ತುಂಬಿ ತುಳುಕುತ್ತಿದೆ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್: ಇನ್ನೊಂದು ರೈಲಿಗೆ ಆಗ್ರಹ
ಬೆಂಗಳೂರು, ಆಗಸ್ಟ್ 9 : ಬೆಂಗಳೂರು ಬೆಳಗಾವಿ ಮಧ್ಯೆ ನಿತ್ಯ ಸಂಚರಿಸುವ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ ರೈಲಿನಲ್ಲಿ ಮಿತಿಮೀರಿದ ಪ್ರಯಾಣಿಕರ ಸಂದಣಿಯಿಂದ ತೊಂದರೆಯಾಗುತ್ತಿದ್ದು, ಮತ್ತೊಂದು ರೈಲನ್ನು ಆರಂಭಿಸಬೇಕೆಂದು ಬೆಳಗಾವಿ ಹಾಗೂ ಹುಬ್ಬಳ್ಳಿ ಭಾಗದ ಪ್ರಯಾಣಿಕರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ರೈಲ್ವೆ ಸಚಿವ ಪಿಯೂಷ್ ಗೋಯಲ್, ಸಂಸದ ಪ್ರಹ್ಲಾದ್ ಜೋಶಿ, ನೈಋತ್ಯ ರೈಲ್ವೆ ವಲಯದ ವ್ಯವಸ್ಥಾಪಕ ನಿರ್ದೇಶಕರು,ಹುಬ್ಬಳ್ಳಿ ಮತ್ತು ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ಪ್ರಬಂಧಕರಿಗೆ ಪತ್ರ ಬರೆದಿದ್ದು, ಪ್ರತಿದಿನ ರಾತ್ರಿ ಈ ಮಾರ್ಗದಲ್ಲಿ ಮತ್ತೊಂದು ಎಕ್ಸ್ಪ್ರೆಸ್ ರೈಲನ್ನು ಓಡಿಸಬೇಕೆಂದು ಮನವಿ ಮಾಡಿದ್ದಾರೆ.
Sir this is everday rush in Ranichennamma exp btw Belagavi & Bengaluru. Pls provide additional overnight train to decongest this train. @drmubl @drmsbc @GMSWR @JoshiPralhad @AnanthKumar_BJP @RailwaySeva @PiyushGoyal @RailMinIndia #Hubbali #Belagavi #Bengaluru #Karnataka pic.twitter.com/LwkLKg2wUE
— Karnataka Rail Users (@KARailway) August 9, 2018
ಬೆಂಗಳೂರಿನಿಂದ ಮಹಾರಾಷ್ಟ್ರದ ಕೊಲ್ಹಾಪುರದ ನಡುವೆ ಸಂಚರಿಸುವ ಈ ಎಕ್ಸ್ ಪ್ರೆಸ್ ರೈಲು ಪ್ರತಿದಿನ ಬೆಳಗಾವಿಯಿಂದ ಹೊರಡುವಾಗಲೇ ಸಂಪೂರ್ಣವಾಗಿ ತುಂಬಿ ಹೋಗಿರುತ್ತದೆ. ಇದರಿಂದ ಮುಂದೆ ಹತ್ತುವ ಪ್ರಯಾಣಿಕರಿಗೆ ಅನನುಕೂಲ ಉಂಟಾಗುತ್ತಿದೆ. ಅದರಲ್ಲಿಯೂ ವೃದ್ಧರು, ಮಕ್ಕಳು ಸಂಚರಿಸುವುದೂ ತುಂಬಾ ಕಷ್ಟವಾಗಿದೆ ಎಂದು ಕರ್ನಾಟಕ ರೈಲ್ವೆ ಬಳಕೆದಾರರ ಸಂಘ ತಿಳಿಸಿದೆ.

ಇದರಿಂದ ಖಾಸಗಿ ಬಸ್ಗಳ ಮಾಫಿಯಾವನ್ನು ತಡೆಗಟ್ಟಬಹುದು ಎಂದು ಕರ್ನಾಟಕ ರೈಲ್ ಯೂಸರ್ಸ್ ಟ್ವಿಟ್ಟರ್ ಅಭಿಯಾನ ಆರಂಭಿಸಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಟ್ಯಾಗ್ ಮಾಡುವ ಮೂಲಕ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಸಾವಿರಾರು ಪ್ರಯಾಣಿಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಚೆನ್ನಮ್ಮ ಎಕ್ಸ್ಪ್ರೆಸ್ನಲ್ಲಿ ತೆರಳಲು 340ರೂ. ದರವಿದೆ, ಅದೇ ಕೆಎಸ್ಆರ್ಟಿಸಿ ಬಸ್ನಲ್ಲಿ ತೆರಳಲು 569 ರೂ. ತೆರಬೇಕಾಗುತ್ತದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications