ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ.11 ರಂದು ಬೆಂಗಳೂರಿನಲ್ಲಿ ಪೇಜಾವರ ಶ್ರೀ ಗುರು ನಮನ

|
Google Oneindia Kannada News

ಬೆಂಗಳೂರು, ಜನವರಿ 6: ಇತ್ತೀಚೆಗೆ ಅಗಲಿದ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಗುರು ನಮನ ಕಾರ್ಯಕ್ರಮವನ್ನು ಜನವರಿ 11 ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.

ಅಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಪ್ರಸ್ತುತ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಪೇಜಾವರ ಶ್ರೀ ಸಂಸ್ಮರಣಾ ಸಮಿತಿ ಕಾರ್ಯದರ್ಶಿ ಜಿ ಸುಬ್ಬಣ್ಣ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶಾಸಕ ಅರವಿಂದ ಲಿಂಬಾವಳಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Pejawar Mutt Seer Vishwesha Theertha Swamiji Guru Namana On January 11

ಇಲ್ಲಿ ಕೃಷ್ಣನ ಸೇವೆ, ಅಲ್ಲಿ ರಾಮನ ಸೇವೆ: ಪೇಜಾವರ ಕಿರಿಯ ಶ್ರೀಗಳುಇಲ್ಲಿ ಕೃಷ್ಣನ ಸೇವೆ, ಅಲ್ಲಿ ರಾಮನ ಸೇವೆ: ಪೇಜಾವರ ಕಿರಿಯ ಶ್ರೀಗಳು

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ವಿವಿಧ ರಾಜಕೀಯ ಮುಖಂಡರು ಭಾಗಿಯಾಗಲಿದ್ದಾರೆ. ನಾಡಿನ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದು, ಅಗಲಿದ ಪೇಜಾವರ ಶ್ರೀಗಳ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಡಿಸೆಂಬರ್ 29 ರಂದು ಉಡುಪಿ ಪೇಜಾವರ ಮಠದಲ್ಲಿ ಇಹಲೋಕ ತ್ಯಜಿಸಿದ್ದರು.

English summary
Pejawar Mutt Seer Vishwesha Theertha Swamiji Guru Namana On January 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X