ನಮ್ಮ ಮೆಟ್ರೋದಲ್ಲಿ ಜನದಟ್ಟಣೆ, ಬಿದ್ದು ಪ್ರಯಾಣಿಕನ ಸೊಂಟ ಮುರಿತ
ಬೆಂಗಳೂರು, ಜುಲೈ 27: ಸಾಮಾನ್ಯವಾಗಿ ನಮ್ಮ ಮೆಟ್ರೋ ರೈಲಿನಲ್ಲಿ ಪೀಕ್ ಟೈಂನಲ್ಲಿ ಜನದಟ್ಟಣೆ ಇರುತ್ತದೆ. ಹಾಗೆಯೇ ಇಂದು ಕೂಡ ಬೆಳಗ್ಗಿನ ಜಾವ ರೈಲು ತುಂಬಿ ತುಳುಕುತಿತ್ತು. ಈ ಸಂದರ್ಭ ಜನದಟ್ಟಣೆಯ ಮಧ್ಯೆ ಮೆಟ್ರೋ ರೈಲು ಹತ್ತಲು ತೆರಳಿದಾಗ ಬಿದ್ದು ಪ್ರಯಾಣಿಕರೊಬ್ಬರ ಸೊಂಟದ ಮೂಳೆ ಮುರಿದಿದೆ. ಈ ಘಟನೆ ರಾಜಾಜಿನಗರದ ಮೆಟ್ರೊ ನಿಲ್ದಾಣದಲ್ಲಿ ನಡೆದಿದೆ.
ಪ್ರತಿನಿತ್ಯ ಸಂಚರಿಸುವ 59 ವರ್ಷದ ಬಾಲಕೃಷ್ಣ ರೈ ತಮ್ಮ ಕೆಲಸದ ಸ್ಥಳ ಎಂ.ಜಿ.ರಸ್ತೆಗೆ ಹೋಗಲು ಕೆಂಪೇಗೌಡ ನಿಲ್ದಾಣದ ಪ್ಲಾಟ್ ಫಾರಂ 3 ರಲ್ಲಿ ಇಳಿದಿದ್ದಾರೆ. ಇದೇ ವೇಳೆ ಓರ್ವ ಯುವಕ ಜನದಟ್ಟಣೆ ಮಧ್ಯೆ ಇವರನ್ನು ತಳ್ಳಿದ್ದಾನೆ. ಯುವಕ ನೂಕಿದ ರಭಸಕ್ಕೆ ರೈಯವರ ಸೊಂಟದ ಕೆಳಗೆ ಮೂಳೆ ಮುರಿದು ಪ್ಲಾಟ್ ಫಾರಂನಲ್ಲಿ ಬಿದ್ದಿದ್ದರು.

ರಕ್ಷಣಾ ಇಲಾಖೆಯಲ್ಲಿ ಅಕೌಂಟ್ಸ್ ಆಫೀಸರ್ ಆಗಿರುವ ಬಾಲಕೃಷ್ಣ ರೈ ಇದೀಗ ನಗರದ ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಸೋಮವಾರ ಹಿಪ್ ಬದಲಾವಣೆ ಸರ್ಜರಿ ನಡೆಯಲಿದೆ.
ಹೃದ್ರೋಗಿಯಾಗಿರುವ ಬಾಲಕೃಷ್ಣ ರೈಯವರಿಗೆ ಸಕ್ಕರೆ ಕಾಯಿಲೆ ಕೂಡ ಇದೆ. ಹಾಗಾಗಿ ಗುಣಮುಖವಾಗಲು ಕನಿಷ್ಠ 3 ತಿಂಗಳು ಬೇಕಾಗಬಹುದು ಎಂದು ವೈದ್ಯರು ಹೇಳಿದ್ದಾರೆ.
ಇನ್ನು ಇದಕ್ಕೆ ಉತ್ತರಿಸಿರುವ ಮೆಟ್ರೋ ಅಧಿಕಾರಿಯೊಬ್ಬರು, ನಾವು ಸರದಿಯಲ್ಲಿ ನಿಲ್ಲುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ. ಪ್ಲಾಟ್ ಫಾರಂ ನಲ್ಲಿ, ಎಸ್ಕಲೇಟರ್ ನಲ್ಲಿ ಜನದಟ್ಟಣೆ ಮಧ್ಯೆ ಓಡಿ ತಮಗೆ ಅಥವಾ ಬೇರೆಯವರಿಗೆ ಗಾಯ ಮಾಡಿಕೊಳ್ಳಬೇಡಿ ಎಂದು ಪ್ರಯಾಣಿಕರಿಗೆ ಪದೇ ಪದೇ ಹೇಳುತ್ತೇವೆ. ಆದರೆ ಅನೇಕ ಪ್ರಯಾಣಿಕರು ನಮ್ಮ ಮಾತು ಕೇಳುವುದಿಲ್ಲ ಎಂದಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications