'ಮುಷ್ಕರ ನಿರತ ವೈದ್ಯರಿಗೆ ಛೀಮಾರಿ ಹಾಕಿ'
ಬೆಳಗಾವಿ, ನವೆಂಬರ್ 15 : ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ ತಿದ್ದುಪಡಿ ಮಂಡನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಖಾಸಗಿ ವೈದ್ಯರಿಂದ ರಾಜ್ಯಾದ್ಯಂತ ರೋಗಿಗಳು ತೊಂದರೆ ಪಡುವಂತಾಗಿದೆ. ಆದರೆ ಈಗ ಬಂದಿರುವ ಸುದ್ದಿಯೆಂದರೆ ಪ್ರತಿಭಟನೆ ನಡೆಸುತ್ತಿರುವ ವೈದ್ಯರ ವಿರುದ್ಧವೇ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.
ವಕೀಲ ಅಮೃತೇಶ್ ಎಂಬುವರು ಖಾಸಗಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೂಡಿದ್ದಾರೆ. ನೆಲಮಂಗಲದ ಆದಿನಾರಾಯಣ ಎಂಬ ಸಾರ್ವಜನಿಕರೂ ಕೂಡ ಇಂದು (ನವೆಂಬರ್ 15) ಸಾರ್ವಜನಿಕ ಹಿತಾಸಕ್ತಿ ಹಾಕಿರುವುದು ವರದಿಯಾಗಿದ್ದು ಮುಷ್ಕರ ಮಾಡುತ್ತಿರುವ ವೈದ್ಯರು ಮತ್ತು ಸರ್ಕಾರಕ್ಕೆ ಛೀಮಾರಿ ಹಾಕಲು ಅರ್ಜಿಯಲ್ಲಿ ಕೋರಲಾಗಿದೆ.
ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ವೈದ್ಯರ ಪ್ರತಿಭಟನೆಯಿಂದಾಗಿ ರೋಗಿಗಳು ಸಾವನ್ನಪ್ಪುತ್ತಿದ್ದಾರೆ, ಈ ವರೆಗೆ ರಾಜ್ಯದ ವಿವಿದೆಡೆ 15 ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ಅಸುನೀಗಿದ್ದಾರೆ. ವೈದ್ಯರು ಪ್ರತಿಭಟನೆ ಮುಂದುವರೆಸಿದರೆ ಪರಿಸ್ಥಿತಿ ಇನ್ನೂ ಹದಗೆಡಲಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಆದಿನಾರಾಯಣ ಉಲ್ಲೇಖ ಮಾಡಿದ್ದಾರೆ.
ಕರ್ತವ್ಯಕ್ಕೆ ಸೇರುವಾಗ ಜನಗಳ ಸೇವೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದ ವೈದ್ಯರು ಹೀಗೆ ಜವಾಬ್ದಾರಿ ಹೀನವಾಗಿ ವರ್ತಿಸಿದರೆ ಹೇಗೆ ಎಂದು ಆದಿನಾರಾಯಣ ಪ್ರಶ್ನೆ ಮಾಡಿದ್ದಾರೆ.
ವಿರೋಧ ಪಕ್ಷಗಳು, ಆಸ್ಪತ್ರೆಗಳನ್ನು ನಡೆಸುವ ಕಾರ್ಪೊರೇಟ್ ಸಂಸ್ಥೆಗಳ ಬೆಂಬಲದಿಂದಾಗಿ ಜವಾಬ್ದಾರಿ ಮರೆತು ಪ್ರತಿಭಟನೆ ಮುಂದುವರೆಸುತ್ತಿರುವ ವೈದ್ಯರ ಮಂದೆ ವಿರುದ್ಧ ಸಾರ್ವಜನಿಕರೊಬ್ಬರು ತಿರುಗಿ ಬಿದ್ದಿದ್ದಾರೆ. ಬಹುತೇಕ ಸಾರ್ವನಿಕರೂ ವೈದ್ಯರ ಪ್ರತಿಭಟನೆ ವಿರುದ್ಧ ರೋಸಿಹೋಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈದ್ಯರ ವರ್ತನೆ ಬಗ್ಗೆ ಟೀಕೆಗಳು ನಿಧಾನವಾಗಿ ಹೆಚ್ಚಾಗುತ್ತಿವೆ. ಈ ಮಧ್ಯೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿರುವುದು ಆಶಾದಯಕ ಬೆಳವಣಿಗೆ ಎನ್ನಬಹುದಾಗಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ಸರ್ಕಾರ ವೈದ್ಯರ ಮಧ್ಯೆ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಿ ರಾಜ್ಯದ ಜನರ ಸಮಸ್ಯೆ ಇತ್ಯರ್ಥ ಪಡಿಸುತ್ತದೆಯೆ ಕಾದು ನೋಡಬೇಕು. ವೈದ್ಯರ ಮುಷ್ಕರದಿಂದ ಹೈರಾಣಾಗುತ್ತಿರುವ ಸಾರ್ವಜನಿಕರದ್ದಂತೂ ಇದೇ ಆಶಯ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications