ಬೆಂಗಳೂರಲ್ಲಿ ಪ್ರಯಾಣಿಕರ ಪರದಾಟ: ಎಲ್ಲಿ ಹೋಯ್ತು 3,500 BMTC ಬಸ್.?
ಬೆಂಗಳೂರು, ಮೇ 26: ಲಾಕ್ ಡೌನ್ ನಿಯಮಗಳು ಸಡಿಲಗೊಂಡ ಬಳಿಕ ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಬಸ್ ಸಂಚಾರ ಪುನರಾರಂಭಗೊಂಡಿತು. ಬಿ.ಎಂ.ಟಿ.ಸಿ ಬಸ್ ಗಳು ಬೆಂಗಳೂರಿನ ರಸ್ತೆಗಳಿಗೆ ಇಳಿದರೂ, ಅದರಲ್ಲಿ ಪ್ರಯಾಣ ಮಾಡಲು ಮಾತ್ರ ಹೆಚ್ಚು ಜನ ಮನಸ್ಸು ಮಾಡುತ್ತಿರಲಿಲ್ಲ. ಅದಕ್ಕೆ ಕಾರಣ ಒಂದು 'ಕೊರೊನಾ ವೈರಸ್' ಆದರೆ, ಮತ್ತೊಂದು 'ದುಬಾರಿ ಟಿಕೆಟ್ ದರ'.
Recommended Video
ದಿನದ ಪಾಸ್ ದರದ ಬಗ್ಗೆ ವ್ಯಾಪಕ ಟೀಕೆ ಕೇಳಿಬಂದ್ಮೇಲೆ, ದರ ತಗ್ಗಿಸಲು ಬಿ.ಎಂ.ಟಿ.ಸಿ ಮುಂದಾಗಿದೆ. ಜೊತೆಗೆ ''ಇಂದಿನಿಂದ (ಮೇ 26) 3,500 ಬಸ್ ಗಳು ಬೆಂಗಳೂರಿನಲ್ಲಿ ಸಂಚರಿಸಲಿವೆ'' ಎಂದು ಬಿ.ಎಂ.ಟಿ.ಸಿ ಘೋಷಿಸಿತ್ತು.
ಆದರೆ, ಇಂದು ಬೆಳಗ್ಗೆ ಮೆಜೆಸ್ಟಿಕ್ ನಲ್ಲಿ ಬಿ.ಎಂ.ಟಿ.ಸಿ ಬಸ್ ಗಳೇ ಕಾಣ್ತಿರ್ಲಿಲ್ಲ. ಬಸ್ ಗಳಿಗಾಗಿ ಕಾದು ಕಾದು ಪ್ರಯಾಣಿಕರು ಸುಸ್ತಾಗಿದ್ದರು. ಕೆಲ ಪ್ರಯಾಣಿಕರು ತಮ್ಮ ಆಕ್ರೋಶವನ್ನು ಹೊರಹಾಕಿದ್ಮೇಲೆ, ಬಸ್ ಗಳು ರಸ್ತೆಗಿಳಿದವು.

ಇಂದು 3,500 ಬಸ್ ಸಂಚಾರ
''ಇಂದು 3,500 ಬಸ್ ಬಿಡಲಾಗಿದೆ. ಪ್ರಯಾಣಿಕರ ಗಮನದಲ್ಲಿಟ್ಟುಕೊಂಡು ಹೆಚ್ಚು ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 7 ರವರೆಗೂ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸರ್ಕಾರದ ಆದೇಶವನ್ನ ನಾವೂ, ನಮ್ಮ ಸಿಬ್ಬಂದಿಗಳೂ ಪಾಲಿಸಬೇಕು. ಹೀಗಾಗಿ, ಕಂಡಕ್ಟರ್ ಮತ್ತು ಡ್ರೈವರ್ ಸಹ ಬೆಳಗ್ಗೆ 7 ರ ನಂತರ ಬರ್ತಾರೆ. ಪ್ರಯಾಣಿಕರು ಸಾಮಾಜಿಕ ಅಂತರ ಪಾಲಿಸಬೇಕು. ನಿರ್ವಾಹಕರು, ಚಾಲಕರೊಂದಿಗೆ ಪ್ರಯಾಣಿಕರು ಸಹಕರಿಸಬೇಕು'' ಎಂದು ಬಿ.ಎಂ.ಟಿ.ಸಿ CTM ರಾಜೇಶ್ ಹೇಳಿದ್ದರು.

ಕಾದು ಕಾದು ಸುಸ್ತಾದ ಪ್ರಯಾಣಿಕರು
ಮೆಜೆಸ್ಟಿಕ್ ನ ಬಿ.ಎಂ.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗಿನಿಂದಲೂ ಜನವೋ ಜನ. ಬೆಳಗ್ಗೆ 7 ರಿಂದ ಕಾಯುತ್ತಿದ್ರೂ ಹಲವು ಮಾರ್ಗಗಳಿಗೆ ಬಸ್ ಇಲ್ಲ. ಹೊಸಕೋಟೆ, ಆನೇಕಲ್, ಬೊಮ್ಮನಹಳ್ಳಿ, ಮಾರತ್ತಹಳ್ಳಿ, ಕೆ.ಆರ್.ಪುರದ ಹಲವು ಭಾಗಗಳಿಗೆ ಬಸ್ ಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ, ಬಸ್ ಗಾಗಿ ಕಾದು ಕಾದು ಸುಸ್ತಾದ ಪ್ರಯಾಣಿಕರು ಬಿ.ಎಂ.ಟಿ.ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲಿ ಹೋಯ್ತು 3,500 ಬಿ.ಎಂ.ಟಿ.ಸಿ ಬಸ್..?
ಇಂದು 3,500 ಬಸ್ ಗಳು ಸಂಚಾರ ನಡೆಸಲಿವೆ ಅಂತ ಬಿ.ಎಂ.ಟಿ.ಸಿ ಹೇಳಿತ್ತು. ಆದರೆ, ಗಂಟೆಗೊಂದರಂತೆ ಬಿ.ಎಂ.ಟಿ.ಸಿ ಬಸ್ ಬರುತ್ತಿದೆ. '"ಸಾಮಾಜಿಕ ಅಂತರ ಅಂತಾರೆ. ಆದ್ರೆ ಬಸ್ ಸಂಖ್ಯೆ ಕಡಿಮೆ ಇದೆ. ದೂರದೂರಿಗೆ ಹೋಗ್ಬೇಕು ಅಂದ್ರೆ ಏನ್ ಮಾಡ್ಬೇಕು.? ಬಸ್ ಬಂದ ಕೂಡಲೆ ಹತ್ತಲು ಪ್ರಯಾಣಿಕರು ಮುಗಿಬೀಳ್ತಿದ್ದಾರೆ. ಒಂದು ಸೀಟ್ ನಲ್ಲಿ ಇಬ್ಬರು ಕುಳಿತು ಪ್ರಯಾಣ ಮಾಡುತ್ತಿದ್ದಾರೆ. ಒಂದು ಬಸ್ ನಲ್ಲಿ 45 ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದಾರೆ'' ಎಂದು ಕೆಲ ಪ್ರಯಾಣಿಕರು ತಮ್ಮ ಅಸಮಾಧಾನವನ್ನು ಹೊರಹಾಕಿದರು.

ಎಚ್ಚೆತ್ತ ಅಧಿಕಾರಿಗಳು
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಂತೆಯೇ, ಸ್ಥಳಕ್ಕೆ ದೌಡಾಯಿಸಿದ ಬಿ.ಎಂ.ಟಿ.ಸಿ ಹಿರಿಯ ಅಧಿಕಾರಿಗಳು, ಎಲ್ಲಾ ರೂಟ್ ಗಳಿಗೂ ಬಸ್ ವ್ಯವಸ್ಥೆ ಮಾಡಿದರು. 10 ಗಂಟೆಯ ಬಳಿಕ ಮೆಜೆಸ್ಟಿಕ್ ನಲ್ಲಿ ಬಸ್ ಗಳ ಸಂಖ್ಯೆ ಏರಿಕೆ ಆಯ್ತು.

ಸಾಮಾಜಿಕ ಅಂತರ ಇಲ್ಲ
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಅಂತೂ ಇಲ್ಲವೇ ಇಲ್ಲ. ಬಸ್ ಬಂತು ಎಂಬ ಆತುರದಲ್ಲಿ ಪ್ರಯಾಣಿಕರು ಸಾಮಾಜಿಕ ಅಂತರವನ್ನೇ ಮರೆತುಬಿಡುತ್ತಿದ್ದಾರೆ. ಇನ್ನೂ, ಬಸ್ ಸ್ಟ್ಯಾಂಡ್ ನಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕೂಡ ಇಲ್ಲವಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications