KSRTCಗೆ ಯಾಮಾರಿಸುತ್ತಿರುವ ಗುತ್ತಿಗೆದಾರರು; ದಾಖಲೆ ಬಹಿರಂಗ
ಬೆಂಗಳೂರು, ಫೆಬ್ರವರಿ 6: ಬೆಂಗಳೂರಿನಿಂದ ಉತ್ತರ ಕರ್ನಾಟಕದ ಕಡೆಗೆ ಸಂಚರಿಸುವವರಿಗೆ ಅನುಕೂಲ ಆಗಲಿ ಎಂದು ಕೆಎಸ್ಆರ್ಟಿಸಿ ಪೀಣ್ಯದಲ್ಲಿ ದೊಡ್ಡ ಬಸ್ ಟರ್ಮಿನಲ್ ಸ್ಥಾಪಿಸಿತ್ತು.
ಆದರೆ, ಈ ಬಸ್ ಟರ್ಮಿನಲ್ನಿಂದ ಸಂಚರಿಸಲು ಉತ್ತರದ ಪ್ರಯಾಣಿಕರು ನಿರಾಸಕ್ತಿ ತೋರಿಸಿದ್ದರಿಂದ ಪುನಃ ಕೆಂಪೇಗೌಡ ಕೇಂದ್ರ ಬಸ್ ನಿಲ್ದಾಣದಿಂದಲೇ ಬಸ್ಗಳನ್ನು ಓಡಿಸಲು ಪ್ರಾರಂಭಿಸಿತ್ತು. ಸದ್ಯ ಉತ್ತರದ ಕಡೆ ಹೋಗುವ ಬಸ್ಗಳು ಎಂಟ್ರಿ ರಿಜಿಸ್ಟರ್ ಮಾಡಲು ಮಾತ್ರ ನಿಲ್ದಾಣದ ಒಳ ಹೋಗಿ ಬರುತ್ತವೆ.
40 ಕೋಟಿ ರುಪಾಯಿ ವೆಚ್ಚ ಮಾಡಿ ಬಸ್ ನಿಲ್ದಾಣ ನಿರ್ಮಿಸಲಾಗಿತ್ತು. ಆದರೆ, ಈಗ ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದ್ದು, ಅಲ್ಲಿನ 96 ಮಳಿಗೆಗಳಿಂದ ಕೆಎಸ್ಆರ್ಟಿಸಿಗೆ ಬರಬೇಕಾಗಿರುವ ಲಕ್ಷಾಂತರ ರುಪಾಯಿ ಬಾಡಿಗೆ ಕೂಡ ಸರಿಯಾಗಿ ಸಂದಾಯವಾಗುತ್ತಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

55 ಲಕ್ಷ ರುಪಾಯಿ ಬಾಕಿ ಬರಬೇಕಿದೆ
ಆರ್ ಟಿ ಐ ಕಾರ್ಯಕರ್ತ ಎನ್ ಶ್ರೀನಿವಾಸ್ ಅವರು ಪೀಣ್ಯ ಬಸವೇಶ್ವರ ಬಸ್ ನಿಲ್ದಾಣದಲ್ಲಿ ಮಳಿಗೆಗಳಿಂದ ನಿಗಮಕ್ಕೆ ಬರಬೇಕಾಗಿರುವ ಬಾಕಿ ಮೊತ್ತದ ಬಗ್ಗೆ ಮಾಹಿತಿ ಕೇಳಿದ್ದರು. ಇದಕ್ಕೆ ಉತ್ತರ ನೀಡಿರುವ ಕೆಎಸ್ಆರ್ಟಿಸಿ, ಪೀಣ್ಯ ಬಸ್ ನಿಲ್ದಾಣದ ಏಕೈಕ ಗುತ್ತಿಗೆದಾರರಿಂದ ನಿಗಮಕ್ಕೆ 1/11/2017 ರಿಂದ 1,85,36577 ರುಪಾಯಿ ಸಂದಾಯವಾಗಿದ್ದು, 55,80,487 ರುಪಾಯಿ ಕಳೆದ ಏಳು ತಿಂಗಳಿನಿಂದ ಬಾಕಿ ಇದೆ ಎಂದು ಮಾಹಿತಿ ನೀಡಿದೆ.

ಬಿಕೋ ಎನ್ನುತ್ತಿರುವ ನಿಲ್ದಾಣ
ಈ ಕುರಿತು ಒನ್ಇಂಡಿಯಾ ಕನ್ನಡದೊಂದಿಗೆ ಮಾತನಾಡಿದ ಆರ್ಟಿಐ ಕಾರ್ಯಕರ್ತ ಎನ್ ಶ್ರೀನಿವಾಸ ಅವರು, ''ದೂರದೃಷ್ಠಿಯಿಲ್ಲದೇ ಕೆಎಸ್ಆರ್ಟಿಸಿ, ಪೀಣ್ಯದಲ್ಲಿ ಬಸ್ ಟರ್ಮಿನಲ್ ಸ್ಥಾಪಿಸಿತು. ಆದರೆ, ಬಳಕೆಯಿಲ್ಲದೇ ಈಗ ಪೀಣ್ಯ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ' ಎಂದರು.

ಬಾಕಿ ಹಣ ವಸೂಲು ಮಾಡಲಿ
''2017 ರಿಂದ ಬಸ್ ನಿಲ್ದಾಣದ ಮಳಿಗೆಗಳನ್ನು ಒಬ್ಬ ಗುತ್ತಿಗೆದಾರರಿಗೆ ಮಾತ್ರ ನೀಡಲಾಗಿದೆ. ಅವರಿಂದ ೫೫ ಲಕ್ಷ ರುಪಾಯಿ ಬಾಕಿ ಉಳಿಸಿಕೊಂಡಿರುವುದು ಕೆಎಸ್ಆರ್ಟಿಸಿ ಅಧಿಕಾರಿಗಳ ವೈಪಲ್ಯತೆಯನ್ನು ಎತ್ತಿ ತೋರಿಸುತ್ತದೆ. ಕೂಡಲೇ ಬಾಕಿ ಹಣವನ್ನು ನಿಗಮ ವಸೂಲು ಮಾಡಬೇಕು'' ಎಂದು ಅವರು ಒತ್ತಾಯಿಸಿದರು.

ವಿಫಲವಾದ ಯೋಜನೆ
2014 ರಲ್ಲಿ ಸುಮಾರು 40 ಕೋಟಿ ರುಪಾಯಿ ವೆಚ್ಚದಲ್ಲಿ ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿತ್ತು. ಆದರೆ, ಇಲ್ಲಿಂದ ಪ್ರಯಾಣಿಕರು ಬಸ್ ಹತ್ತಿ ಇಳಿಯಲು ಮನಸ್ಸು ಮಾಡದ್ದರಿಂದ ಯೋಜನೆ ವಿಫಲವಾಯಿತು. ಸದ್ಯ ನಿಲ್ದಾಣದ ನಿಯಂತ್ರಕರ ಸಹಿ ಹಾಕಿಸಿಕೊಳ್ಳಲು ಮಾತ್ರ ಬಸ್ಗಳು 1 ಕಿಲೋ ಮಿಟರ್ ಬಂದು ಹೋಗುತ್ತವೆ. ಇದು ಕೆಎಸ್ಆರ್ಟಿಸಿಗೆ ಹೊರೆಯಾಗಿ ಪರಿಣಮಿಸಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications