ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಮುನಿರತ್ನ ನಾಯ್ಡು ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಅ. 13: ಆರ್.ಆರ್. ನಗರ ಉಪ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದ ಬೆನ್ನಲ್ಲಿಯೆ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ್ದ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಪಕ್ಷದ ಎದುರು ನನ್ನ ಬೇಡಿಕೆ ಏನೂ ಇಲ್ಲ. ಹಲವು ಸಲ ಬಿಜೆಪಿ ಕಚೇರಿಗೆ ಬಂದಿದ್ದೇನೆ, ಯಾವಾಗಲೂ ಬರುವ ರೀತಿಯಲ್ಲಿ ಇವತ್ತೂ ಬಂದು ನಾಯಕರನ್ನು ಭೇಟಿ ಮಾಡಿದ್ದೇನೆ ಎಂದಿದ್ದಾರೆ.

Recommended Video

Muniratna ಅವರಿಗೆ Ticket ಸಿಗುವ ಮುನ್ನವೇ Supreme Court ಕ್ಲೀನ್ ಚಿಟ್ | Oneindia Kannada

ಉಪ ಚುನಾವಣೆಯಲ್ಲಿ ನನಗೆ ಬಿಜೆಪಿ ಟಿಕೆಟ್ ಕೊಡುವ ವಿಚಾರವನ್ನು ನಾಯಕರು ತೀರ್ಮಾನ ಮಾಡುತ್ತಾರೆ. ಏನೇ ಆದರೂ ಕೂಡಾ ಪಕ್ಷ ಹಾಗೂ ನಾಯಕರ ತೀರ್ಮಾನ ಅಂತಿಮ. ನಮ್ಮ ನಾಯಕರನ್ನು ಭೇಟಿ ಮಾಡಿದ್ದೇನೆ, ಯಾವುದೇ ರಾಜಕೀಯ ಚರ್ಚೆಯನ್ನು ಮಾಡಿಲ್ಲ ಎಂದು ಹೇಳಿದ್ದಾರೆ.

ಆರ್. ಆರ್. ನಗರ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಆರ್. ಆರ್. ನಗರ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

Party Will Decide Issue Of Giving Me Bjp Ticket In By-election: Munirathna

ರಾಜಕೀಯ ಪಕ್ಷ ಅಂದ ಮೇಲೆ ಇದೆಲ್ಲಾ ಸಹಜ. ಡಿಸ್ಟರ್ಬ್ ಆಗುವ ವಿಚಾರವೇ ಇಲ್ಲ. ಕ್ಷೇತ್ರ ಗೊತ್ತಿಲ್ಲದೇ ಇದ್ದರೆ ಗೊಂದಲಕ್ಕೆ ಈಡಾಗಬೇಕು. ನನಗೆ ಕ್ಷೇತ್ರ ಹಾಗೂ ಕ್ಷೇತ್ರದ ಸಮಸ್ಯೆ ಗೊತ್ತಿದೆ. ನಾನು ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಬಿಜೆಪಿ ರಾಷ್ಟ್ರೀಯ ಪಕ್ಷ. ಹಿಂದೆ ಕೂಡಾ ಟಿಕೆಟ್ ಘೋಷಣೆ ವೇಳೆ ವಿಳಂಬ ಆಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ.

English summary
The leaders decide the issue of giving me BJP ticket in the by-election. However, the decision of the party and the leaders is final. I have met our leaders, saying that they have not made any political debate said Muirathna in BJP Office. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X