ಸರ್ಕಾರಿ ನೌಕರರ ವೇತನ ಶೇ.30 ರಷ್ಟು ಹೆಚ್ಚಳಕ್ಕೆ ಆಯೋಗ ಶಿಫಾರಸು
ಬೆಂಗಳೂರು, ಜನವರಿ 31 : ಸುಮಾರು 5.20 ಲಕ್ಷ ಸರ್ಕಾರಿ ನೌಕರರ ವೇತನ ಶೇ. 30 ರಷ್ಟು ಹೆಚ್ಚಳ ಮಾಡುವಂತೆ 6 ನೇ ವೇತನ ಆಯೋಗದ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಎಂ.ಆರ್.ಶ್ರೀನಿವಾಸ್ ಮೂರ್ತಿ ನೇತೃತ್ವದಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಸರ್ಕಾರ ರಚಿಸಿದ್ದ ಆರನೇ ವೇತನ ಆಯೋಗ ತನ್ನ ವರದಿಯ ಮೊದಲ ಸಂಪುಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಪ್ರತಿ ವರ್ಷ 10,208 ಕೋಟಿ ಹೆಚ್ಚಿನ ಹೊರೆಯಾಗಲಿದೆಆಯೋಗದ ವರದಿ ಪರಿಶೀಲಿಸಿ ಜಾರಿಗೆ ಕ್ರಮ ಕೈಗೊಳ್ಳುತ್ತೇವೆ, ವರದಿಯ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ ಬಳಿಕ ಅಧಿವೇಶನದಲ್ಲಿ ಘೋಷಣೆ ಮಾಡುತ್ತೇವೆ. ಎಂದರು.

ವೇತನದಲ್ಲಿನ ಈ ಹೆಚ್ಚಳವು ರಾಜ್ಯದಲ್ಲಿನ ಅನುದಾನಿತ ಶಿಕ್ಷಣ ಸಂಸ್ಥೆಗಳ, ಸ್ಥಳೀಯ ಸಂಸ್ಥೆಗಳ ಮತ್ತು ಪದವಿ ಶಿಕ್ಷಣ ವಿದ್ಯಾಲಯ ಮತ್ತು ವಿಶ್ವವಿದ್ಯಾಲಯಗಳಲ್ಲಿನ ಸುಮಾರು 73,000 ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗುತ್ತದೆ.
ವರದಿಯಲ್ಲಿ ರಾಜ್ಯ ಸರ್ಕಾರದ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಸ್ಥಳೀಯ ಸಂಸ್ಥೆಗಳ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ 2017ರ ಜುಲೈ 1 ರಿಂದ ಜಾರಿಗೆ ಬರುವಂತೆ ಪಿಂಚಣಿ ಶೇ.30 ರಷ್ಟು ಹೆಚ್ಚಳ ಮಾಡಲು ಆಯೋಗವು ಶಿಫಾರಸು ಮಾಡಿದೆ. ಇದು ಸುಮಾರು5.73 ಲಕ್ಷ ಪಿಂಚಣಿದಾರರು ಮತ್ತು ಕುಟುಂಬಕ್ಕೆ ಲಾಭದಾಯಕವಾಗುತ್ತದೆ.
ಪರಿಷ್ಕರಣೆ ನಂತರ, ಪರಿಷ್ಕೃತವೇತನ ಶ್ರೇಣಿಗಳಲ್ಲಿ ಕನಿಷ್ಠ ವೇತನವು 17 ಸಾವಿರ ರೂ ಮತ್ತು ಗರಿಷ್ಠ ವೇತನವು1,50,600 ಮತ್ತು ಭತ್ಯೆಗಳು ಇರಲಿದೆ. ಕನಿಷ್ಠ ಪಿಂಚಣಿ ಮಾಹೆಯಲ್ಲಿ 8,500 ರೂ ಗರಿಷ್ಠ ಪಿಂಚಣಿ ಮಾಹೆಯಾನ 75,300ರಷ್ಟು ತುಟ್ಟಿ ಭತ್ಯೆ, ಕುಟುಂಬ ಪಿಂಚಣಿಯ ಗರಿಷ್ಠ ಮಿತಿಯು ಮಾಹೆಯಾನ 45,180 ತುಟ್ಟಿ ಭತ್ಯೆ ಇರಲಿದೆ.
-
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ












Click it and Unblock the Notifications