ಪಿಇಎಸ್ ಕ್ಯಾಂಪಸ್ ನೀರು ಖಾಲಿ, 21ರಿಂದ ತರಗತಿ
ಬೆಂಗಳೂರು, ಆ.18 : ಎಲೆಕ್ಟ್ರಾನಿಕ್ ಸಿಟಿ ಪ್ರದೇಶದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನನಲ್ಲಿ ಗುರುವಾರದಿಂದ ತರಗತಿಗಳು ಪುನಃ ಆರಂಭವಾಗಲಿವೆ ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಕೆರೆ ಒಡೆದು ಕಾಲೇಜಿನ ಆವರಣದಲ್ಲಿ ತುಂಬಿಕೊಂಡಿದ್ದ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ.
ಆ.15ರ ಶುಕ್ರವಾರ ರಾಯಸಂದ್ರ ಕರೆ ಒಡೆದ ಪರಿಣಾಮ ಅದರಲ್ಲಿ ಸಂಗ್ರಹವಾಗಿದ್ದ ಕೊಳಚೆ ನೀರು ಹರಿದು ಹೊರಬಂದಿತ್ತು. ಕೆರೆ ಪಕ್ಕದಲ್ಲೇ ಇರುವ ಪಿಇಎಸ್ ಕಾಲೇಜು ಸ್ವಲ್ಪ ತಗ್ಗು ಪ್ರದೇಶದಲ್ಲಿ ಇರುವುದರಿಂದ ಇಡೀ ಆವರಣದೊಳಗೆ ನೀರು ಸಂಗ್ರಹವಾಗಿತ್ತು.

ಕಾಲೇಜಿನ ಪಾರ್ಕಿಂಗ್ ಪ್ರದೇಶ, ಕೆಳ ಮಹಡಿಯ ಕೆಲ ಕೊಠಡಿಗಳು, ಆವರಣದಲ್ಲಿ ನಿಂತಿದ್ದ ವಾಹನಗಳು ಸಂಪೂರ್ಣ ಜಲಾವೃತಗೊಂಡಿದ್ದವು. 30 ಪಂಪ್ ಸೆಟ್ಗಳ ಮುಖಾಂತರ ಮೂರು ದಿನ ನಿರಂತರ ಕಾರ್ಯಾಚರಣೆ ನಡೆಸಿ ನೀರನ್ನು ಹೊರಹಾಕಲಾಗಿದೆ.
ಕಾಲೇಜಿನ ಕ್ಯಾಂಪಸ್ ನಾಲ್ಕು ಬ್ಲಾಕ್ಗಳ ಆವರಣದಲ್ಲಿದ್ದ ನೀರನ್ನು ಹೊರಹಾಕಲಾಗಿದ್ದು, ಆ.21ರ ಗುರುವಾರದಿಂದ ತರಗತಿಗಳು ಆರಂಭವಾಗಲಿವೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ. ನೀರು ಹರಿದುಬಂದಿದ್ದರಿಂದ ಆವರಣದಲ್ಲಿ ತ್ಯಾಜ್ಯಗಳು ತುಂಬಿಹೋಗಿದ್ದವು. ಸದ್ಯ ಆವರಣವನ್ನು ಸ್ವಚ್ಛಗೊಳಿಸಿ ಕ್ರಿಮಿನಾಶಕ ಸಿಂಪಡಿಸಲಾಗುತ್ತಿದೆ.
ಕಾಲೇಜು ಅವರಣದಲ್ಲಿರುವ ವಸತಿ ನಿಲಯದಲ್ಲಿ 200 ವಿದ್ಯಾರ್ಥಿಗಳು ವಾಸವಾಗಿದ್ದರು. ಕಾಲೇಜು ಸಂಪೂರ್ಣ ಜಲಾವೃತಗೊಂಡಿದ್ದರಿಂದ ಆ ವಿದ್ಯಾರ್ಥಿಗಳನ್ನು ಬೋಟ್ಗಳ ಮೂಲಕ ಕಾಲೇಜು ಆವರಣದಿಂದ ಹೊರಗೆ ಕರೆತಂದು ಬನಶಂಕರಿ ರಿಂಗ್ ರಸ್ತೆಯಲ್ಲಿರುವ ಪಿಇಎಸ್ಐಟಿಗೆ ಹಾಸ್ಟೆಲ್ಗೆ ಸ್ಥಳಾಂತರಿಸಲಾಗಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications