Cubbon Park: ಕಬ್ಬನ್ ಪಾರ್ಕ್ನಲ್ಲಿ ಇನ್ಮುಂದೆ ಇವೆಲ್ಲ ಮಾಡಂಗಿಲ್ಲ, ಖಡಕ್ ರೂಲ್ಸ್ ಜಾರಿ
ಉದ್ಯಾನಗರಿಯ ಆಮ್ಲಜನಕ ಎಂದು ಕರೆಯಲ್ಪಡುವ ಕಬ್ಬನ್ ಪಾರ್ಕ್ ಒಳಗೆ ಸದ್ಯ ಯಾರು ಬೇಕಾದರೂ ಉಚಿತವಾಗಿ ಪ್ರವೇಶಿಸಬಹುದು, ಅಲ್ಲಿನ ಪ್ರಕೃತಿ ಸೊಬಗನ್ನು ಸವಿಯಬಹುದು. ಬೆಳಿಗ್ಗೆ ಹಾಗೂ ಸಂಜೆ ವೇಳೆ ಸಾವಿರಾರು ಮಂದಿ ವಾಕಿಂಗ್, ಜಾಗಿಂಗ್ ಮಾಡುತ್ತಾ ಆರೋಗ್ಯ ಕೂಡ ಕಾಪಾಡಿಕೊಳ್ಳುತ್ತಿದ್ದಾರೆ. ಸದ್ಯ ಕಬ್ಬನ್ಪಾರ್ಕ್ನಲ್ಲಿ ಕಠಿಣ ನಿಯಮವೊಂದು ಜಾರಿಯಾಗಿದ್ದು, ಈ ಬಗ್ಗೆ ತೋಟಗಾರಿಕೆ ಇಲಾಖೆ ಮಾಹಿತಿ ನೀಡಿದೆ.
ಕೆಲವರು ಕಬ್ಬನ್ ಪಾರ್ಕ್ ನಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಪಾರ್ಟಿ ಆಯೋಜಿಸುವುದು, ಹೆಚ್ಚು ಜನರನ್ನು ಸೇರಿಸುವುದು ಇಲಾಖೆ ಗಮನಕ್ಕೆ ಬಂದಿದೆ. ಹಾಗಾಗಿ ಇನ್ನು ಮುಂದೆ ಕಬ್ಬನ್ ಪಾರ್ಕ್ನಲ್ಲಿ 20ಕ್ಕಿಂತ ಹೆಚ್ಚು ಜನರು ಸೇರಿ ಆಯೋಜಿಸುವ ಪಾರ್ಟಿ ಅಥವಾ ಇನ್ನಿತರೆ ಕಾರ್ಯಕ್ರಮಗಳಿಗೆ ತೋಟಗಾರಿಕೆ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯಗೊಳಿಸಿದೆ.

ಉದ್ಯಾನವನದ ನಿಯಮಗಳ ಪ್ರಕಾರ 20 ಮಂದಿಗಿಂತ ಹೆಚ್ಚು ಜನರು ಸೇರಿ ಪಾರ್ಕ್ನಲ್ಲಿ ಯಾವುದೇ ಪಾರ್ಟಿ, ಇನ್ನಿತರೆ ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ಪಡೆಯಲೇಬೇಕು. ಆದರೆ ಇತ್ತೀಚೆಗೆ ಕಬ್ಬನ್ಪಾರ್ಕ್ನಲ್ಲಿ ಮನಬಂದಂತೆ ಜನ ಸೇರುತ್ತಿದ್ದು, ತಮ್ಮಿಷ್ಟದಂತೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ.
ಇದರಿಂದಾಗಿ ಪಾರ್ಕ್ಗೆ ಬರುವ ಸಾರ್ವಜನಿಕರಿಗೆ ಕಿರಿಕಿರಿಯೂ ಆಗುತ್ತದೆ. ಸಾಮಾನ್ಯವಾಗಿ ವೀಕೆಂಡ್ನಲ್ಲಿ ಇಲ್ಲಿಗೆ ಹೆಚ್ಚು ಮಂದಿ ಪುಸ್ತಕ ಪ್ರೇಮಿಗಳು ಬಂದು ಹುಲ್ಲಿನ ಮೇಲೆ ಕುಳಿತು ಶಾಂತವಾಗಿ ಪುಸ್ತಕ ಓದುತ್ತಾರೆ. ಇದಕ್ಕೆಂದೇ ಹಲವು ಗ್ರೂಪ್ಗಳು ಕೂಡ ಇವೆ ಎನ್ನಲಾಗಿದೆ. ಈ ರೀತಿ ಹೆಚ್ಚು ಜನ ಸೇರಿ ಗದ್ದಲ ಉಂಟು ಮಾಡುವುದರಿಂದ ಅಲ್ಲಿ ಉಳಿದವರಿಗೆ ಕಿರಿಕಿರಿಯಾಗುತ್ತದೆ ಎಂದು ದೂರುಗಳು ತೋಟಗಾರಿಕೆಗೆ ದೂರುಗಳು ಬಂದ ಹಿನ್ನೆಲೆ ಈ ನಿಯಮ ಜಾರಿ ಮಾಡಲಾಗಿದೆ.

ನಿನ್ನೆ ಕೂಡ ಕಬ್ಬನ್ ಪಾರ್ಕ್ನಲ್ಲಿ ಸಾವಿರಾರು ಮಂದಿ ಪೂರ್ವಾನುಮತಿ ಇಲ್ಲದೆ ಸೇರಿ ಗದ್ದಲ ಉಂಟು ಮಾಡಿದ್ದಾರೆ ಎಂದು ದೂರುಗಳು ಕೇಳಿಬಂದಿದ್ದು, ಇಲ್ಲಿನ ಬ್ಯಾಂಡ್ಸ್ಟ್ಯಾಂಡ್ ಆವರಣದ ಬಳಿ 1,000ಕ್ಕೂ ಹೆಚ್ಚು ಜನರು ಖಾಸಗಿಯಾಗಿ ಸೇರಿದ್ದಾರೆ, ಅಲ್ಲದೆ ಪೂರ್ವಾನುಮತಿ ಇಲ್ಲದೆ ಕೂಟ ಸೇರಿರುವುದು ಕಂಡುಬಂದಿದೆ. ಇದು ತೋಟಗಾರಿಕೆ ಇಲಾಖೆ ಗಮನಕ್ಕೆ ಬಂದಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೂಡ ತೆಗೆದುಕೊಂಡಿದೆ.
ಹೆಚ್ಚು ಜನ ಸೇರಿದ್ದನ್ನು ಕಂಡ ತೋಟಗಾರಿಕೆ ಇಲಾಖೆಯ ಭದ್ರತಾ ಸಿಬ್ಬಂದಿ ಇಲಾಖೆ ಗಮನಕ್ಕೆ ತಂದಿದ್ದಾರೆ. ಈ ಜನಸಂದಣಿಯಿಂದ ಕಬ್ಬನ್ಪಾರ್ಕ್ನಲ್ಲಿ ಪುಸ್ತಕ ಓದುಗರಿಗೆ ಅಡಚಣೆಯಾಗಿದ್ದು, ಈ ವಿಚಾರವಾಗಿ ತೋಟಗಾರಿಕೆ ಇಲಾಕೆ ವಿಷಾದ ವ್ಯಕ್ತಪಡಿಸಿದೆ. ಅಲ್ಲದೆ ಇನ್ನು ಮುಂದೆ ಇಂತಹ ಯಾವುದೇ ಅನುಮತಿ ಇಲ್ಲದ ಕಾರ್ಯಕ್ರಮಗಳಿಗೆ ಅನುವು ಮಾಡಿಕೊಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಈ ನಿಯಮ ಮೊದಲಿನಿಂದಲೂ ಜಾರಿಯಲ್ಲಿದೆ. ಆದರೆ, ಸಾರ್ವಜನಿಕರು ಇದನ್ನು ಪಾಲಿಸುತ್ತಿರಲಿಲ್ಲ. ಇನ್ನು ಮುಂದೆ ಈ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಅದರಂತೆ ಕಬ್ಬನ್ ಪಾರ್ಕ್ನಲ್ಲಿ 20ಕ್ಕೂ ಹೆಚ್ಚು ಜನರು ಭಾಗವಹಿಸುವ ಯಾವುದೇ ಕಾರ್ಯಕ್ರಮಕ್ಕೆ ತೋಟಗಾರಿಕಾ ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಇದನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಸಬೇಕು ಎಂದು ಹೇಳಿದೆ.
ಈ ಮಾರ್ಗಸೂಚಿಯಂತೆ 20 ಜನರನ್ನು ಮೀರುವ ಕೂಟಗಳಿಗೆ ಮೊದಲೇ ಅನುಮತಿ ಪಡೆಯುವುದು ಅಗತ್ಯವಾಗಿದ್ದು, ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯಬೇಕು ಎಂದೂ ತಿಳಿಸಿದೆ. ಕಬ್ಬನ್ ಪಾರ್ಕ್ ಆಡಳಿತವು ಎಲ್ಲರಿಗೂ ಸುರಕ್ಷಿತ ಮತ್ತು ಆನಂದದಾಯಕ ವಾತಾವರಣವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ, ಹಾಗೆಯೇ ಉದ್ಯಾನವನದ ನಿಯಮಗಳ ಪಾಲನೆಗಳು ಖಚಿತಪಡಿಸುತ್ತದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ (ಕಬ್ಬನ್ ಪಾರ್ಕ್) ಕುಸುಮಾ ಅವರು ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications