ಪಿಇಎಸ್ ಕ್ಯಾಂಪಸ್ ನೀರು ಖಾಲಿ, 21ರಿಂದ ತರಗತಿ
ಬೆಂಗಳೂರು, ಆ.18 : ಎಲೆಕ್ಟ್ರಾನಿಕ್ ಸಿಟಿ ಪ್ರದೇಶದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನನಲ್ಲಿ ಗುರುವಾರದಿಂದ ತರಗತಿಗಳು ಪುನಃ ಆರಂಭವಾಗಲಿವೆ ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಕೆರೆ ಒಡೆದು ಕಾಲೇಜಿನ ಆವರಣದಲ್ಲಿ ತುಂಬಿಕೊಂಡಿದ್ದ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ.
ಆ.15ರ ಶುಕ್ರವಾರ ರಾಯಸಂದ್ರ ಕರೆ ಒಡೆದ ಪರಿಣಾಮ ಅದರಲ್ಲಿ ಸಂಗ್ರಹವಾಗಿದ್ದ ಕೊಳಚೆ ನೀರು ಹರಿದು ಹೊರಬಂದಿತ್ತು. ಕೆರೆ ಪಕ್ಕದಲ್ಲೇ ಇರುವ ಪಿಇಎಸ್ ಕಾಲೇಜು ಸ್ವಲ್ಪ ತಗ್ಗು ಪ್ರದೇಶದಲ್ಲಿ ಇರುವುದರಿಂದ ಇಡೀ ಆವರಣದೊಳಗೆ ನೀರು ಸಂಗ್ರಹವಾಗಿತ್ತು.

ಕಾಲೇಜಿನ ಪಾರ್ಕಿಂಗ್ ಪ್ರದೇಶ, ಕೆಳ ಮಹಡಿಯ ಕೆಲ ಕೊಠಡಿಗಳು, ಆವರಣದಲ್ಲಿ ನಿಂತಿದ್ದ ವಾಹನಗಳು ಸಂಪೂರ್ಣ ಜಲಾವೃತಗೊಂಡಿದ್ದವು. 30 ಪಂಪ್ ಸೆಟ್ಗಳ ಮುಖಾಂತರ ಮೂರು ದಿನ ನಿರಂತರ ಕಾರ್ಯಾಚರಣೆ ನಡೆಸಿ ನೀರನ್ನು ಹೊರಹಾಕಲಾಗಿದೆ.
ಕಾಲೇಜಿನ ಕ್ಯಾಂಪಸ್ ನಾಲ್ಕು ಬ್ಲಾಕ್ಗಳ ಆವರಣದಲ್ಲಿದ್ದ ನೀರನ್ನು ಹೊರಹಾಕಲಾಗಿದ್ದು, ಆ.21ರ ಗುರುವಾರದಿಂದ ತರಗತಿಗಳು ಆರಂಭವಾಗಲಿವೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ. ನೀರು ಹರಿದುಬಂದಿದ್ದರಿಂದ ಆವರಣದಲ್ಲಿ ತ್ಯಾಜ್ಯಗಳು ತುಂಬಿಹೋಗಿದ್ದವು. ಸದ್ಯ ಆವರಣವನ್ನು ಸ್ವಚ್ಛಗೊಳಿಸಿ ಕ್ರಿಮಿನಾಶಕ ಸಿಂಪಡಿಸಲಾಗುತ್ತಿದೆ.
ಕಾಲೇಜು ಅವರಣದಲ್ಲಿರುವ ವಸತಿ ನಿಲಯದಲ್ಲಿ 200 ವಿದ್ಯಾರ್ಥಿಗಳು ವಾಸವಾಗಿದ್ದರು. ಕಾಲೇಜು ಸಂಪೂರ್ಣ ಜಲಾವೃತಗೊಂಡಿದ್ದರಿಂದ ಆ ವಿದ್ಯಾರ್ಥಿಗಳನ್ನು ಬೋಟ್ಗಳ ಮೂಲಕ ಕಾಲೇಜು ಆವರಣದಿಂದ ಹೊರಗೆ ಕರೆತಂದು ಬನಶಂಕರಿ ರಿಂಗ್ ರಸ್ತೆಯಲ್ಲಿರುವ ಪಿಇಎಸ್ಐಟಿಗೆ ಹಾಸ್ಟೆಲ್ಗೆ ಸ್ಥಳಾಂತರಿಸಲಾಗಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications