ಮಲ್ಟಿಪ್ಲೆಕ್ಸ್ ಗಳಿಗೆ ಹೊರಗಿನ ಆಹಾರ ಪದಾರ್ಥ; ಹೈ ಕೋರ್ಟ್ ಗೆ ಪಿಐಎಲ್
ಬೆಂಗಳೂರು, ಸೆಪ್ಟೆಂಬರ್ 26: ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್ ಗಳಲ್ಲಿ ಆಹಾರ ಪದಾರ್ಥ ಹಾಗೂ ಪಾನೀಯಗಳನ್ನುಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಹಾಗೂ ಹೊರಗಿನ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಲು ಅನುಮತಿ ನೀಡದಿರುವ ವಿರುದ್ಧ ಕರ್ನಾಟಕ ಹೈ ಕೋರ್ಟ್ ನಲ್ಲಿ ನೆಲಮಂಗಲದ ಆದಿನಾರಾಯಣ್ ಶೆಟ್ಟಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಇರುವ ಶಾಪಿಂಗ್ ಮಾಲ್/ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್ ಗಳಲ್ಲಿ ಆಹಾರ ಪದಾರ್ಥ ಹಾಗೂ ಪಾನೀಯಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಜತೆಗೆ ತಮ್ಮದೇ ಆಹಾರ ಪದಾರ್ಥವನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡುತ್ತಿಲ್ಲ. ಇದರಿಂದ ಮುಖ್ಯವಾಗಿ ಹಿರಿಯರಿಗೆ ಹಾಗೂ ಮಕ್ಕಳಿಗೆ ಸಮಸ್ಯೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಮಲ್ಟಿಪ್ಲೆಕ್ಸ್ ಗಳಲ್ಲಿ ಪಾಪ್ ಕಾರ್ನ್ ಅನ್ನು ಮುನ್ನೂರಕ್ಕೂ ಹೆಚ್ಚು ಮೊತ್ತಕ್ಕೆ, ಇನ್ನು ಕೂಲ್ ಡ್ರಿಂಕ್ಸ್ ಅನ್ನು ಇನ್ನೂರೈವತ್ತಕ್ಕೂ ಹೆಚ್ಚು ದರಕ್ಕೆ ಮಾರಲಾಗುತ್ತದೆ. ಇಷ್ಟು ಮೊತ್ತ ಕೊಟ್ಟು ಸಾಮಾನ್ಯ ವ್ಯಕ್ತಿಗೆ ಖರೀದಿಸಲು ಸಾಧ್ಯವೇ? ಜತೆಗೆ ಈ ಆಹಾರ ಪದಾರ್ಥಗಳು-ಪಾನೀಯ ಯುವ ಸಮುದಾಯದ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂದಿದ್ದಾರೆ.

ಮೂರು ಗಂಟೆ ಕಾಲ ಒಂದು ಸಿನಿಮಾ ನೋಡಲು ತೆರಳುವಾಗ ಹೊರಗಿನ ಆಹಾರ ತರದಿರುವಂತೆ ನಿಯಮ ಮಾಡುವುದು ಹಾಗೂ ಅತಿ ಹೆಚ್ಚಿನ ದರ ವಿಧಿಸಿದ್ದನ್ನೇ ಖರೀದಿಸಬೇಕು ಎಂದು ತಾಕೀತು ಮಾಡುವುದು ಸರಿಯಲ್ಲ. ಇನ್ನು ಅನಾರೋಗ್ಯ ಸಮಸ್ಯೆ ಇರುವ ಕೆಲವರಿಗೆ ಮನೆಯ ಆಹಾರವನ್ನೇ ಸೇವಿಸಬೇಕು ಎಂಬ ವೈದ್ಯಕೀಯ ಸಲಹೆ ಇರುತ್ತದೆ. ಮಕ್ಕಳಿಗೆ ಮನೆಯಿಂದ ಹಾಲು ತರಬೇಕಾಗುತ್ತದೆ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು ಎಂದು ಹೇಳಿದ್ದಾರೆ.
ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರನ್ನು ವಿಶೇಷವಾಗಿ ಗಮನದಲ್ಲಿಟ್ಟುಕೊಂಡು, ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್ ಗಳಿಗೆ ಹೊರಗಿನ ಆಹಾರ ಪದಾರ್ಥ ತೆಗೆದುಕೊಂಡು ಹೋಗಲು ಅನುಕೂಲ ಆಗುವಂತೆ ಕೋರ್ಟ್ ನಿಂದ ಸೂಚನೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications