Bengaluru: ಪೀಣ್ಯ ಮೇಲ್ಸೇತುವೆ ಮೇಲೆ ಭಾರಿ ವಾಹನಗಳ ಓಡಾಟಕ್ಕೆ ಶೀಘ್ರದಲ್ಲೇ ಅವಕಾಶ
ತುಮಕೂರು - ಬೆಂಗಳೂರು ರಸ್ತೆಯ ಪೀಣ್ಯ ಮೇಲ್ಸೇತುವೆ ಎರಡು ವರ್ಷಗಳ ನಂತರ ಫೆಬ್ರವರಿ ತಿಂಗಳಿನಲ್ಲಿ ಭಾರೀ ವಾಹನಗಳ ಓಡಾಟಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ. ತುಮಕೂರು ರಸ್ತೆಯಲ್ಲಿ 15-ಮೀಟರ್ ಅಗಲದ, 4.2 ಕಿಮೀ ಉದ್ದದ ಫ್ಲೈಓವರ್ ಮೇಲೆ ಡಿಸೆಂಬರ್ 2021 ರಿಂದ ಬಸ್ಸುಗಳು ಮತ್ತು ಟ್ರಕ್ಗಳ ಓಡಾಟವನ್ನು ನಿಷೇಧಿಸಲಾಗಿತ್ತು.
ಮೇಲ್ಸೇತುವೆ ಮೂರು ವ್ಯಾಪ್ತಿಯಲ್ಲಿರುವ ಪ್ರಿಸ್ಟ್ರೆಸ್ಡ್ ಕೇಬಲ್ಗಳು ತುಕ್ಕು ಹಿಡಿದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ನಿಷೇಧ ಮಾಡಲಾಗಿತ್ತು. ಮೇಲ್ಸೇತುವೇ ಮೇಲೆ ಭಾರಿ ವಾಹನಗಳ ನಿಷೇಧವು ಕೆಳಗಿನ ರಸ್ತೆಯಲ್ಲಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಿತ್ತು. ಇದು ದೈನಂದಿನ ಟ್ರಾಫಿಕ್ ಜಾಮ್ಗೆ ಕಾರಣವಾಗುತ್ತದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಕಳೆದ ವರ್ಷ 38.5 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಕೇಬಲ್ಗಳನ್ನು ಹೆಚ್ಚುವರಿ ಸ್ಲಾಟ್ಗಳಾಗಿ ಸೇರಿಸಲು ಮತ್ತು ಫ್ಲೈಓವರ್ ಅನ್ನು ಬಲಪಡಿಸಲು ಕೆಲಸ ಪ್ರಾರಂಭಿಸಿತು. ಫ್ಲೈಓವರ್ನಲ್ಲಿ 120 ಸ್ಪ್ಯಾನ್ಗಳೊಂದಿಗೆ, ಎನ್ಎಚ್ಎಐ 240 ಪ್ರಿಸ್ಟ್ರೆಸ್ಡ್ ಕೇಬಲ್ಗಳನ್ನು ಸೇರಿಸಿದೆ.
ತಪಾಸಣೆ ಯಶಸ್ವಿ
240 ಪ್ರಿಸ್ಟ್ರೆಸ್ಡ್ ಕೇಬಲ್ಗಳಲ್ಲಿ ಲೋಡ್ ಪರೀಕ್ಷೆಗಳನ್ನು ನಡೆಸಲು ಜನವರಿ 16 ರಂದು ರಾತ್ರಿ 11 ರಿಂದ ಜನವರಿ 19 ರಂದು ಬೆಳಿಗ್ಗೆ 11 ರವರೆಗೆ ಫ್ಲೈಓವರ್ನಲ್ಲಿ ಎಲ್ಲಾ ವಾಹನಗಳ ಚಲನೆಯನ್ನು ಎನ್ಹೆಚ್ಎಐ ಮುಚ್ಚಿತ್ತು. ಲೋಡ್ ಪರೀಕ್ಷೆಯ ಸಮಯದಲ್ಲಿ, 105-106 ಮತ್ತು 117-118 ಕಂಬಗಳನ್ನು ಸಂಪರ್ಕಿಸುವ ಎರಡು ಸ್ಪ್ಯಾನ್ಗಳಲ್ಲಿ ತಲಾ 32 ಟನ್ಗಳನ್ನು ಹೊತ್ತ ಎಂಟು ಟ್ರಕ್ಗಳನ್ನು ನಿಲ್ಲಿಸಲಾಗಿತ್ತು.
"ಲೋಡ್ ಪರೀಕ್ಷೆಯ ಫಲಿತಾಂಶಗಳು ತೃಪ್ತಿಕರವಾಗಿವೆ ಮತ್ತು ಮುಂದಿನ ಅಗತ್ಯ ಕ್ರಮಕ್ಕಾಗಿ ವರದಿಯನ್ನು ಎನ್ಎಚ್ಎಐ ಪ್ರಧಾನ ಕಚೇರಿಗೆ ಕಳುಹಿಸಲಾಗಿದೆ" ಎಂದು ನಾಲ್ಕು ಸದಸ್ಯರ ಮೇಲ್ಸೇತುವೆ ಕುರಿತು ತಜ್ಞರ ಸಮಿತಿ ಮುಖ್ಯಸ್ಥರಾಗಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ಚಂದ್ರ ಕಿಶನ್ ಜೆಎಂ ಹೇಳಿದ್ದಾರೆ.
ಪ್ರೊ ಕಿಶನ್ ಪ್ರಕಾರ, ಸಮಿತಿಯ ಸದಸ್ಯರು ಮತ್ತು ಎನ್ಎಚ್ಎಐ ಅಧಿಕಾರಿಗಳು ಫೆಬ್ರವರಿ 2 ರಂದು ಸಭೆ ಸೇರಿ ವರದಿಯನ್ನು ಚರ್ಚಿಸಲು ಮತ್ತು ಭಾರೀ ವಾಹನಗಳನ್ನು ಫ್ಲೈಓವರ್ ಮೇಲೆ ಸಂಚರಿಸಲು ಅವಕಾಶ ನೀಡುವ ಕುರಿತು ನಿರ್ಧರಿಸುವ ಸಾಧ್ಯತೆಯಿದೆ.
ಎನ್ಎಚ್ಎಐ ಬೆಂಗಳೂರು ಪ್ರಾದೇಶಿಕ ಅಧಿಕಾರಿ ವಿಲಾಸ್ ಪಿ ಬ್ರಹ್ಮಂಕರ್, ಪರೀಕ್ಷಾ ಫಲಿತಾಂಶಗಳು "ಪಾಸಿಟಿವ್" ಎಂದು ತಿಳಿಸಿರುವುದಾಗಿ ಡಿಹೆಚ್ ವರದಿ ಮಾಡಿದೆ. ಶೀಘ್ರದಲ್ಲೇ ಫ್ಲೈಓವರ್ ಅನ್ನು ಭಾರೀ ವಾಹನಗಳಿಗೆ ಮತ್ತೆ ತೆರೆಯಲಾಗುವುದು ಎಂದು ಹೇಳಿದರು.
ಯಾವುದೇ ದಿನಾಂಕವನ್ನು ನಿಗದಿಪಡಿಸಲಾಗಿಲ್ಲವಾದರೂ, ಫೆಬ್ರವರಿ ಆರಂಭದಲ್ಲಿ ಭಾರೀ ವಾಹನಗಳು ಫ್ಲೈಓವರ್ ಬಳಸಲು ಅವಕಾಶ ನೀಡುವ ಸಾಧ್ಯತೆ ಇದೆ.
ಈಗಿರುವ ಕೇಬಲ್ಗಳ ಬದಲಾವಣೆಯನ್ನು ಪರಿಶೀಲಿಸಿದ ನಂತರ ಭಾರೀ ವಾಹನಗಳಿಗೆ ಅನುಮತಿ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎನ್ಎಚ್ಎಐನ ಬೆಂಗಳೂರು ಯೋಜನಾ ನಿರ್ದೇಶಕ ಕೆ.ಬಿ.ಜಯಕುಮಾರ್ ಹೇಳಿರುವುದಾಗಿ ವರದಿಯಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ










Click it and Unblock the Notifications