ಬೆಂಗಳೂರಲ್ಲಿ ಇನ್ಮುಂದೆ ನಾಯಿಗೂ ಲೈಸೆನ್ಸ್ ಬೇಕು!
ಬೆಂಗಳೂರು, ಜನವರಿ20: 'ಇನ್ನು ಮುಂದೆ ಬೆಂಗಳೂರಿನಲ್ಲಿ ನಾಯಿ ಸಾಕುವವರು ಲೈಸನ್ಸ್ ಪಡೆಯಬೇಕು. ಮತ್ತು ಅಪಾರ್ಮೆಂಟುಗಳಲ್ಲಿ ದೊಡ್ಡ ಗಾತ್ರದ ನಾಯಿಗಳನ್ನು ಸಾಕುವಂತಿಲ್ಲ' ಅಂತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯಮಾವಳಿ ಜಾರಿಗೆ ತಂದಿದೆ.[ನಾಯಿಗಾಗಿ ಮದುವೆ ಮುರಿದುಕೊಂಡ ಬೆಂಗಳೂರು ಹುಡುಗಿ]
ಅಪಾರ್ಟ್ಮೆಂಟುಗಳಲ್ಲಿ ವಾಸಿಸುವ ನಾಗರಿಕರು ದೊಡ್ಡ ಗಾತ್ರದ ಗ್ರೇಟ್ ಡೇನ್, ಇಂಗ್ಲಿಷ್ ಮ್ಯಾಸ್ಟಿಫ್, ಬುಲ್ ಡಾಗ್, ಬಾಕ್ಸರ್, ರಾಟ್ ವೀಲರ್, ಸೈಂಟ್ ಬರ್ನಾರ್ಡ್, ಜರ್ಮನ್ ಶೆಫರ್ಡ್, ಗೋಲ್ಡನ್ ರಿಟ್ರೀವರ್ ಮುಂತಾದ ನಾಯಿಗಳನ್ನು ಸಾಕುವಂತಿಲ್ಲ ಎಂದು ಬಿಬಿಎಂಪಿ ಹೊಸ ನಿಯಮಾವಳಿ ಜಾರಿಗೊಳಿಸಿದೆ. ಬೆಂಗಳೂರಿನ ಅಪಾರ್ಟ್ಮೆಂಟುಗಳಲ್ಲಿ ಸಾಕಬಹುದಾದ ನಾಯಿಗಳ ಪಟ್ಟಿಯಲ್ಲಿ ಈ ನಾಯಿಗಳ ಹೆಸರನ್ನು ಅದು ಕೈ ಬಿಟ್ಟಿದೆ.[ಬೀದಿ ನಾಯಿ ದತ್ತು ಪಡೆವ ಅಭಿಯಾನಕ್ಕೆ ಭಾರೀ ಸ್ಪಂದನೆ]

ಅಷ್ಟೆ ಅಲ್ಲದೆ ವಸತಿ ಸಮುಚ್ಚಯಗಳಲ್ಲಿ ಇರುವವರು ಎರಡು ಮಧ್ಯಮ ಗಾತ್ರದ ನಾಯಿಗಳನ್ನು ಸಾಕುವಂತಿಲ್ಲ. ಒಂದು ಮಾತ್ರ ಸಾಕಬಹುದು ಎಂಬುದಾಗಿಯೂ ನಿಯಮಾವಳಿಯಲ್ಲಿ ಹೇಳಲಾಗಿದೆ.
ಇದರ ಜತೆಗೆ ಬೆಂಗಳೂರಿನಲ್ಲಿ ಸಾಕುವ ನಾಯಿಗಳಿಗೆ ಇನ್ನು ಮುಂದೆ ಲೈಸನ್ಸ್ ಪಡೆಯುವುದನ್ನು ಬಿಬಿಎಂಪಿ ಕಡ್ಡಾಯ ಮಾಡಿದೆ. ಮಾತ್ರವಲ್ಲ ಸಾರ್ವಜನಿಕ ಸ್ಥಳದಲ್ಲಿ ನಾಯಿಗಳು ಮಲ ಮೂತ್ರ ವಿಸರ್ಜನೆ ಮಾಡಿದರೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.[ಬೆಂಗಳೂರಲ್ಲಿ ಮನೆಗೊಂದೇ ಸಾಕು ನಾಯಿ ನಿಯಮ ಜಾರಿಗೆ!]
ಬಿಬಿಎಂಪಿಯ ಈ ನಿಯಮಾವಳಿಗಳಿಂದಾಗಿ ನಗರದಲ್ಲಿ ನಾಯಿಗಳ ಸಂಖ್ಯೆ ಕಡಿಮೆಯಾಗಲಿದೆ ಎಂದುಕೊಳ್ಳಲಾಗಿದೆ.
ಬಿಬಿಎಂಪಿಯ ಈ ನಿಯಮಾವಳಿಯ ಬೆನ್ನಿಗೆ ನಗರದಲ್ಲಿ ಸಾಕಲು ಸಾಧ್ಯವಿಲ್ಲದ ನಾಯಿಗಳನ್ನು ಮಾರಾಟ ಮಾಡುವವರ ಮೇಲೆಯೂ ಬಿಬಿಎಂಪಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಗರದಲ್ಲಿರುವ ಅನಧಿಕೃತನಾಯಿ ತಳಿ ವರ್ಧನೆ ಕೇಂದ್ರಗಳನ್ನು ಮುಚ್ಚಬೇಕು ಎಂದು ಪ್ರಾಣಿದಯಾ ಸಂಘಗಳು ಬೇಡಿಕೆ ಇಟ್ಟಿವೆ. 2016ರ ಕಂಪಾಷನ್ ಅನ್ಲಿಮಿಟೆಡ್ ಪ್ಲಸ್ ಆಕ್ಷನ್ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ನಗರದಲ್ಲಿ ಒಟ್ಟು 16 ಅನಧಿಕೃತ ತಳಿ ವರ್ಧನೆ ಕೇಂದ್ರಗಳಿವೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications