ಪಾರ್ಕಿಂಗ್ ಶುಲ್ಕ ಹೆಚ್ಚಳದ ಸುಳಿವು ಕೊಟ್ಟ ಬಿಬಿಎಂಪಿ
ಬೆಂಗಳೂರು, ಸೆ.18 : ಮಹಾನಗರ ಬೆಂಗಳೂರಿನಗೆ ನೂತನ ಸಾರಥಿ ಆಗಮಿಸುತ್ತಿದ್ದಂತೆ ಪಾರ್ಕಿಂಗ್ ಶುಲ್ಕ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ. ಈ ಕುರಿತ ಅಂತಿಮ ನಿರ್ಧಾರ ಸೆ.28ರ ಪಾಲಿಕೆ ಸಾಮಾನ್ಯ ಸಭೆಯ ನಂತರ ಹೊರಬೀಳುವ ಸಾಧ್ಯತೆ ಇದೆ.
ಬಿಬಿಎಂಪಿ ನಗರ ಯೋಜನಾ ನಿರ್ದೇಶನಾಲಯ ನೀಡಿರುವ ವರದಿಯನ್ನು ಜಾರಿಗೆ ತರುವ ಮೂಲಕ ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ಶುಲ್ಕ ಹೆಚ್ಚಿಸುವ ಕುರಿತು ಚಿಂತನೆ ನಡೆಸಿದೆ. ಪಾರ್ಕಿಂಗ್ ಶುಲ್ಕದ ಮೂಲಕವೇ ಪಾಲಿಕೆಗೆ ಅಧಿಕ ಬಂಡವಾಳ ತರಲು ಮುಂದಾಗಿದೆ.

ನಿರ್ದೇಶನಾಲಯದ ವರದಿಯಂತೆ ಬೆಂಗಳೂರಿನ ಪಾರ್ಕಿಂಗ್ ಪ್ರದೇಶಗಳನ್ನು ಎ,ಬಿ ಮತ್ತು ಸಿ ಎಂದು ವಿಂಗಡಿಸಲಾಗುತ್ತದೆ. ಎ ಮತ್ತು ಬಿ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಹೆಚ್ಚು ಏರಿಕೆಯಾದರೆ, ಸಿ ಪಟ್ಟಿಯ ಸ್ಥಳದಲ್ಲಿ ಕಡಿಮೆ ಇರುತ್ತದೆ.
ಎ ಶ್ರೇಣಿಯಲ್ಲಿ ಕಾರುಗಳಿಗೆ ಗಂಟೆಗೆ 30 ರೂ. ಬೈಕ್ ಗಳಿಗೆ 15 ರೂ. ನಿಗದಿಗೊಳಿಸಲಾಗಿದೆ. ಬಿ ಶ್ರೇಣಿಯಲ್ಲಿ ಕಾರುಗಳಿಗೆ 20 ಮತ್ತು ಬೈಕ್ ಗಳಿಗೆ 10ರೂ. ದರ ನಿಗದಿ ಮಾಡಲಾಗಿದೆ. ಸಿ ಶ್ರೇಣಿಯಲ್ಲಿ ಕಾರುಗಳಿಗೆ 15 ಮತ್ತು ಬೈಕ್ ಗಳಿಗೆ 5 ರೂ.ದರ ವಿಧಿಸಲಾಗುತ್ತದೆ.
ಕೇವಲ ಅರ್ಧಗಂಟೆ ವಾಹನ ಪಾರ್ಕ್ ಮಾಡಿದರೆ, ನಿಗದಿಗೊಳಿಸಿದ ದರದ ಅರ್ಧದಷ್ಟನ್ನು ಕಟ್ಟಬೇಕು ಎಂದು ನಿರ್ದೇಶನಾಲಯ ವರದಿಯಲ್ಲಿ ತಿಳಿಸಿದೆ. ಆದರೆ, ಸೈಕಲ್ ಗಳಿಗೆ ಪಾರ್ಕಿಂಗ್ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ, ಸೆ.28ರಂದು ನಡೆಯುವ ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ನಗರ ಯೋಜನಾ ನಿರ್ದೇಶನಾಲಯದ ವರದಿ ಕುರಿತು ಚರ್ಚಿಸಿ ಪಾರ್ಕಿಂಗ್ ಶುಲ್ಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿ ರಸ್ತೆಗೂ ಡಿಜಿಟಲ್ ಫಲಕಗಳನ್ನು ಅಳವಡಿಸಿ, ಪಾರ್ಕಿಂಗ್ ಶುಲ್ಕ, ಪಾರ್ಕಿಂಗ್ ಸ್ಥಳವಕಾಶ ಕುರಿತು ವಾಹನ ಸವಾರರಿಗೆ ಮಾಹಿತಿ ನೀಡಲಾಗುವುದು. ಬೆಳೆಯುತ್ತಿರುವ ವಾಹನ ಸಂಖ್ಯೆಗೆ ಅನುಗುಣವಾಗಿ ಪಾರ್ಕಿಂಗ್ ಶುಲ್ಕ ಹೆಚ್ಚಿಸಲಿದ್ದೇವೆ ಎಂದು ಮೇಯರ್ ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications