ಡ್ರಾಪ್ ಕೊಡ್ತೀನಿ ಎಂದು ಅಪಹರಿಸಿದ್ರು, ವ್ಯಕ್ತಿ ಪಾರಾಗಿದ್ದು ಹೇಗೆ?
ಬೆಂಗಳೂರು, ಮಾರ್ಚ್ 26: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯನ್ನು ಅಪಹರಿಸಲು ಯತ್ನಿಸಿದ ದುಷ್ಕರ್ಮಿಗಳು ಚಿನ್ನಾಭರಣವನ್ನು ದೋಚಿದ್ದಾರೆ.
ಅಪಹರಣಕ್ಕೆ ಒಳಗಾಗಿದ್ದ ವ್ಯಕ್ತಿಯು ದುಷ್ಕರ್ಮಿಗಳು ಡೀಸೆಲ್ ಹಾಕಿಸಲು ಪೆಟ್ರೋಲ್ ಬಂಕ್ ಬಳಿ ಬಂದಾಗ ಎಚ್ಚೆತ್ತುಕೊಂಡು ಕಾರು ಚಾಲಕನನ್ನು ಕಾಲಿನಿಂದ ಒದ್ದು ಕಾರಿನಿಂದ ಹೊರಬಂದು ತಪ್ಪಿಸಿಕೊಂಡಿದ್ದಾನೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ಕುರಿತು ರೇಗನ್ ಡ್ಯೂಕ್ ಅವರು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ಗಳನ್ನು ಪರಿಶೀಲಿಸಿದ್ದಾರೆ.
ಖಾಸಗಿ ಕಂಪನಿಯೊಂದರಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿರುವ ರೇಗನ್ ಕಾರ್ಯ ನಿಮಿತ್ತ ಕೇರಳದ ಕ್ಯಾಲಿಕಟ್ಗೆ ತೆರಳು ರಾತ್ರಿ ಮೈಸೂರಿನಿಂದ ಬಸ್ ನಲ್ಲಿ ಆಗಮಿಸಿದ್ದು ರಾತ್ರಿ 12.30ರ ಸುಮಾರಿಗೆ ನಾಯಂಡಹಳ್ಳಿ ಜಂಕ್ಷನ್ನಲ್ಲಿ ಇಳಿದುಕೊಂಡಿದ್ದರು.

ಜೆಪಿನಗರದಲ್ಲಿರುವ ತಮ್ಮ ನಿವಾಸಕ್ಕೆ ತೆರಳಲು ಕಾರು ಬುಕ್ ಮಾಡಲು ರೇಗನ್ ರಸ್ತೆ ಬದಿ ನಿಂತುಕೊಂಡಿದ್ದರು. ಈ ವೇಳೆ ಕಾರು ನಿಲ್ಲಿಸಿದ ಚಾಲಕ ಬನಶಂಕರಿ ಕಡೆ ಬರ್ತೀರಾ ಎಂದು ಕೇಳಿದ್ದಾರೆ. ಕಾರಿನಲ್ಲಿ ಚಾಲಕನ ಪಕ್ಕ ಒಬ್ಬರು ಹಾಗೂ ಹಿಂಬದಿ ಇಬ್ಬರು ಕುಳಿತುಕೊಂಡಿದ್ದರು.
ಬನಶಂಕರಿ ಮಾರ್ಗಕ್ಕೆ ತೆರಳುತ್ತಿದ್ದ ಕಾರಿನ ಚಾಲಕ ಹೊರವರ್ತುಲ ರಸ್ತೆಯಲ್ಲಿ ಮೈಸೂರು ರಸ್ತೆಗೆ ತಿರುಗಿಸಿದ್ದಾರೆ. ಸೀಟನ್ನು ಹಿಂದಕ್ಕೆ ನೂಕಿ ರೇಗನ್ ಅವರ ಕಾಲು ಸಿಕ್ಕಿಹಾಕಿಕೊಳ್ಳುವಂತೆ ಮಾಡಿದ್ದಾರೆ.
ಸುಮಾರು 45 ಸಾವಿರ ರೂ ಬೆಲೆ ಬಾಳುವ ಚಿನ್ನದ ಸರ, ಚಿನ್ನದ ಉಂಗುರ, ವಾಚ್ ಬ್ಯಾಗ್ನಲ್ಲಿದ್ದ ಡೆಬಿಟ್, ಕ್ರೆಡಿಟ್ ಕಾರ್ಡ್ ಕಿತ್ತುಕೊಂಡಿದ್ದಾರೆ. ಇದಾದ ಕೆಲವೇ ಹೊತ್ತಲ್ಲಿ ಕೆಂಗೇರಿಯಿಂದ ಸ್ವಲ್ಪ ದೂರದ ಪೆಟ್ರೋಲ್ ಪಂಕ್ ಗೆ ಡೀಸೆಲ್ ಹಾಕಿಸಲು ಬಂದಾಗ ಉದ್ಯೋಗಿ ಕಾರಿನಿಂದ ತಪ್ಪಿಸಿಕೊಂಡಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications