ಮಾರ್ಚ್ 1ರಿಂದ ಬೆಂಗಳೂರಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ
ಬೆಂಗಳೂರು, ಫೆಬ್ರವರಿ 18 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ನಗರದಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆಯನ್ನು ಮಾರ್ಚ್ 1ರಿಂದ ಜಾರಿಗೆ ತರಲು ನಿರ್ಧರಿಸಿದೆ. ಪ್ರಾಯೋಗಿಕವಾಗಿ 56 ರಸ್ತೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ.
ಬೆಂಗಳೂರು ನಗರದ ರಸ್ತೆಗಳಲ್ಲಿ ಪೇ ಅಂಡ್ ಪಾರ್ಕ್ ನಿಯಮ ಜಾರಿಗೆ ತರಲು ಪಾಲಿಕೆ ನಿರ್ಧರಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿತ್ತು. 4 ಕಂಪನಿಗಳು ಟೆಂಡರ್ನಲ್ಲಿ ಪಾಲ್ಗೊಂಡಿದ್ದು, ಮುಂದಿನವಾರದಲ್ಲಿ ಟೆಂಡರ್ ಅಂತಿಮಗೊಳ್ಳಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. [ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ : ಎಲ್ಲಿ, ಏನು?]

ಟೆಂಡರ್ ಪಡೆಯುವ ಕಂಪನಿ 56 ರಸ್ತೆಗಳಲ್ಲಿ 2,500 ಕಾರು ಮತ್ತು 4000 ಬೈಕ್ಗಳ ನಿಲುಗಡೆಗೆ ಅವಕಾಶ ಕಲ್ಪಿಸಲಿದೆ. ನಿಯಮ ಜಾರಿಗೆ ಬರಲಿರುವ ರಸ್ತೆಗಳಲ್ಲಿ ಸಿಸಿಟಿವಿ ಆಳವಡಿಸಲಾಗುತ್ತದೆ. ಎಲೆಕ್ಟ್ರಾನಿಕ್ ಬೋರ್ಡ್ಗಳಲ್ಲಿ ಪಾರ್ಕಿಂಗ್ ಲಭ್ಯತೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. [ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಮೊಬೈಲ್ ಅಪ್ಲಿಕೇಶನ್]
ಹಿಂದೆಯೇ ಜಾರಿಗೆ ಬರಬೇಕಿತ್ತು : ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಪೇ ಅಂಡ್ ಪಾರ್ಕ್ ನೀತಿಯನ್ನು ರೂಪಿಸಿತ್ತು. 2015ರಲ್ಲಿಯೇ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿತ್ತು. ಜನವರಿಯಿಂದ ಈ ನಿಯಮ ಜಾರಿಗೆ ಬರಬೇಕಿತ್ತು. ಸದ್ಯ, ಮಾರ್ಚ್ 1ರಿಂದ ಜಾರಿಗೆ ಬರುವ ಸಾಧ್ಯತೆ ಇದೆ. [ಸಂಚಾರ ನಿಯಮ ಮುರಿದು ಪೊಲೀಸರಿಗೆ ಧಮ್ಕಿ ಹಾಕಿದ್ರೆ ಜೈಲೂಟ!]
ಪೇ ಅಂಡ್ ಪಾರ್ಕ್ ವ್ಯವಸ್ಥೆಗಾಗಿ ರಸ್ತೆಗಳನ್ನು ಎ (ಪ್ರೀಮಿಯಂ), ಬಿ (ವಾಣಿಜ್ಯ), ಸಿ (ಸಾಮಾನ್ಯ) ಎಂದು ವಿಂಗಡನೆ ಮಾಡಲಾಗಿದೆ. ಎಲ್ಲಾ ರಸ್ತೆಗಳಿಗೂ ಪ್ರತ್ಯೇಕ ಶುಲ್ಕ ಜಾರಿ ಮಾಡಲಾಗುತ್ತದೆ. ಎ ಶ್ರೇಣಿಯ ರಸ್ತೆಯಲ್ಲಿ ದ್ವಿಚಕ್ರವಾಹನವನ್ನು 1 ಗಂಟೆ ನಿಲ್ಲಿಸಲು 15 ರೂ., ಕಾರನ್ನು ಒಂದು ಗಂಟೆ ನಿಲ್ಲಿಸಲು 30 ರೂ. ಪಾವತಿ ಮಾಡಬೇಕು. [ಸಮ-ಬೆಸ ಸೂತ್ರದ ವಾಹನ ಸಂಚಾರ ಬೆಂಗಳೂರಿಗೆ ಬರಲಿ]
'ಎ' ಶ್ರೇಣಿಯ ರಸ್ತೆಗಳು : 'ಎ' ಶ್ರೇಣಿಯ ರಸ್ತೆಗಳ ವ್ಯಾಪ್ತಿಗೆ ಅವೆನ್ಯೂ ರಸ್ತೆ, ಎಸ್.ಸಿ.ರಸ್ತೆ, ರೇಸ್ ಕೋರ್ಸ್ ಲೂಪ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಕನ್ನಿಂಗ್ ಹ್ಯಾಂ ರಸ್ತೆ, ಕಮರ್ಷಿಯಲ್ ಸ್ಟೀಟ್, ಎಂ.ಜಿ.ರೋಡ್, ಬ್ರಿಗೇಡ್ ರೋಡ್, ರಾಜಾರಾಮ್ ಮೋಹನ್ ರಾಯ್ ರಸ್ತೆ, ಕಸ್ತೂರಬಾ ರಸ್ತೆ, ಲಾಲ್ ಬಾಗ್ ರಸ್ತೆ, ಎನ್.ಆರ್.ರಸ್ತೆ ಸೇರಲಿವೆ.{blurb}
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications