ಮಾರ್ಚ್ 1ರಿಂದ ಬೆಂಗಳೂರಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ
ಬೆಂಗಳೂರು, ಫೆಬ್ರವರಿ 18 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ನಗರದಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆಯನ್ನು ಮಾರ್ಚ್ 1ರಿಂದ ಜಾರಿಗೆ ತರಲು ನಿರ್ಧರಿಸಿದೆ. ಪ್ರಾಯೋಗಿಕವಾಗಿ 56 ರಸ್ತೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ.
ಬೆಂಗಳೂರು ನಗರದ ರಸ್ತೆಗಳಲ್ಲಿ ಪೇ ಅಂಡ್ ಪಾರ್ಕ್ ನಿಯಮ ಜಾರಿಗೆ ತರಲು ಪಾಲಿಕೆ ನಿರ್ಧರಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿತ್ತು. 4 ಕಂಪನಿಗಳು ಟೆಂಡರ್ನಲ್ಲಿ ಪಾಲ್ಗೊಂಡಿದ್ದು, ಮುಂದಿನವಾರದಲ್ಲಿ ಟೆಂಡರ್ ಅಂತಿಮಗೊಳ್ಳಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. [ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ : ಎಲ್ಲಿ, ಏನು?]

ಟೆಂಡರ್ ಪಡೆಯುವ ಕಂಪನಿ 56 ರಸ್ತೆಗಳಲ್ಲಿ 2,500 ಕಾರು ಮತ್ತು 4000 ಬೈಕ್ಗಳ ನಿಲುಗಡೆಗೆ ಅವಕಾಶ ಕಲ್ಪಿಸಲಿದೆ. ನಿಯಮ ಜಾರಿಗೆ ಬರಲಿರುವ ರಸ್ತೆಗಳಲ್ಲಿ ಸಿಸಿಟಿವಿ ಆಳವಡಿಸಲಾಗುತ್ತದೆ. ಎಲೆಕ್ಟ್ರಾನಿಕ್ ಬೋರ್ಡ್ಗಳಲ್ಲಿ ಪಾರ್ಕಿಂಗ್ ಲಭ್ಯತೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. [ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಮೊಬೈಲ್ ಅಪ್ಲಿಕೇಶನ್]
ಹಿಂದೆಯೇ ಜಾರಿಗೆ ಬರಬೇಕಿತ್ತು : ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಪೇ ಅಂಡ್ ಪಾರ್ಕ್ ನೀತಿಯನ್ನು ರೂಪಿಸಿತ್ತು. 2015ರಲ್ಲಿಯೇ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿತ್ತು. ಜನವರಿಯಿಂದ ಈ ನಿಯಮ ಜಾರಿಗೆ ಬರಬೇಕಿತ್ತು. ಸದ್ಯ, ಮಾರ್ಚ್ 1ರಿಂದ ಜಾರಿಗೆ ಬರುವ ಸಾಧ್ಯತೆ ಇದೆ. [ಸಂಚಾರ ನಿಯಮ ಮುರಿದು ಪೊಲೀಸರಿಗೆ ಧಮ್ಕಿ ಹಾಕಿದ್ರೆ ಜೈಲೂಟ!]
ಪೇ ಅಂಡ್ ಪಾರ್ಕ್ ವ್ಯವಸ್ಥೆಗಾಗಿ ರಸ್ತೆಗಳನ್ನು ಎ (ಪ್ರೀಮಿಯಂ), ಬಿ (ವಾಣಿಜ್ಯ), ಸಿ (ಸಾಮಾನ್ಯ) ಎಂದು ವಿಂಗಡನೆ ಮಾಡಲಾಗಿದೆ. ಎಲ್ಲಾ ರಸ್ತೆಗಳಿಗೂ ಪ್ರತ್ಯೇಕ ಶುಲ್ಕ ಜಾರಿ ಮಾಡಲಾಗುತ್ತದೆ. ಎ ಶ್ರೇಣಿಯ ರಸ್ತೆಯಲ್ಲಿ ದ್ವಿಚಕ್ರವಾಹನವನ್ನು 1 ಗಂಟೆ ನಿಲ್ಲಿಸಲು 15 ರೂ., ಕಾರನ್ನು ಒಂದು ಗಂಟೆ ನಿಲ್ಲಿಸಲು 30 ರೂ. ಪಾವತಿ ಮಾಡಬೇಕು. [ಸಮ-ಬೆಸ ಸೂತ್ರದ ವಾಹನ ಸಂಚಾರ ಬೆಂಗಳೂರಿಗೆ ಬರಲಿ]
'ಎ' ಶ್ರೇಣಿಯ ರಸ್ತೆಗಳು : 'ಎ' ಶ್ರೇಣಿಯ ರಸ್ತೆಗಳ ವ್ಯಾಪ್ತಿಗೆ ಅವೆನ್ಯೂ ರಸ್ತೆ, ಎಸ್.ಸಿ.ರಸ್ತೆ, ರೇಸ್ ಕೋರ್ಸ್ ಲೂಪ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಕನ್ನಿಂಗ್ ಹ್ಯಾಂ ರಸ್ತೆ, ಕಮರ್ಷಿಯಲ್ ಸ್ಟೀಟ್, ಎಂ.ಜಿ.ರೋಡ್, ಬ್ರಿಗೇಡ್ ರೋಡ್, ರಾಜಾರಾಮ್ ಮೋಹನ್ ರಾಯ್ ರಸ್ತೆ, ಕಸ್ತೂರಬಾ ರಸ್ತೆ, ಲಾಲ್ ಬಾಗ್ ರಸ್ತೆ, ಎನ್.ಆರ್.ರಸ್ತೆ ಸೇರಲಿವೆ.{blurb}
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications