ಸಿದ್ಧರಾಮಯ್ಯಗೆ ಸಂಕಷ್ಟ ಹೇಳಿಕೊಂಡ ಪೀಣ್ಯ ಕೈಗಾರಿಕೆಗಳ ಸಂಘ
ಬೆಂಗಳೂರು, ಮೇ 2: ಪೀಣ್ಯ ಕೈಗಾರಿಕೆಗಳ ಸಂಘದ ಮುಖಂಡರ ಜೊತೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಭೆ ನಡೆಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಗಿದೆ.
Recommended Video
ಸಭೆಯಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರಾಜು, ಪೀಣ್ಯ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶ್ರೀನಿವಾಸ್ ಹಾಗೂ ಕೈಗಾರಿಕೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಇವರ ಜೊತೆಗೆ ಸಿದ್ಧರಾಮಯ್ಯ ಮಾತುಕತೆ ನಡೆಸಿದ್ದಾರೆ.
ಸಣ್ಣ ಕೈಗಾರಿಕೆಗಳ ಪ್ರಸ್ತುತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ತಮ್ಮ ಸಮಸ್ಯೆಗಳನ್ನು ಪ್ರತಿಪಕ್ಷ ನಾಯಕರ ಗಮನಕ್ಕೆ ಸಂಘದ ಮುಖಂಡರು ತಂದಿದ್ದಾರೆ. ಲಾಕ್ ಡೌನ್ ಆಗಿ 45 ದಿನಗಳು ಕಳೆದಿದ್ದು, ಇದರಿಂದ ಆದ ತೊಂದರೆಗಳನ್ನು ವಿವರಿಸಿದ್ದಾರೆ.

45 ದಿನಗಳಿಂದ ಸಣ್ಣ ಕೈಗಾರಿಕೆಗಳು ಶಟ್ ಡೌನ್ ಆಗಿವೆ. ಉತ್ಪಾದನೆಯೂ, ಮಾರಾಟವೂ ಇಲ್ಲದಂತೆ ಆಗಿದೆ. ಕಾರ್ಖಾನೆಗಳು 45 ದಿನಗಳಿಂದ ಲಾಭ ಕಂಡಿಲ್ಲ. ಇದರ ಜೊತೆಗೆ ಕಾರ್ಮಿಕರಿಗೆ ವೇತನವನ್ನೂ ನೀಡಬೇಕೆಂಬ ಆದೇಶವಿದೆ. ಲಾಕ್ಡೌನ್ ನಂತರ ಕಾರ್ಖಾನೆಗಳನ್ನ ನಡೆಸುವುದೇ ಕಷ್ಟವಾಗಿದೆ. ಹೀಗಾಗಿ, ನಾವು ಕಾರ್ಮಿಕರ ವೇತನ, ವಿಮೆ ಎಲ್ಲಿಂದ ಕಟ್ಟುವುದು. ನಾವು ಕಾರ್ಖಾನೆಗಳನ್ನ ಮುಚ್ಚುವ ಹಂತಕ್ಕೆ ಬಂದಿದ್ದೇವೆ ಎಂದಿದ್ದಾರೆ.
ಸಣ್ಣ ಕೈಗಾರಿಕೆಗಳ ಪುನಶ್ಚೇತನಕ್ಕೆ ವಿಶೇಷ ಯೋಜನೆ ರೂಪಿಸಬೇಕು. ಶೇಕಡ 4ರ ಬಡ್ಡಿ ದರದಲ್ಲಿ ಕೈಗಾರಿಕೆಗಳಿಗೆ ಸಾಲ ಸೌಲಭ್ಯ ಒದಗಿಸಬೇಕು. ಉತ್ಪನ್ನಗಳ ರಫ್ತಿಗೆ ಅವಕಾಶ ಮಾಡಿಕೊಡಬೇಕು. ಸಣ್ಣ ಕೈಗಾರಿಕೆಗಳ ಸಾಲ ಮನ್ನಾ ಮಾಡಬೇಕು. ವಿಮೆ ಸೌಲಭ್ಯವನ್ನ ಸರ್ಕಾರವೇ ತುಂಬಿಕೊಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನಕ್ಕೆ ನಮ್ಮ ಸಮಸ್ಯೆ ತನ್ನಿ ಎಂದು ಸಿದ್ಧರಾಮಯ್ಯ ಮುಂದೆ ಸಂಘದ ಮುಖಂಡರ ಬೇಡಿಕೆ ಇಟ್ಟಿದ್ದಾರೆ.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications