ಫೋನ್ ಕದ್ದಾಲಿಕೆ: ಎಸಿಪಿ ರಾಮಚಂದ್ರಪ್ಪ ತನಿಖೆ ನಡೆಸಿದ ಸಿಬಿಐ
ಬೆಂಗಳೂರು, ಸೆಪ್ಟೆಂಬರ್ 29: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಎಸಿಪಿ ರಾಮಚಂದ್ರಪ್ಪ ಅವರ ವಿಚಾರಣೆ ನಡೆಸಿದ್ದಾರೆ.
ಈಗಾಗಲೇ ಫೋನ್ ಕದ್ದಾಲಿಕೆ ಕುರಿತು ಸಾಕಷ್ಟು ಸಾಕಷ್ಟು ವಿವಾದಗಳು ಸೃಷ್ಟಿಯಾಗಿವೆ. ಹಾಗೆಯೇ ಫೋನ್ ಕದ್ದಾಲಿಕೆ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.
ಕುಮಾರಕೃಪಾ ಅತಿಥಿಗೃಹದ ಸಿಬಿಐ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ಎಸಿಪಿ ರಾಮಚಂದ್ರಪ್ಪ ವಿಚಾರಣೆಗೆ ಹಾಜರಾಗಿದ್ದರು. ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಎಸಿಪಿ ರಾಮಚಂದ್ರಪ್ಪನವರಿಗೆ ಸಮನ್ಸ್ ನೀಡಿದ್ದರು.

ಫೋನ್ ಕದ್ದಾಲಿಕೆ ನಡೆದ ವೇಳೆ ಸಿಸಿಬಿ ಟೆಕ್ನಿಕಲ್ ಸೆಲ್ ನ ಎಸಿಪಿಯಾಗಿದ್ದ ರಾಮಚಂದ್ರಪ್ಪನವರಿಗೂ ಸಿಬಿಐ ತನಿಖೆಯ ಬಿಸಿ ತಟ್ಟಿದೆ. ಇದೀಗ ಅವರ ವಿಚಾರಣೆ ಮುಗಿದಿದ್ದು, ಕೆಲವು ದಾಖಲೆಗಳ ಸಮೇತ ವಿಚಾರಣೆ ನಡೆಸಲಾಗಿದೆ. ಮತ್ತೆ ವಿಚಾರಣೆಗೆ ಕರೆದಾಗ ಬರುವಂತೆ ಸಿಬಿಐ ಅಧಿಕಾರಿಗಳು ಸೂಚಿಸಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಈಗಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರ ಮನೆಯ ಮೇಲೂ ಸಿಬಿಐ ದಾಳಿ ನಡೆಸಲಾಗಿತ್ತು. 3 ದಿನಗಳ ಕಾಲ ಅಲೋಕ್ ಕುಮಾರ್ ಅವರ ವಿಚಾರಣೆ ನಡೆಸಲಾಗಿತ್ತು.
ಮೂರು ದಿನಗಳಿಂದ ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಅವರ ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದರು.
ಅಲೋಕ್ ಕುಮಾರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಾಗ ಬಿಜೆಪಿ ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸಿತ್ತು.
ಈ ಹಿನ್ನೆಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಕೆಲವು ರಾಜಕಾರಣಿಗಳು, ಮಠಾಧೀಶರು, ರಾಜಕಾರಣಿಗಳ ಆಪ್ತರ ಫೋನ್ ಕದ್ದಾಲಿಕೆ ಮಾಡಿಸಿತ್ತು ಎಂಬ ಆರೋಪ ಕೇಳಿಬಂದಿತ್ತು.
-
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
ಕರ್ನಾಟಕದ 4 ರೈಲು ನಿಲ್ದಾಣ ಸೇರಿ 76 ಕಡೆ ಪ್ರಯಾಣಿಕರ ನಿಲುಗಡೆ ತಾಣ ನಿರ್ಮಾಣ, ಏನಿದರ ಪ್ರಯೋಜನ? -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್












Click it and Unblock the Notifications