ಅಪಘಾತದ ವಿಡಿಯೋ ಮಾಡಿದ್ರು, ಗಾಯಾಳು ನೋವು ಕಾಣಲಿಲ್ಲ
ಬೆಂಗಳೂರು, ಮಾರ್ಚ್ 13: ಅಪಘಾತದಲ್ಲಿ ಕಾಲು ಮುರಿದು ಏಳಲಾಗದೆ ರಕ್ತಸಿಕ್ತವಾಗಿ ರಸ್ತೆಯಲ್ಲಿ ಬಿದ್ದಿದ್ದರೂ ಆಸ್ಪತ್ರೆಗೆ ಸೇರಿಸಲು ಮುಂದೆ ಬಾರದೆ ಮೊಬೈಲ್ ನಲ್ಲಿ ವಿಡಿಯೋ ಮಾಡುವುದರಲ್ಲಿ ಬಿಜಿಯಾಗಿದ್ದ ಜನತೆಗೆ ಅದೇನು ಹೇಳಬೇಕೋ..
ನಾಯಂಡಹಳ್ಳಿ ಜಂಕ್ಷನ್ ಬಳಿ ಮಂಗಳವಾರ ಮಧ್ಯಾಹ್ನ ಬೈಕ್ ಒಂದು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಮದನ್ ಲಾಲ್ ಕಾಲು ಮುರಿದುಕೊಂಡು ರಸ್ತೆಯಲ್ಲೇ ಬಿದ್ದಿದ್ದಾರೆ, ಅಲ್ಲಿನ ಸುತ್ತಮುತ್ತಲ ಜನರು ನೋಡಿದ್ದರೂ ಕೂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲು ಯಾರೂ ಕೂಡ ಮುಂದಾಗಿಲ್ಲ ಎನ್ನುವುದು ಬೇಸರದ ಸಂಗತಿ.
ರಕ್ತಸಿಕ್ತವಾದ ಕಾಲಿನೊಂದಿಗೆ ರಸ್ತೆಯಲ್ಲೇ ಬಿದ್ದಿದ್ದಾರೆ, ಅವರನ್ನು ನೋಡಿಯೂ ನೋಡದಂತೆ ತೆರಳಿದವರು ಹಲವಾರು, ಇನ್ನುಳಿದವರು ವಿಡಿಯೋ ಮಾಡಿಕೊಳ್ಳುವುದರಲ್ಲಿ ಬಿಜಿಯಾಗಿದ್ದರು. 20ನಿಮಿಷಗಳ ಕಾಲ ರಸ್ತೆಯಲ್ಲೇ ಬಿದ್ದು ಒದ್ದಾಡಿದ್ದಾರೆ, ನಂತರ ಅಂಬ್ಯುಲೆನ್ಸ್ ಕರೆಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಳ್ಳಾರಿಯಲ್ಲೂ ಕೂಡ ಇಂತಹುದೇ ಒಂದು ಘಟನೆ ನಡೆದಿದೆ, ಲಾರಿ-ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ರಸ್ತೆಯಲ್ಲೇ ಬಿದ್ದು ಒದ್ದಾಡಿ ಮೃತಪಟ್ಟಿದ್ದಾರೆ,ಎಲ್ಲರೂ ಮಾನವೀಯತೆ ಮರೆದು ವಿಡಿಯೋ ಚಿತ್ರೀಕರಿಸುವುದರಲ್ಲಿ ಮಗ್ನರಾಗಿದ್ದರು. ಇದೆಲ್ಲ ನೋಡಿದರೆ ನಮ್ಮ ಜನರಿಗೆ ಮಾನವೀಯತೆಯೇ ಇಲ್ಲವೇ ಅಥವಾ ತಮ್ಮ ಕುಟುಂಬಕ್ಕೆ ಮಾತ್ರವೇ ಅದು ಮೀಸಲಾ ಎನ್ನುವ ಪ್ರಶ್ನೆ ಕಾಡುತ್ತದೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications