ಕಾಶಿನಾಥ್ ನಿಧನ: ಕಲಾಯೋಗಿಗೆ ಅಭಿಮಾನಿಗಳ ಕಂಬನಿ
Recommended Video

ಚಂದನವನದಲ್ಲಿ ತಮ್ಮದೇ ಆದ ವಿಶಿಷ್ಟ ನಟನಾ ಶೈಲಿಯಿಂದ ಸಾವಿರಾರು ಅಭಿಮಾನಿಗಳನ್ನು ಪಡೆದಿದ್ದ ಕಾಶಿನಾಥ್(65) ಅವರು ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳುವುದು ಕಷ್ಟವೇ.
ಹಲವು ವಿಮರ್ಶಕರಿಂದ 'ಅಶ್ಲೀಲ'ಸಂಭಾಷಣಕಾರ ಎಂದೂ ಟೀಕಿಸಿಕೊಂಡಿದ್ದ ಕಾಶಿನಾಥ್, ಇಂಥ ಟೀಕೆಗಳಿಗೆಲ್ಲ ಎಂದಿಗೂ ತಲೆಕೆಡಿಸಿಕೊಂಡವರಲ್ಲ. ಬದುಕಿನಲ್ಲಿ ದಿನ ದಿನವೂ ನಡೆಯುವ ಚಿಕ್ಕ ಪುಟ್ಟ ಸಂಗತಿಗಳನ್ನು ಹೆಕ್ಕಿ ಚಿತ್ರವಾಗಿಸಿದ ಕಾರಣಕ್ಕೆ ಅವರ ಸಿನೆಮಾಗಳು ಜನಸಾಮಾನ್ಯನಿಗೆ ಹೆಚ್ಚು ಆತ್ಮೀಯ ಎನ್ನಿಸಿದ್ದವು.
'ಅನುಭವ'ವಿರಬಹುದು, ಅವಳೇ ನನ್ನ ಹೆಂಡ್ತಿ, ಅವನೇ ನನ್ನ ಗಂಡ, ಅನಂತನ ಅವಾಂತರ, ಕಲಿಯುಗ ಕೃಷ್ಣ... ಹೀಗೇ ಪ್ರತಿ ಚಿತ್ರದ ಮೂಲಕವೂ ಸಿನಿ ರಸಿಕರನ್ನು ನಗೆಗಡಲಲ್ಲಿ ಮುಳುಗೇಳಿಸುವ ಕಲೆ, ಕಾಶಿನಾಥ್ ಅವರಿಗೆ ಚೆನ್ನಾಗಿ ಸಿದ್ಧಿಸಿತ್ತು.
ಅವರ ಅಗಲಿಕೆಯ ಸುದ್ದಿ ಕೇಳುತ್ತಿದ್ದಂತೆಯೇ, 'ಹಲವು ತಲೆಮಾರಿಗೆ ನಗುವನ್ನು ಹಂಚಿದ ನಟ, ನಿರ್ದೇಶಕ ಇನ್ನು ನೆನಪು ಮಾತ್ರ' ಎಂದು ಹಲವರು ಕಂಬನಿ ಮಿಡಿದಿದ್ದಾರೆ.
ಕಾಶಿನಾಥ್ : ಪ್ರತಿಭಾವಂತ, ಸ್ವಾಭಿಮಾನಿ ಮತ್ತು ರೆಬೆಲ್
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಇಂದು (ಜ.18) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು.
| Array |
ನಾವು ಒಬ್ಬ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ!
ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ನೀಡಿ, ಬೆಳೆಸಿದ ಸರಳ ವ್ಯಕ್ತಿ ಕಾಶಿನಾಥ್ ಅವರು. ಅವರು ಎಂದಿಗೂ ಮತ್ತೊಬ್ಬರಿಂದ ಅನುಕಮಪ ನಿರೀಕ್ಷಿಸಿದವರಲ್ಲ. ಒಟ್ಟಿನಲ್ಲಿ ನಾವೊಬ್ಬ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ವೀರೇಶ್ ದೇವಿಶೆಟ್ಟಿ ಎಂಬುವವರು ಟ್ವೀಟ್ ಮಾಡಿದ್ದಾರೆ.
ಕಣ್ಮರೆಯಾದ ಕಲಾಯೋಗಿ ಕಾಶಿನಾಥ್ ಅಪರೂಪದ ಚಿತ್ರಸಂಪುಟ
|
ತುಂಬದಲಾರದ ನಷ್ಟ
ಬಹುಮುಖ ಪ್ರತಿಭೆಯ ನಟ, ನಿರ್ದೇಶಕ ಕಾಶಿನಾಥ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ದಯಪಾಲಿಸಲಿ ಎಂದು ಶ್ರೀರಾಮ್ ಎಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.
|
ನಗಲು ಕಲಿಸಿದ ಚೈತನ್ಯ
ಹಲವು ತಲೆಮಾರುಗಳಿಗೆ ನಗಲು ಕಲಿಸಿದ ಚೈತನ್ಯ! ಕಾಶಿನಾಥ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸುಧಾರಕ್ ಎಂಬುವವರು ಟ್ವೀಟ್ ಮಾಡಿದ್ದಾರೆ.
|
ಅಮೂಲ್ಯ ರತ್ನ ಕಳೆದುಕೊಂಡಿದ್ದೇವೆ!
'ಹಿರಿಯ ನಟ, ನಿರ್ದೇಶಕ ಕಾಶಿನಾಥ್ ನಮ್ಮನ್ನಗಲಿದ್ದಾರೆ. ದಶಕಗಳಿಂದ ನಮ್ಮನ್ನು ರಂಜಿಸಿದ ವ್ಯಕ್ತಿ ಇನ್ನಿಲ್ಲ ಎಂಬುದನ್ನು ಊಹಿಸಿಕೊಳ್ಳಲಿಕ್ಕೇ ಅಸಾಧ್ಯ. ದೇವರು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ನಾಡು ಒಂದು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ' ಎಂದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ ಲಕ್ಷ್ಮಿಕಾಂತ್ ಹಿಂದೊಡ್ಡಿ.
|
ಕನ್ನಡಿಗರು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ!
ನಿಮ್ಮ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಬಹುದೊಡ್ಡ ನಷ್ಟವೇ ಸರಿ. ನಿಮ್ಮ ನಿಧನದ ಸುದ್ದಿ ತಿಳಿದು ತುಂಬಾ ನೋವಾಯಿತು. ಕನ್ನಡಿಗರು ನಿಜಕ್ಕೂ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ ಅಮನ್ ಮಾಶೆಟ್ಟಿ.
|
ಆಯಾಮ ಬದಲಿಸಿದ ದಂತಕತೆ
ಕನ್ನಡ ಚಿತ್ರರಂಗದ ಆಯಾಮ ಬದಲಿಸಿದ ದಂತಕತೆ, ಕಾಶಿನಾಥ್ ಅವರು. ಅವರಿಗೆ ನನ್ನ ಶ್ರದ್ಧಾಂಜಲಿ ಎಂದು ಟ್ವೀಟ್ ಮಾಡಿದ್ದಾರೆ ಸಿದ್ದಾರ್ಥಾಚಾರಿ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications