ಸರ್ಕಾರಿ ನೌಕರರ ವೇತನ ಶೇ.30 ರಷ್ಟು ಹೆಚ್ಚಳಕ್ಕೆ ಆಯೋಗ ಶಿಫಾರಸು
ಬೆಂಗಳೂರು, ಜನವರಿ 31 : ಸುಮಾರು 5.20 ಲಕ್ಷ ಸರ್ಕಾರಿ ನೌಕರರ ವೇತನ ಶೇ. 30 ರಷ್ಟು ಹೆಚ್ಚಳ ಮಾಡುವಂತೆ 6 ನೇ ವೇತನ ಆಯೋಗದ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಎಂ.ಆರ್.ಶ್ರೀನಿವಾಸ್ ಮೂರ್ತಿ ನೇತೃತ್ವದಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಸರ್ಕಾರ ರಚಿಸಿದ್ದ ಆರನೇ ವೇತನ ಆಯೋಗ ತನ್ನ ವರದಿಯ ಮೊದಲ ಸಂಪುಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಪ್ರತಿ ವರ್ಷ 10,208 ಕೋಟಿ ಹೆಚ್ಚಿನ ಹೊರೆಯಾಗಲಿದೆಆಯೋಗದ ವರದಿ ಪರಿಶೀಲಿಸಿ ಜಾರಿಗೆ ಕ್ರಮ ಕೈಗೊಳ್ಳುತ್ತೇವೆ, ವರದಿಯ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ ಬಳಿಕ ಅಧಿವೇಶನದಲ್ಲಿ ಘೋಷಣೆ ಮಾಡುತ್ತೇವೆ. ಎಂದರು.

ವೇತನದಲ್ಲಿನ ಈ ಹೆಚ್ಚಳವು ರಾಜ್ಯದಲ್ಲಿನ ಅನುದಾನಿತ ಶಿಕ್ಷಣ ಸಂಸ್ಥೆಗಳ, ಸ್ಥಳೀಯ ಸಂಸ್ಥೆಗಳ ಮತ್ತು ಪದವಿ ಶಿಕ್ಷಣ ವಿದ್ಯಾಲಯ ಮತ್ತು ವಿಶ್ವವಿದ್ಯಾಲಯಗಳಲ್ಲಿನ ಸುಮಾರು 73,000 ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗುತ್ತದೆ.
ವರದಿಯಲ್ಲಿ ರಾಜ್ಯ ಸರ್ಕಾರದ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಸ್ಥಳೀಯ ಸಂಸ್ಥೆಗಳ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ 2017ರ ಜುಲೈ 1 ರಿಂದ ಜಾರಿಗೆ ಬರುವಂತೆ ಪಿಂಚಣಿ ಶೇ.30 ರಷ್ಟು ಹೆಚ್ಚಳ ಮಾಡಲು ಆಯೋಗವು ಶಿಫಾರಸು ಮಾಡಿದೆ. ಇದು ಸುಮಾರು5.73 ಲಕ್ಷ ಪಿಂಚಣಿದಾರರು ಮತ್ತು ಕುಟುಂಬಕ್ಕೆ ಲಾಭದಾಯಕವಾಗುತ್ತದೆ.
ಪರಿಷ್ಕರಣೆ ನಂತರ, ಪರಿಷ್ಕೃತವೇತನ ಶ್ರೇಣಿಗಳಲ್ಲಿ ಕನಿಷ್ಠ ವೇತನವು 17 ಸಾವಿರ ರೂ ಮತ್ತು ಗರಿಷ್ಠ ವೇತನವು1,50,600 ಮತ್ತು ಭತ್ಯೆಗಳು ಇರಲಿದೆ. ಕನಿಷ್ಠ ಪಿಂಚಣಿ ಮಾಹೆಯಲ್ಲಿ 8,500 ರೂ ಗರಿಷ್ಠ ಪಿಂಚಣಿ ಮಾಹೆಯಾನ 75,300ರಷ್ಟು ತುಟ್ಟಿ ಭತ್ಯೆ, ಕುಟುಂಬ ಪಿಂಚಣಿಯ ಗರಿಷ್ಠ ಮಿತಿಯು ಮಾಹೆಯಾನ 45,180 ತುಟ್ಟಿ ಭತ್ಯೆ ಇರಲಿದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications