10 ವರ್ಷಗಳ ಬಳಿಕ ಕಾರ್ಯರೂಪಕ್ಕೆ ಬಂದ ಪೆರಿಫೆರಲ್ ರಸ್ತೆ ಯೋಜನೆ
ಬೆಂಗಳೂರು, ಜೂನ್ 25: ಹತ್ತು ವರ್ಷಗಳ ಬಳಿಕ ಪೆರಿಫೆರಲ್ ರಸ್ತೆ ಯೋಜನೆ ಅಂತೂ ಕಾರ್ಯರೂಪಕ್ಕೆ ಬಂದಿದೆ. ಪೆರಿಫೆರಲ್ ರಸ್ತೆ ಭೂಸ್ವಾಧೀನಕ್ಕೆ 4500 ಕೋಟಿ ರೂ ಸರ್ಕಾರ ಅನುದಾನ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ.
2006ರಲ್ಲಿ ಎಚ್ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಹೊರವರ್ತುಲ ರಸ್ತೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿತ್ತು. ಆದರೆ ಕೆಲವೇ ತಿಂಗಳುಗಳಲ್ಲಿ ಸರ್ಕಾರ ಪತನವಾಗಿತ್ತು.
10 ವರ್ಷಗಳಲ್ಲಿ ಪೆರಿಫೆರಲ್ ರಸ್ತೆ ಮಾಡಲು ಯಾರ ಕೈಯಿಂದಲೂ ಸಾಧ್ಯವಾಗಿಲ್ಲ ಅಂದು ಕೇವಲ 3,700 ಕೋಟಿ ಯೋಜನೆ ಅದಾಗಿದ್ದು, 17 ಸಾವಿರ ಕೋಟಿಗಳಾಗಿವೆ. ಭೂಸ್ವಾಧೀನ ಪ್ರಕ್ರಿಯೆಗಾಗಿ ಕಳೆದ ಸರ್ಕಾರ 4500 ಕೋಟಿಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟಿತ್ತು. ಆದರೆ ಕೇಂದ್ರ ನೆರವು ನೀಡಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಆದರೆ ರಾಜ್ಯದ ಮೈತ್ರಿ ಸರ್ಕಾರದಲ್ಲಿ 4500 ಸಾವಿರ ಕೋಟಿ ಭೂಸ್ವಾಧೀನ ಕೊಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ ಎಂದರು. ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ನೀಡಿದ್ದ ಪರಿಸರ ಅನುಮತಿ ಪತ್ರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ತಡೆಯಾಜ್ಞೆ ನೀಡಿತ್ತು.
2015ರಲ್ಲಿ ಎನ್ಜಿಟಿ ಈ ಯೋಜನೆಗೆ ತಡೆ ನೀಡಿತ್ತು. ಆದರೆ ಎನ್ಜಿಟಿ ತಡೆ ನೀಡಿರುವ ವಿಚಾರ ಅಧಿಕಾರಿಗಳಿಗೆ ತಿಳಿದಿರಲೇ ಇಲ್ಲ.ಯೋಜನೆ ಕುರಿತು ನಡೆದ ಪರಿಶೀಲನೆಯಲ್ಲಿ ಈ ವಿಚಾರ ಬಹಿರಂಗವಾಗಿತ್ತು.
ಜೊತೆಗೆ ಬೆಂಗಳೂರಿನಲ್ಲಿ 102 ಕಿ.ಮೀ ಎಲಿವೇಟೆಡ್ ಕಾರಿಡಾರ್ಗೂ ವಿರೋಧವಿದೆ. 26 ಸಾವಿರ ಕೋಟಿಗಳು ಈ ಯೋಜನೆಗೆ ವೆಚ್ಚವಾಗಲಿದೆ. ಆದರೆ ಅದಕ್ಕೂ ವಿರೋಧವಿದೆ. ಯೋಜನೆ ವಿರೋಧಿಸುವವರು ಟ್ರಾಫಿಕ್ ನಿರ್ವಹಣೆಗೆ ಬೇರೇನಾದರೂ ಪರಿಹಾರವಿದೆಯೇ ಎಂದು ಮಾಹಿತಿ ನೀಡಿದರೆ ಅದರಂತೆಯೇ ಕ್ರಮ ಕೈಗೊಳ್ಳುತ್ತೇವೆ ಎಂದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications