ಲಾಂಗ್ ತೋರಿಸಿ ಪೆಟ್ರೋಲ್ ಬಂಕ್ ನಲ್ಲಿ ದರೋಡೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು, ಜು. 03: ಲಾಕ್ ಡೌನ್ ಸಡಿಲವಾಗುತ್ತಿದ್ದಂತೆ ರಾಜಧಾನಿಯಲ್ಲಿ ಪಾತಕಿಗಳು ಬಾಲ ಬಿಚ್ಚುತ್ತಿದ್ದಾರೆ. ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಿರಾತಕರು ಮಚ್ಚು ಲಾಂಗ್ ಝಳಪಿಸಿದ್ದಾರೆ. ಮುಸುಕುದಾರಿಗಳ ಉಪಟಳಕ್ಕೆ ಹೆದರಿ ಪೆಟ್ರೋಲ್ ಬಂಕ್ ಸಿಬ್ಬಂದಿ ಓಡಿ ಹೋಗಿ ಜೀವ ರಕ್ಷಿಸಿಕೊಂಡಿದ್ದಾರೆ. ಅಂದಹಾಗೆ ಬೆಂಗಳೂರಿನ ಹೃದಯ ಭಾಗದಲ್ಲಿ ನಡೆದಿರುವ ಈ ಘೋರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜೀವ ರಕ್ಷಿಸಿಕೊಳ್ಳಲು ಸಿಬ್ಬಂದಿ ಪರದಾಡುವ ಸಿಸಿಕ್ಯಾಮರಾ ದೃಶ್ಯ ವೈರಲ್ ಆಗಿದೆ.
ಮುಸುಕುದಾರಿಗಳಿಂದ ರಾಬರಿ: ಭಾರತಿನಗರದಲ್ಲಿ ವಿನೋದ್ ಮೋಟರ್ಸ್ ಸರ್ವೀಸ್ ಸೆಂಟರ್ ಹೆಸರಿನ ಪೆಟ್ರೋಲ್ ಬಂಕ್ ಇದೆ. ದಿನ ಪೂರ್ತಿ ಕೆಲಸ ಮಾಡುವ ಬಂಕ್ ನಲ್ಲಿ ರಾತ್ರಿ ವೇಳೆ ಬೆರಳೆಣಿಕೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಾರೆ. ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳುವ ಸೋಗಿನಲ್ಲಿ ಬಂದಿದ್ದಾರೆ. ಪೆಟ್ರೋಲ್ ಹಾಕಿಸಿಕೊಂಡವರಂತೆ ನಾಟಕವಾಡಿದ ಕಿರಾತಕರು ಏಕಾ ಏಕಿ ಲಾಂಗ್ ಬೀಸಿ ಹಣ ಕೊಡುವಂತೆ ಬೆದರಿಸಿದ್ದಾರೆ. ಜೀವ ರಕ್ಷಿಸಿಕೊಳ್ಳುವ ಭಯದಲ್ಲಿದ್ದ ಸಿಬ್ಬಂದಿ ಬಳಿಯಿದ್ದ 43 ಸಾವಿರ ರೂ. ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮಾಸ್ಕ್ ಧರಿಸಿವುದು ಕಡ್ಡಾಯಗೊಳಿಸುವ ಕಾರಣ ಮುಸುಕು ಧರಿಸಿದ್ದ ಕಿರಾತಕರ ಬಗ್ಗೆ ಸಿಬ್ಬಂದಿಗೆ ಯಾವುದೇ ಅನುಮಾನ ಬಂದಿಲ್ಲ. ಪ್ರಾಣ ಕಳೆದುಕೊಳ್ಳುತ್ತಿದ್ದ ಸಿಬ್ಬಂದಿ ಕೈಯಲ್ಲಿದ್ದ ಹಣ ದರೋಡೆಕೋರರ ಕೈಗಿಟ್ಟು ಜೀವ ಉಳಿಸಿಕೊಂಡಿದ್ದಾರೆ. ಭಾರತಿನಗರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Recommended Video
ಬೈಕ್ ನಲ್ಲಿಯೇ ಇಬ್ಬರು ಬಂದಿದ್ದರು. ಮುಖ ಕಾಣದಂತೆ ಬಟ್ಟೆ ಧರಿಸಿದ್ದರು. ಮಾಸ್ಕ್ ಕಡ್ಡಾಯವಾಗಿದ್ದರಿಂದ ನಾವು ಅನುಮಾನ ಪಟ್ಟಿರಲಿಲ್ಲ. ಪೆಟ್ರೋಲ್ ಹಾಕಿಸಿಕೊಳ್ಳುವ ಸೋಗಿನಲ್ಲಿ ಪಂಪ್ ಸಮೀಪ ಬಂದವರು ಏಕಾಏಕಿ ಲಾಂಗ್ ಬೀಸಿ ಹಣ ನೀಡಲು ಹೆದರಿಸಿದರು. ಜೀವ ಭಯದಿಂದ ಕೈಯಲ್ಲಿದ್ದ ನಗದು ಹಣ ಕೊಟ್ಟ ಕ್ಷಣವೇ ಅಲ್ಲಿಂದ ಪರಾರಿಯಾದರು ಎಂದು ಪೆಟ್ರೋಲ್ ಬಂಕ್ ಸಿಬ್ಬಂದಿ ಪ್ರಮೋದ್ ಪೊಲೀಸರ ಮಂದೆ ಹೇಳಿಕೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಭಾರತಿನಗರ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications