ಪಾರ್ಕ್ ವಿಹಾರಕ್ಕೆ 1 ಗಂಟೆ ಹೆಚ್ಚು ಸಮಯ ನೀಡಿದ ಸರ್ಕಾರ
ಬೆಂಗಳೂರು, ಮೇ 25: ಕೊರೊನಾವೈರಸ್ ಲಾಕ್ಡೌನ್ 4.0 ನಡುವೆ ಪಾರ್ಕ್ ಗಳಲ್ಲಿ ವಿಹಾರ, ಜಾಗಿಂಗ್, ವಾಕಿಂಗ್ ಮಾಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಮೇ 19ರಂದು ಪಾರ್ಕ್ ಬಳಿ ಕಂಡು ಬಂದಿದ್ದ ದೃಶ್ಯ ಈಗ ಮತ್ತೆ ಸೋಮವಾರ ಪುನರಾವರ್ತನೆಯಾಗಿದೆ. ಸಂಡೆ ಕರ್ಫ್ಯೂ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಪಾರ್ಕ್ ಗಳು ಮತ್ತೆ ಓಪನ್ ಆಗಿವೆ.
Recommended Video
ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ಬಿಬಿಎಂಪಿ ವ್ಯಾಪ್ತಿಯ ಪಾರ್ಕ್ ಗಳು ಓಪನ್ ಆಗಿವೆ. 57 ದಿನಗಳ ನಂತರ ಪಾರ್ಕ್ ಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ಕೊಟ್ಟಿದ್ದ ಸರ್ಕಾರ, ಬೆಳಗ್ಗೆ 7 ರಿಂದ 9 ಹಾಗೂ ಸಂಜೆ 5 ರಿಂದ 7 ಗಂಟೆವರೆಗೂ ವಿಹಾರಕ್ಕೆ ಅನುಮತಿ ನೀಡಿತ್ತು. ಆದರೆ, ನಡಿಗೆದಾರರ ಸಂಘದವರು ಇನ್ನು ಒಂದು ಗಂಟೆ ಅವಧಿ ವಿಸ್ತರಣೆ ಮಾಡುವಂತೆ ಕಳೆದ ವಾರವೇ ಮನವಿ ಮಾಡಿದ್ದರು.
Morning walk in Lalbagh completed 9.5 KM today #daily10kchallenge @ Lalbagh Botanical Garden, Banglore https://t.co/GYf4UuLHEY
— Poornesh Sharma B (@poornesh4u) May 25, 2020
ಸೋಮವಾರ(ಮೇ 25) ಸರತಿ ಸಾಲಿನಲ್ಲಿ ನಿಂತಿರೋ ವಾಕರ್ಸ್ ಗಳಿಗೆ ಸರ್ಕಾರ ಶುಭ ಸುದ್ದಿ ನೀಡಿದ್ದು, 3 ಗಂಟೆ ವಾಕ್ ಮಾಡೋಕೆ ಅನುಮತಿ ನೀಡಿದೆ. 1 ಗಂಟೆ ಹೆಚ್ಚು ಸಮಯವನ್ನು ನಿಗದಿ ಮಾಡಿರೋ ಸರ್ಕಾರ, ಲಾಲ್ ಬಾಗ್ ಬೆಳಗ್ಗೆ 7 ರಿಂದ 10 ಗಂಟೆವರೆಗೆ ಓಪನ್ ಆಗಿರುತ್ತದೆ ಎಂದು ಹೇಳಿದೆ.

ಲಾಲ್ ಬಾಗ್ ಪ್ರವೇಶಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ನಿಯಮ ಮಾಡಲಾಗಿದೆ. ಹ್ಯಾಂಡ್ ಸ್ಯಾನಿಟೈಸರ್ ಬಳಸಿ ಕೈ ತೊಳೆದುಕೊಂಡ ಬಳಿಕ ಉದ್ಯಾವನವಕ್ಕೆ ಎಂಟ್ರಿ ನೀಡಲಾಗುತ್ತಿದೆ. ಜೊತೆಗೆ ಪ್ರವೇಶ ದ್ವಾರದ ಬಳಿಕ ಟೆಂಪರೇಚರ್ ಚೆಕ್ ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ಪ್ರತಿನಿತ್ಯ ಇಲ್ಲಿಗೆ ಬರುವ ನಡಿಗೆದಾರರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಮುಂಜಾನೆ ಬೇಗ ಬಂದು ಸರತಿ ಸಾಲಿನಲ್ಲಿ ನಿಂತು ನಂತರ ಒಳಪ್ರವೇಶಿಸುತ್ತಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಇತರೆ ಪಾರ್ಕ್ ಗಳಲ್ಲಿ ಅಳವಡಿಸಲಾಗಿರುವ ಜಿಮ್ ಸಾಧನಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ಪಾರ್ಕ್ನ ಒಳಗಿನ ಜಿಮ್ ಉಪಕರಣಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಆ ಉಪಕರಣಗಳನ್ನು ಬಳಸುವ ಮೂಲಕ, ವೈರಸ್ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಪಾರ್ಕ್ ಬಳಕೆ ಮಾಡುವಂತೆ ಬಿಬಿಎಂಪಿ ಅಧಿಕಾರಿ ಸೂಚಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications