ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣಗಳಲ್ಲೂ ಇಂದಿರಾ ಕ್ಯಾಂಟೀನ್: ಸಿಎಂ
ಬೆಂಗಳೂರು, ಜನವರಿ 26 : ಹಸಿದವರಿಗೆ ರಿಯಾಯಿತಿ ದರದಲ್ಲಿ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಯೋಜನೆ ವಿರೋಧಿಸುವವರಿಗೆ ಸಾರ್ವಜನಿಕರೇ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಂಚಾರಿ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 198 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಇರಬೇಕೆನ್ನುವುದು ನಮ್ಮ ಉದ್ದೇಶವಾಗಿದೆ.
ಇವುಗಳನ್ನು ಒಟ್ಟಿಗೆ ಪ್ರಾರಂಭಿಸಲು ಕೆಲವರು ಅಡ್ಡಿಪಡಿಸಿದ್ದರು. ಬಡವರ ಕೆಲಸ ಮಾಡುವಾಗ ಕೆಲವರು ಅಸೂಯೆ ಪಡುತ್ತಾರೆ ಎಂದರು.

ರಾಜಕೀಯವಾಗಿ ವಿರೋಧ ಮಾಡುವವರಿಗೆ ಹಸಿವಿನ ಕಷ್ಟ ಗೊತ್ತಿಲ್ಲ. ಯಾರು ಹಸಿವನ್ನು ಅನುಭವಿಸಿದ್ದಾರೋ ಅವರಿಗೆ ಮಾತ್ರ ಹಸಿವಿನ ಕಷ್ಟ ತಿಳಿಯುತ್ತದೆ. ನಮ್ಮ ಉದ್ದೇಶ ಹಸಿವುಮುಕ್ತ ರಾಜ್ಯವನ್ನಾಗಿಸಬೇಕು ಎನ್ನುವುದು. ಕೆಲವರು ಕಾಂಗ್ರೆಸ್ ಮುಕ್ತ ಮಾಡಬೇಕು ಎನ್ನುತ್ತಾರೆ. ನಾವು ಯಾವುದೇ ಪಕ್ಷವನ್ನು ದೂಷಿಸದೆ ರಾಜ್ಯವನ್ನು ಹಸಿವು ಮುಕ್ತ ಮಾಡಲು ಕಂಕಣಬದ್ಧವಾಗಿದ್ದೇವೆ ಎಂದು ತಿಳಿಸಿದರು.
ಇಂದಿರಾ ಕ್ಯಾಂಟೀನ್ ನಲ್ಲಿ ಮಾರ್ಷಲ್ ಗಳ ನೇಮಕ ಮಾಡುವ ಮೂಲಕ ಅವರು ಗುಣಮಟ್ಟ, ಪ್ರಮಾಣ ಹಾಗೂ ನೈರ್ಮಲ್ಯವನ್ನು ಪರೀಕ್ಷಿಸುತ್ತಾರೆ. ಇಂದಿರಾ ಕ್ಯಾಂಟೀನ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು ಬಿಬಿಸಿಯಂತಹ ಮಾಧ್ಯಮಗಳಲ್ಲಿ ಪ್ರಚಾರ ಪಡೆದಿದೆ ಎಂದರು.

ಆಸ್ಪತ್ರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಎಲ್ಲೆಲ್ಲಿ ಜನಸಂದಣಿ ಇರುತ್ತದೋ ಅಲ್ಲೆಲ್ಲ ಇಂದಿರಾ ಕ್ಯಾಂಟೀನ್ ಮಾಡಿದರೆ ಅದಕ್ಕೆ ಅನುದಾನ ನೀಡಲು ಸಿದ್ಧರಿದ್ದೇವೆ. ಕಾಲೇಜುಗಳ ಬಳಿಯೂ ಮುಖ್ಯವಾಗಿ ಬೆಂಗಳೂರಿನ ಮಹಾರಾಣಿ ಕಾಲೇಜು, ಸರ್ಕಾರಿ ಕಾಲೇಜು ಬಳಿ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು ಎಂದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications