ಡಿ 18ರಂದು ಪ್ರತಿಷ್ಠಿತ ಆಸ್ಪತ್ರೆಯ ಸಾಮಾಜಿಕ ಕಳಕಳಿಯ ವಾಕಥಾನ್
ನಗರದ ಪೀಪಲ್ ಟ್ರೀ ಫೌಂಡೇಶನ್ ಆಸ್ಪತ್ರೆ, ಡಿಸೆಂಬರ್ 18 ರಂದು, ವಾಕಥಾನ್ ಮೂಲಕ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಸಂಪೂರ್ಣ ಉಚಿತ ಶಸ್ತ್ರಚಿಕಿತ್ಸೆಯ ಯೋಜನೆಯನ್ನು ವಿಸ್ತರಿಸಲು ದಾನಿಗಳ ಸಹಾಯವನ್ನು ಕೋರಿದೆ.
ಬೆಂಗಳೂರು, ಡಿ 13: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲೊಂದಾದ ಪೀಪಲ್ ಟ್ರೀ ಫೌಂಡೇಶನ್, ಇದೇ ಭಾನುವಾರ (ಡಿ 18) ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಖ್ಯಾತ ವಾಯ್ಲಿನ್ ವಾದಕ ಅನೀಶ್ ವಿದ್ಯಾಶಂಕರ್ ಅವರೊಂದಿಗೆ ವಾಕಥಾನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಪೀಪಲ್ ಟ್ರೀ ಫೌಂಡೇಶನ್ ಆಸ್ಪತ್ರೆ, ಈ ವರ್ಷಾರಂಭದಲ್ಲಿ 'ಪೀಪಲ್ ಟಚ್ - 2' ಯೋಜನೆಯಡಿ, ಆರ್ಥಿಕವಾಗಿ ಹಿಂದುಳಿದ 300 ರೋಗಿಗಳಿಗೆ ಸಂಪೂರ್ಣ ಉಚಿತ ಶಸ್ತ್ರಚಿಕಿತ್ಸೆಯ ಯೋಜನೆಯನ್ನು ಹಾಕಿಕೊಂಡಿತ್ತು.
ಅದರಲ್ಲಿ ಇದುವರೆಗೆ ಅರವತ್ತಕ್ಕೂ ಹೆಚ್ಚು ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿರುವ ಆಸ್ಪತ್ರೆ, ಈ ಯೋಜನೆಯನ್ನು ವಿಸ್ತರಿಸಲು ಡಿಸೆಂಬರ್ 18 ರಂದು, ವಾಕಥಾನ್ ಮೂಲಕ ದಾನಿಗಳ ಸಹಾಯವನ್ನು ಕೋರಿದೆ.

ದಾನಿಗಳು ರೂಪಾಯಿ 1000, 2500, 5000 ಮತ್ತು 25000 ಸಾವಿರ ಮೌಲ್ಯದ ಪಾಸ್ ಅನ್ನು ಪಡೆದು ಸಾಮಾಜಿಕ ಕಳಕಳಿಯ ಈ ಯೋಜನೆಗೆ ಸಹಕರಿಸಬೇಕಾಗಿ ಆಸ್ಪತ್ರೆ ಮನವಿ ಮಾಡಿದೆ. ಮತ್ತು 80ಜಿಯಡಿ ಆದಾಯ ತೆರಿಗೆಯಿಂದ ವಿನಾಯತಿ ಪಡೆಯಬಹುದಾಗಿದೆ ಎಂದು ತಿಳಿಸಿದೆ.
ಅನೀಶ್ ವಿದ್ಯಾಶಂಕರ್ ಅವರ 'ನಿನಾದ' ವಾಯ್ಲಿನ್ ಕಾರ್ಯಕ್ರಮಕ್ಕೆ ಪ್ರಾಯೋಜಕರನ್ನೂ ಪೀಪಲ್ ಟ್ರೀ ಆಸ್ಪತ್ರೆ ಆಹ್ವಾನಿಸಿದ್ದು, ಪ್ರಾಯೋಜಕರಿಗೆ ಮೂವತ್ತು ಉಚಿತ ಪಾಸ್ ಅನ್ನು ನೀಡಲಾಗುವುದು ಎಂದು ಆಸ್ಪತ್ರೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಎರಡು ವರ್ಷಗಳಿಂದ ಪೀಪಲ್ ಟ್ರೀ ಆಸ್ಪತ್ರೆ, 160ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ನಡೆಸಿದ್ದು, ಗ್ರಾಮೀಣ ಭಾಗದಲ್ಲಿ ಐವತ್ತಕ್ಕೂ ಹೆಚ್ಚು ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಿದೆ. ಇದರ ಜೊತೆಗೆ ಇದುವರೆಗೆ ನಲವತ್ತು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಜವಾಬ್ದಾರಿಯನ್ನು ಆಸ್ಪತ್ರೆ ವಹಿಸಿಕೊಂಡಿದೆ.
ಆಸ್ಪತ್ರೆ ಹಮ್ಮಿಕೊಂಡಿರುವ ಸಾಮಾಜಿಕ ಕಳಕಳಿಯ ಈ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಮೊಬೈಲ್ ಸಂಖ್ಯೆ ಮತ್ತು ಈಮೇಲ್ ಐಡಿಯನ್ನು ಸಂಪರ್ಕಿಸಬಹುದಾಗಿದೆ.
ಮೊಬೈಲ್ : 9900027280, 9886707070, 9845853344
ಈಮೇಲ್ ಐಡಿ: [email protected]
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications