KEA: ಪಿಜಿ ವೈದ್ಯಕೀಯ ಪ್ರವೇಶ: SC ಅಭ್ಯರ್ಥಿಗಳ ಒಳ ಮೀಸಲಾತಿ ದಾಖಲೆ ಸಲ್ಲಿಕೆ ಕಡ್ಡಾಯ
ಬೆಂಗಳೂರು, ನವೆಂಬರ್ 25: ಪ್ರಸಕ್ತ ಸಾಲಿನ 2025ರ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಸೂಚನೆ ನೀಡಿದೆ. ದಾಖಲೆ ಪರಿಶೀಲನೆ ವೇಳೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ (SCA, SCB, SCC) ದಾಖಲೆ ಸಲ್ಲಿಸಿಲ್ಲ. ಈ ಸಂಬಂಧ ದಾಖಲೆಗಳನ್ನು ಸಲ್ಲಿಸಲು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಹೇಳಿದರು.
ಪಿಜಿ ವೈದ್ಯಕೀಯ ಪ್ರವೇಶದ ಅಭ್ಯರ್ಥಿಗಳು ಇದೇ ನವೆಂಬರ್ 25 ಮತ್ತು 26 ರಂದು ಖುದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಬಂದು ಒಳಮೀಸಲಾತಿಗೆ ಸಂಬಂಧಿಸಿದ ನಿಗದಿತ ದಾಖಲೆ ಸಲ್ಲಿಸಬಹುದು ಎಂದಿದ್ದಾರೆ.

ದಾಖಲೆ ಪರಿಶೀಲನೆ ವೇಳೆಗೆ ಅನೇಕರು ತಹಶೀಲ್ದಾರ್ ಅವರಿಂದ ಒಳ ಮೀಸಲಾತಿ ಕುರಿತ ಪ್ರಮಾಣ ಪತ್ರಗಳನ್ನು ಪಡೆಯಲು ಆಗಿರಲಿಲ್ಲ ಎಂದು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸಿದ ಕಾರಣಕ್ಕೆ ಈ ಅನುಕೂಲ ಮಾಡಲಾಗಿದೆ. ಯಾರೆಲ್ಲ ದಾಖಲೆಗಳನ್ನು ಪರಿಶೀಲನಾ ಅರ್ಜಿ ಜತೆ ಸಲ್ಲಿಸುತ್ತಾರೊ ಅಂತಹವರನ್ನು ಸದರಿ ಪ್ರವರ್ಗದಡಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/karrec23 ಗೆ ಭೇಟಿ ನೀಡಬಹುದೆಂದು ತಿಳಿಸಿದರು.
ರಾಜ್ಯ ಸರ್ಕಾರದ ಆದೇಶದಲ್ಲಿ (25-08-2025) ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಒಳ ಮೀಸಲಾತಿಯನ್ನು ಪ್ರವರ್ಗ-ಎ / ಪ್ರವರ್ಗ-ಬಿ /ಪ್ರವರ್ಗ-ಸಿ ಎಂದು ವರ್ಗೀಕರಣ ಮಾಡಿರುವುದು ಅಭ್ಯರ್ಥಿಗಳಿಗೆ ತಿಳಿದಿರುತ್ತದೆ. ಮೇಲಿನ ಆದೇಶದ ಅನ್ವಯ ಕರ್ನಾಟಕದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಪಿಜಿ ವೈದ್ಯಕೀಯ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಒಳಮೀಸಲಾತಿಯ ವಿವರಗಳನ್ನೊಳಗೊಂಡ ಜಾತಿ ಪ್ರಮಾಣ ಪತ್ರಗಳು ದೊರಕಿರಲಿಲ್ಲ. ಈ ಕಾರಣದಿಂದ ಅಭ್ಯರ್ಥಿಗಳ ಮನವಿ ಮೇರೆಗೆ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿಯ ಅಡಿಯಲ್ಲಿ ವಿಂಗಡಿಸಿರುವ ಯಾವ ಪ್ರವರ್ಗದ ಸಮುದಾಯಕ್ಕೆ ಸೇರಿರುತ್ತೀರೆಂದು (SCA / SCB / SCC) ಅಭ್ಯರ್ಥಿಗಳಿಂದ ವಿವರ ಪಡೆದು ತಾತ್ಕಾಲಿಕವಾಗಿ ಮೊದಲನೇ ಹಾಗೂ ಎರಡನೇ ಅಣುಕು ಸೀಟು ಹಂಚಿಕೆಯಲ್ಲಿ ಪರಿಗಣಿಸಲಾಗಿರುತ್ತದೆ.
ಸದ್ಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್ ಡಿ ಸಂಖ್ಯೆ ಮುದ್ರಿತವಾಗಿರುವ ಒಳ ಮೀಸಲಾತಿ ವಿವರ ಒಳಗೊಂಡಿರುವ ಜಾತಿ ಪ್ರಮಾಣ ಪತ್ರವನ್ನು (SCA / SCB / SCC) ಆಯಾ ತಹಶೀಲ್ದಾರ್ ರವರಿಂದ ಪಡೆಡಬೇಕು. ಅದನ್ನು ನವೆಂಬರ್ 25 ಅಥವಾ 26ರಂದು ಕಚೇರಿಗೆ ಬಂದು ಸಲ್ಲಿಸಬೇಕು.
ಅರ್ಜಿಯಲ್ಲಿ ಪರಿಶಿಷ್ಟ ಜಾತಿ ಮೀಸಲಾತಿ ನಮೂದಿಸಿರುವ ಎಲ್ಲಾ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಸಂಬಂಧಿಸಿದ ತಹಶೀಲ್ದಾರ್ ರವರಿಂದ ಪಡೆದ ಮೂಲ ಜಾತಿ (SCA / SCB / SCC) ಪ್ರಮಾಣ ಪತ್ರ ಗಳನ್ನು ನವೆಂಬರ್ ಸಂಜೆ 5.30 ರೊಳಗೆ ಸಲ್ಲಿಸದಿದ್ದಲ್ಲಿ ಅಭ್ಯರ್ಥಿಗಳು ದಾಖಲೆ ಪರಿಶೀಲನೆ ಸಂದರ್ಭದಲ್ಲಿ ತಿಳಿಸಿದ್ದ ಪ್ರವರ್ಗವನ್ನು ಪರಿಗಣಿಸಿ ಸೀಟು ಹಂಚಿಕೆ ಮಾಡಲಾಗುವುದು. ಸೀಟು ಹಂಚಿಕೆಯಾದ ಮೇಲೆ ಮೂಲ ಜಾತಿ ಪ್ರಮಾಣ ಪತ್ರ ಹಾಜರುಪಡಿಸಿದಲ್ಲಿ ಮಾತ್ರ ಪ್ರವೇಶ ಪತ್ರ ನೀಡಲಾಗುವುದು. ಈ ಹಂತದಲ್ಲಿ ಯಾವುದೇ ಪ್ರವರ್ಗ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಪ್ರಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications