ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ!
ಬೆಂಗಳೂರು, ಜೂನ್ 19 : ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ.
ಸ್ಪೀಕರ್ ರಮೇಶ್ ಕುಮಾರ್ ಅವರು ಸೋಮವಾರ ಈ ಕುರಿತು ಹೇಳಿಕೆ ನೀಡಿದ್ದರು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 9 ಗಂಟೆಯ ತನಕ ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಖಾತೆ ಹಂಚಿಕೆಯಾಗದಿದ್ದರೂ ಕೊಠಡಿ ಹಂಚಿಕೆಯಂತೂ ಆಯಿತು!
ಶಾಸಕರಿಗೆ ಆಗುತ್ತಿರುವ ಕಿರಿಕಿರಿಯನ್ನು ತಪ್ಪಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಸೋಮವಾರದಿಂದಲೇ ಈ ಆದೇಶ ಅಧಿಕೃತವಾಗಿ ಜಾರಿಗೆ ಬಂದಿದೆ.
ವಿಧಾನಸೌಧದ ಪಕ್ಕದಲ್ಲಿಯೇ ಶಾಸಕರ ಭವನವಿದೆ. ಶಾಸಕರು ಕ್ಷೇತ್ರದಲ್ಲಿ ಇದ್ದರೂ ಅವರ ಬೆಂಬಲಿಗರು ಇಲ್ಲಿ ಶಾಸಕರಿಗೆ ನಿಗದಿಯಾದ ಕೊಠಡಿಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಈಗ ಜನರಿಗೆ ರಾತ್ರಿ ಶಾಸಕರ ಭವನಕ್ಕೆ ಜನರಿಗೆ ಪ್ರವೇಶ ಇಲ್ಲದಂತಾಗಿದೆ.
ಹೊಸ ಶಾಸಕರಿಗೆ ತರಬೇತಿ : '2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಮೂರು ದಿನದ ತರಬೇತಿ ನೀಡಲಾಗುತ್ತದೆ' ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ತರಬೇತಿ ನಡೆಯಲಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ.
ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ