಕು ಕಂಡುಬಂದಿಲ್ಲ.

ಭಾರತದಲ್ಲಿ ಈ ರೋಗ ನಿಮೂರ್ಲನೆಯಾಗಿದೆ. ಆದರೆ ಪಕ್ಕದ ಪಾಕಿಸ್ತಾನ, ಅಫ್ಘನಿಸ್ತಾನದಲ್ಲಿ ಈ ರೋಗ ಇರುವುದರಿಂದ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕಿದೆ ಎಂದರು.
ನಮ್ಮಲ್ಲಿ ಒಟ್ಟು 85,05,060 ಡೋಸ್ ಪೋಲಿಯೊ ಲಸಿಕೆ ಲಭ್ಯವಿದೆ. 1,10,179 ವ್ಯಾಕ್ಸಿನೇಟರ್ ಗಳು ಇದ್ದಾರೆ. 6,645 ಸೂಪರ್ ವೈಸರ್ ತಂಡ, 904 ಮೊಬೈಲ್ ತಂಡ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 32,908 ಬೂತ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ 2,90,533 ಮಂದಿಗೆ ಕೋವಿಡ್ ಲಸಿಕೆ ನೀಡಿದ್ದು, ಇವತ್ತಿನವರೆಗೆ 49% ಸಾಧನೆಯಾಗಿದೆ. ಲಸಿಕೆ ಪಡೆದಿರುವುದರಿಂದ ಯಾವುದೇ ಸಾವು ಆಗಿಲ್ಲ. ಈ ಬಗ್ಗೆ ತಪ್ಪು ತಿಳಿವಳಿಕೆ ಬೇಡ. ಕೆಲವೆಡೆ ಅಡ್ಡ ಪರಿಣಾಮವಾಗಿದ್ದು, ಅದು ಕೂಡ ನಂತರ ಪರಿಹಾರವಾಗಿದೆ. ಇಂತಹ ಲಸಿಕೆಯ ರಾಮಬಾಣವನ್ನು ಬಳಸದಿದ್ದರೆ ವ್ಯರ್ಥವಾಗುತ್ತದೆ ಎಂದರು.
ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕ್ರಮ ವಹಿಸಿದೆ ಎಂದರು.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications