ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ!

By Gururaj
|
Google Oneindia Kannada News

ಬೆಂಗಳೂರು, ಜೂನ್ 19 : ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಸ್ಪೀಕರ್ ರಮೇಶ್ ಕುಮಾರ್ ಅವರು ಸೋಮವಾರ ಈ ಕುರಿತು ಹೇಳಿಕೆ ನೀಡಿದ್ದರು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 9 ಗಂಟೆಯ ತನಕ ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಖಾತೆ ಹಂಚಿಕೆಯಾಗದಿದ್ದರೂ ಕೊಠಡಿ ಹಂಚಿಕೆಯಂತೂ ಆಯಿತು!ಖಾತೆ ಹಂಚಿಕೆಯಾಗದಿದ್ದರೂ ಕೊಠಡಿ ಹಂಚಿಕೆಯಂತೂ ಆಯಿತು!

ಶಾಸಕರಿಗೆ ಆಗುತ್ತಿರುವ ಕಿರಿಕಿರಿಯನ್ನು ತಪ್ಪಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಸೋಮವಾರದಿಂದಲೇ ಈ ಆದೇಶ ಅಧಿಕೃತವಾಗಿ ಜಾರಿಗೆ ಬಂದಿದೆ.

Legislator

ವಿಧಾನಸೌಧದ ಪಕ್ಕದಲ್ಲಿಯೇ ಶಾಸಕರ ಭವನವಿದೆ. ಶಾಸಕರು ಕ್ಷೇತ್ರದಲ್ಲಿ ಇದ್ದರೂ ಅವರ ಬೆಂಬಲಿಗರು ಇಲ್ಲಿ ಶಾಸಕರಿಗೆ ನಿಗದಿಯಾದ ಕೊಠಡಿಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಈಗ ಜನರಿಗೆ ರಾತ್ರಿ ಶಾಸಕರ ಭವನಕ್ಕೆ ಜನರಿಗೆ ಪ್ರವೇಶ ಇಲ್ಲದಂತಾಗಿದೆ.

ಹೊಸ ಶಾಸಕರಿಗೆ ತರಬೇತಿ : '2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಮೂರು ದಿನದ ತರಬೇತಿ ನೀಡಲಾಗುತ್ತದೆ' ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ತರಬೇತಿ ನಡೆಯಲಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ

English summary
Karnataka assembly Speaker K. Ramesh Kumar said that, People will not be allowed into the Legislator's Home from 8 p.m. to 9 a.m. This rule will come into effect immediately.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X