ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈ ಓವರ್ ಮುಕ್ತ
ಬೆಂಗಳೂರು, ಫೆಬ್ರವರಿ 17; ಬೆಂಗಳೂರು ನಗರದ ವಾಹನ ಸವಾರರಿಗೆ ಸಿಹಿಸುದ್ದಿ. ಸುಮಾರು 56 ದಿನಗಳ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ.
ಪೀಣ್ಯ ಎಲಿವೇಡೆಡ್ ಮೇಲ್ಸೆತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷವಿದೆ ಎಂದು ಡಿಸೆಂಬರ್ 26ರಂದು ಫ್ಲೈ ಓವರ್ ಎರಡೂ ಕಡೆ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಎನ್ಎಚ್ಎಐ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿದೆ.
ಬುಧವಾರ ಸಂಜೆಯಿಂದಲೇ ಕಾರು, ಬೈಕ್, ಆಟೋಗಳ ಸಂಚಾರಕ್ಕೆ ಫ್ಲೈ ಓವರ್ ಮೇಲೆ ಅವಕಾಶ ನೀಡಲಾಗಿದೆ. ಬಸ್, ಲಾರಿ ಸೇರಿದಂತೆ ಭಾರೀ ವಾಹನಗಳ ಸಂಚಾರಕ್ಕೆ ಅನುಮತಿ ಇಲ್ಲ. ಪೀಣ್ಯ ಸಂಚಾರಿ ಠಾಣೆ ಪೊಲೀಸರು ಈ ಕುರಿತು ಟ್ವೀಟ್ ಮಾಡಿದ್ದಾರೆ.

ಸುಮಾರು 56 ದಿನಗಳಿಂದ ಪೀಣ್ಯ ಫ್ಲೈ ಓವರ್ ಮೇಲೆ ಎರಡೂ ಕಡೆ ವಾಹನ ಸಂಚಾರ ಬಂದ್ ಆಗಿತ್ತು. ಇದರಿಂದಾಗಿಗ ಹೊರ ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ಬರುವ ಮತ್ತು ಬೆಂಗಳೂರು ನಗರದಿಂದ ಹೊರ ಹೋಗುವ ವಾಹನಗಳಿಗೆ ತೊಂದರೆಯಾಗಿತ್ತು. ಪ್ರತಿದಿನ ಕಿ. ಮೀ. ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದವು.
ಫ್ಲೈ ಓವರ್ ದುರಸ್ತಿ ಕಾರ್ಯದ ಬಳಿಕ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ತಜ್ಞರ ತಂಡ ಫ್ಲೈ ಓವರ್ ಮೇಲೆ ಲಾರಿಗಳನ್ನು ಓಡಿಸಿ ಭಾರದ ಸುರಕ್ಷತಾ ಪರೀಕ್ಷೆ ನಡೆಸಿದೆ. ಫ್ಲೈ ಓವರ್ ಭಾರೀ ವಾಹನಗಳ ಸಂಚಾರಕ್ಕೆ ಸುರಕ್ಷಿತವಲ್ಲ ಎಂದು ಹೇಳಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ವಿಧಾನಸಭೆಯಲ್ಲಿಯೇ ಮಾಹಿತಿ ನೀಡಿದ್ದಾರೆ. "ಮೇಲ್ಸೆತುವೆ ನಿರ್ಮಾಣ ಮಾಡುವಾಗ ಗುಣಮಟ್ಟ ಪಾಲನೆ ಮಾಡಿಲ್ಲ. ಕಳಪೆ ಕಾಮಗಾರಿಯಿಂದ ಈಗ ಸಮಸ್ಯೆ ಉಂಟಾಗಿದೆ. ಭಾರೀ ವಾಹನಗಳು ಸಂಚಾರ ನಡೆಸಿದಾಗ ಕಂಬಗಳ ಒಳಗಿನ ಕೇಬಲ್ ಬಾಗುತ್ತದೆ. ಆದ್ದರಿಂದ ಭಾರೀ ವಾಹನಗಳ ಸಂಚಾರಕ್ಕೆ ಫ್ಲೈ ಓವರ್ ಸುರಕ್ಷಿತವಲ್ಲ ಎಂಬ ವರದಿ ಬಂದಿದೆ" ಎಂದು ಹೇಳಿದ್ದಾರೆ.
ಆದ್ದರಿಂದ ಪೀಣ್ಯ ಫ್ಲೈ ಓವರ್ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಭಾರೀ ವಾಹನಗಳು ಫ್ಲೈ ಓವರ್ ಕೆಳಗಿನ ರಸ್ತೆಯಲ್ಲಿಯೇ ಸಂಚಾರ ನಡೆಸಬೇಕಿದೆ. ಭಾರೀ ವಾಹನಗಳು ಫ್ಲೈ ಓವರ್ ಮೇಲೆ ಸಂಚಾರ ನಡೆಸದಂತೆ ಸಂಚಾರಿ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ.
10 ವರ್ಷದ ಹಿಂದೆ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಪೀಣ್ಯ ಫ್ಲೈ ಓವರ್ನಲ್ಲಿ 116 ಪಿಲ್ಲರ್ಗಳಿವೆ. ಪಿಲ್ಲರ್ ನಂ 102 ಮತ್ತು 103ರ ಮಧ್ಯೆ 8ನೇ ಮೈಲಿಯ ಸ್ವಾತಿ ಪೆಟ್ರೋಲ್ ಬಂಕ್ ಬಳಿ ಫ್ಲೈ ಓವರ್ಗೆ ಅಳವಡಿಸಿರುವ ಕೇಬಲ್ ದುರಸ್ತಿಗಾಗಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು.
ಈಗ ಐಐಎಸ್ಸಿಯ ತಜ್ಞರು ಎಲ್ಲಾ ಪಿಲ್ಲರ್ಗಳ ಸುರಕ್ಷತೆ ಬಗ್ಗೆ ಮತ್ತೊಂದು ವರದಿ ನೀಡಲಿದ್ದಾರೆ. ಬಳಿಕ ಫ್ಲೈ ಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕುರಿತು ಸರ್ಕಾರ ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ.
ಅಲ್ಲಿಯ ತನಕ ಬೈಕ್, ಕಾರು, ಆಟೋ, ಟೆಂಪೋ ಟ್ರಾವೆಲರ್ಗಳ ಸಂಚಾರಕ್ಕೆ ಮಾತ್ರ ಫ್ಲೈ ಓವರ್ ಮುಕ್ತವಾಗಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಖಾಸಗಿ ಬಸ್, ಲಾರಿ, ದೊಡ್ಡ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ.
ಗೊರಗುಂಟೆಪಾಳ್ಯದಲ್ಲಿಯೇ ಸಂಚಾರಿ ಪೊಲೀಸರು ಭಾರೀ ವಾಹನಗಳ ಫ್ಲೈ ಓವರ್ ಹತ್ತುವುದನ್ನು ನಿರ್ಬಂಧಿಸಲು ನಿಯಂತ್ರಣ ಪೋಲ್ ಆಳವಡಿಕೆ ಮಾಡಿದ್ದಾರೆ. ಮೂರು ಮೀಟರ್ಗಿಂತ ಎತ್ತರ ಇರುವ ವಾಹನಗಳು ಫ್ಲೈ ಓವರ್ ಮೇಲೆ ಸಂಚಾರ ನಡೆಸಲು ಸಾಧ್ಯವಿಲ್ಲ.
-
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಬೆಂಗಳೂರಿನ ರಸ್ತೆಗಳಿಗೆ ಹೊಸ ಮಾದರಿಯ ಡಾಂಬರೀಕರಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಪ್ಡೇಟ್ಸ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications