ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ, ಮೇರಿ ಫೋಟೋ: ಹಿಂದೂ ವಿರೋಧಿ ನಡೆ ಎಂದ ಬಿಜೆಪಿ
ಶಿಕ್ಷಣ ಇಲಾಖೆಯು ಕ್ರೀಡಾ ಕೂಟದ ಪ್ರಶಸ್ತಿ ಪತ್ರದಲ್ಲಿ ಕ್ರೈಸ್ತ ಧರ್ಮದ ಆಧಾರಕರ ಚಿತ್ರವನ್ನು ಬಳಸುವ ಮೂಲಕ ಇದೀಗ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಈಚೆಗಷ್ಟೇ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಕಾಲೇಜುಗಳ ಮುಖ್ಯದ್ವಾರದಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎನ್ನುವ ಬದಲಾಗಿ, ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನೆ ಮಾಡಿ ಎಂಬರ್ಥದಲ್ಲಿ ಸಾಲುಗಳನ್ನು ಬರೆಯಲಾಗಿತ್ತು. ಈ ಬದಲಾವಣೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಮಕ್ಕಳ ಮನಸ್ಸಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇಲ್ಲದ ವಿಚಾರಗಳನ್ನು ತುಂಬುತ್ತಿದೆ ಎಂದು ವಿರೋಧ ಪಕ್ಷವಾದ ಬಿಜೆಪಿ ಸಹ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಚಾಮರಾಜನಗರದಲ್ಲಿ ನಡೆದಿರುವ ಕ್ರೀಡಾಕೂಟದಲ್ಲಿ ಕ್ರೈಸ್ತ ಧರ್ಮದ ಯೇಸುಕ್ರಿಸ್ತ ಹಾಗೂ ಮೇರಿ ದೇವರ ಚಿತ್ರವಿರುವ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಪ್ರಶಸ್ತಿ ಪತ್ರದ ಎಡಭಾಗದಲ್ಲಿ ಹಾಗೂ ಬಲಭಾಗದಲ್ಲಿ ಕ್ರೈಸ್ತ ಧರ್ಮದ ಆರಾಧಕರ ಚಿತ್ರಗಳನ್ನು ಮುದ್ರಿಸಲಾಗಿದೆ.

ಏನಿದು ವಿವಾದ ?
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2024-2025 ಈಚೆಗೆ ನಡೆಯಿತು. ಈ ಪ್ರಶಸ್ತಿ ಪತ್ರದಲ್ಲಿ ಕ್ರೈಸ್ತ ಧರ್ಮದ ದೇವರ ಚಿತ್ರ ಇರುವ ಪ್ರಶಸ್ತಿ ಪತ್ರಗಳನ್ನು ಕ್ರೀಡಾ ಕೂಟದ ವಿಜೇತರಿಗೆ ವಿತರಣೆ ಮಾಡಲಾಗಿದ್ದು, ತೀವ್ರ ವಿರೋಧ ವ್ಯಕ್ತವಾಗದೆ.
ಚಾಮರಾಜನಗರ ಜಿಲ್ಲೆಯಲ್ಲಿ ಈಚೆಗೆ ನಡೆದಿರುವ ಹನೂರು ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು), ಕ್ರಿಸ್ತರಾಜ ಪದವಿ ಪೂರ್ವ ಕಾಲೇಜು ಹನೂರು ಹಾಗೂ ಸೆಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಮಾರ್ಟಳ್ಳಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಆದರೆ, ಕ್ರೀಡಾ ಕೂಟದ ವಿಜೇತರಿಗೆ ಪ್ರಶಸ್ತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕ್ರೈಸ್ತ ಧರ್ಮದ ಆರಾಧಕರ ಚಿತ್ರಗಳನ್ನು ಮುದ್ರಿಸಿ ವಿತರಣೆ ಮಾಡಲಾಗಿದೆ.
ಈ ಪ್ರಶಸ್ತಿ ಪತ್ರಗಳಿಗೆ ಖುದ್ದು ಚಾಮರಾಜನಗರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತಾಲ್ಲೂಕು ಮಟ್ಟದ ಕ್ರೀಡಾ ಕೂಟದ ಆಯೋಜಕರು ಸಹ ಸಹಿ ಮಾಡಿದ್ದಾರೆ.
ಇದೇನಾ ಕಾಂಗ್ರೆಸ್ ಜಾತ್ಯತೀತತೆ: ಬಿಜೆಪಿ ಪ್ರಶ್ನೆ
ಇದೇನಾ ಕಾಂಗ್ರೆಸ್ನ ಜಾತ್ಯಾತೀತತೆ ಎಂದು ವಿರೋಧ ಪಕ್ಷವಾದ ಬಿಜೆಪಿ ಪ್ರಶ್ನೆ ಮಾಡಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಶಾಲೆಗಳ ಮುಖ್ಯದ್ವಾರದಲ್ಲಿ "ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ" ಎಂಬ ಸಾಲು ಬರೆಯುವುದು ಕೋಮುವಾದ ಎಂದು ಕಾಂಗ್ರೆಸ್ ವಾದಿಸಿತ್ತು.
ಶಾಲಾ ಕಾಲೇಜುಗಳ ಆವರಣದಲ್ಲಿ ಗಣೇಶೋತ್ಸವ, ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸುವುದು ಕೋಮುವಾದ. ಆದರೆ ಶಿಕ್ಷಣ ಇಲಾಖೆ ನೀಡುವ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗು ಮೇರಿ ಫೋಟೋ ಹಾಕುವುದು ಮಾತ್ರ ಜಾತ್ಯತೀತವೇ ಎಂದು ಪ್ರಶ್ನೆ ಮಾಡಿದ್ದಾರೆ.
ಇದು ಕಾಂಗ್ರೆಸ್ ಸರ್ಕಾರದ ನಿಜವಾದ ಜಾತ್ಯತೀತತೆ. ಕಾಂಗ್ರೆಸ್ ಪಕ್ಷಕ್ಕೆ ಜಾತ್ಯತೀತತೆ ಎಂಬುದು ಹಿಂದೂ ಧರ್ಮವನ್ನ ವಿರೋಧಿಸಲು, ಹಿಂದೂಗಳನ್ನ ದ್ವೇಷಿಸಲು ಇರುವ ಒಂದು ಮುಖವಾಡವೇ ಹೊರತು, ಮತ್ತೇನು ಅಲ್ಲ ಎಂದು ಹೇಳಿದ್ದಾರೆ. ಈ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡಿಗರು ಶೀಘ್ರದಲ್ಲೆ ತಕ್ಕ ಪಾಠ ಕಲಿಸುತ್ತಾರೆ ಎಂದೂ ಅವರು ಎಚ್ಚರಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications