ಅಪಘಾತದಲ್ಲಿ ನವಿಲು ಸಾವು: ಮುಂದೇನಾಯ್ತು ನೋಡಿ
ಬೆಂಗಳೂರು, ಜು.4: ನಗರದ ರಸ್ತೆಯಲ್ಲಿ ಮನುಷ್ಯರು ಅಪಘಾತಕ್ಕೀಡಾಗುವುದು ಸರ್ವೇ ಸಾಮಾನ್ಯ, ಆದರೆ ಬುಧವಾರ ಸಂಭವಿಸಿದ ಅಪಘಾತವೊಂದು ಎಲ್ಲಾ ಅಪಘಾತಗಳಂತೆ ಇರಲಿಲ್ಲ. ಪೀಣ್ಯ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಷ್ಟ್ರಪಕ್ಷಿ ನವಿಲೊಂದು ಆಕಸ್ಮಿಕವಾಗಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿತು, ತಕ್ಷಣ ಮನುಷ್ಯರೇ ಉಳಿಯುವುದು ಕಷ್ಟ ಇನ್ನು ಪಕ್ಷಿ ಉಳಿದೀತೆ.
ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದೇ ಬಿಟ್ಟಿತು, ವಾಹನ ರಭಸಕ್ಕೆ ನವಿಲು ಪ್ರಾಣ ಬಿಟ್ಟಿತು. ಇಷ್ಟೇ ಆಗಿದ್ದರೆ ನವಿಲು ಸತ್ತಿರುವುದು ಯಾರ ಗಮನಕ್ಕೂ ಬರಲಿಲ್ಲ, ಇದನ್ನು ಗಮನಿಸಿದ ಸಾರ್ವಜನಿಕರು ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದರು.
ಸಂಚಾರ ಪೊಲೀಸರು ನವಿಲು ಸತ್ತಿದ್ದನ್ನು ಗಮನಿಸಿ ಅದರ ಮೃತ ದೇಹವನ್ನು ಬೇರೆಡೆಗೆ ಸಾಗಿಸಿದರು.ಅದಾದ ಬಳಿಕ ಇಂತಹ ಘಟನೆಗಳು ಮತ್ತೆ ಮರುಕಳಿಸದಿರಲೆಂದು ಎಚ್ಚರಿಕೆ ನೀಡಲು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸುವುದರಿಂದ ಪ್ರಾಣ ಕಳೆದುಕೊಂಡ ನವಿಲು ಮತ್ತೆ ಬಾರದು ಆದರೆ ರಸ್ತೆಗಳಲ್ಲೂ ಪ್ರಾಣಿಪಕ್ಷಿಗಳನ್ನು ದಯೆಯಿಂದ ಕಾಣಬೇಕು ಎಂಬ ಸಂದೇಶ ಸಾರಲು ಪೀಣ್ಯ ಸಂಚಾರಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ರಸ್ತೆಯ ಮೇಲೆ ನುಗ್ಗುವ ಮನುಷ್ಯ ಪ್ರಾಣಿ, ಪಕ್ಷಿಗಳ ಬಗೆಗೆ ಒಂದಿಷ್ಟು ದಯೆ ತೋರಲೆಂಬುದು ಪೊಲೀಸರ ಕಾಳಜಿಯಾಗಿದೆ. ಪೊಲೀಸರ ಈ ಕ್ರಮ ಪ್ರಾಣಿಪ್ರಿಯರ ಪ್ರಶಂಸೆಗೆ ಪಾತ್ರವಾಗಿದೆ.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
NHAI FASTag: ಏಪ್ರಿಲ್ 1ರಿಂದಲೇ ಫಾಸ್ಟ್ಯಾಗ್ ವಾರ್ಷಿಕ ಪಾಸ್ ದರ ಏರಿಕೆ: ಎನ್ಎಚ್ಎಐ ಘೋಷಣೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications